ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ (Bus) ಮಾಸ್ಕ್ (Mask) ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.
ಕೇರಳದಲ್ಲಿ (Kerala) ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್ಆರ್ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿಯಲ್ಲಿ (BMTC) ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
ವೈದ್ಯರ ನಡುವಿನ ಕಿರಿಕ್ನಿಂದ ರಜೆ ಹಾಕಿ ಹೋದ ಪ್ರಸೂತಿ ತಜ್ಞೆ – ಗರ್ಭಿಣಿಯರ ಪರದಾಟ
ಯಾದಗಿರಿ: ವೈದ್ಯರ (Doctor) ನಡುವೆ ಜಗಳ ನಡೆದು ಕಳೆದ ಒಂದು ವಾರದಿಂದ ಪ್ರಸೂತಿ ತಜ್ಞೆ ರಜೆ ಹಾಕಿ ಹೋಗಿದ್ದು, ಗರ್ಭಿಣಿಯರು ಸಮಸ್ಯೆ ಎದುರಿಸುತ್ತಿರುವ ಘಟನೆ ಶಹಾಪುರ (Shahapur) ತಾಲೂಕು ಆಸ್ಪತ್ರೆಯಲ್ಲಿ (Hospital) ನಡೆದಿದೆ.
ಹತ್ತಾರು ಹಳ್ಳಿಗಳ ಜನರ ಪಾಲಿಗೆ ಈ ಆಸ್ಪತ್ರೆಯೇ ಸಂಜೀವಿನಿಯಾಗಿದ್ದು, ವೈದ್ಯರ ಕೊರತೆಯಿಂದ ರೋಗಿಗಳು ನಿತ್ಯವೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವೈದ್ಯರು ಇಲ್ಲದ ಕಾರಣ ರೋಗಿಗಳು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ ಹೋಗುತ್ತಿದ್ದಾರೆ. ಇತ್ತೀಚೆಗೆ ವೈದ್ಯರ ನಡುವೆ ಗಲಾಟೆ ಆಗಿದ್ದು, ಇದೇ ವಿಚಾರಕ್ಕೆ ಪ್ರಸೂತಿ ತಜ್ಞ ವೈದ್ಯೆ ಕಳೆದ ಒಂದು ವಾರದಿಂದ ರಜೆ ಹಾಕಿಕೊಂಡು ಹೋಗಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ.
ಪ್ರಸೂತಿ ತಜ್ಞೆ ಡಾ.ಸರೋಜಾ ಪಾಟೀಲ್ ಮತ್ತು ಇಲ್ಲಿನ ಕೆಲವು ವೈದ್ಯರ ನಡುವೆ ಹೊಂದಾಣಿಕೆಯ ಕೊರತೆಯಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ವೈದ್ಯೆ ರಜೆಯ ಮೇಲೆ ತೆರಳಿದ್ದಾರೆ. ಇದರಿಂದ ಹೆರಿಗೆ ಕೆಲಸವನ್ನ ನರ್ಸ್ಗಳಿಗೆ ನೀಡಲಾಗಿದ್ದು, ಸಾಮಾನ್ಯ ಹೆರಿಗೆಗಳನ್ನು ನರ್ಸ್ಗಳೆ ಮಾಡುತ್ತಾರೆ. ಸಿಜೇರಿಯನ್ ಕೇಸ್ಗಳು ಬಂದಾಗ ನರ್ಸ್ಗಳ ಕೈಯಿಂದ ಆಗುವುದಿಲ್ಲ. ಇದರಿಂದ ಯಾದಗಿರಿ ಜಿಲ್ಲಾಸ್ಪತ್ರೆಗೆ ವೈದ್ಯರು ಗರ್ಭಿಣಿಯರನ್ನು ಕಳಿಸುತ್ತಿದ್ದಾರೆ.
ಆಸ್ಪತ್ರೆಗೆ ಕಳೆದ ಒಂದು ವಾರದಲ್ಲೇ ಸುಮಾರು 90 ಕ್ಕೂ ಅಧಿಕ ಗರ್ಭಿಣಿಯರು ಹೆರಿಗೆಗಾಗಿ ಬಂದಿದ್ದಾರೆ. ಇದರಲ್ಲಿ 60 ಜನರಿಗೆ ನಾರ್ಮಲ್ ಹೆರಿಗೆಯಾಗಿದ್ದು, 13 ಮಹಿಳೆಯರಿಗೆ ಸಿಜೇರಿಯನ್ಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ಸ್ವಕ್ಷೇತ್ರದಲ್ಲೇ ಈ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿನ ಜನ ಹೆಚ್ಚಿನ ವೈದ್ಯರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.