ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಟಿ ಅಧಿಕಾರಿಗಳ ಭರ್ಜರಿ ದಾಳಿ ; ರೂಂನಲ್ಲಿ ಮಂಚದಡಿ 23 ಬಾಕ್ಸ್ ನಲ್ಲಿ ಕಂತೆ ಕಂತೆ ಹಣ ಪತ್ತೆ...!

Twitter
Facebook
LinkedIn
WhatsApp
ಐಟಿ ಅಧಿಕಾರಿಗಳ ಭರ್ಜರಿ ದಾಳಿ ; ರೂಂನಲ್ಲಿ ಮಂಚದಡಿ 23 ಬಾಕ್ಸ್ ನಲ್ಲಿ ಕಂತೆ ಕಂತೆ ಹಣ ಪತ್ತೆ...!

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಸಂಜೆ ನಂತರ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ (IT Raid) ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಬಚ್ಚಿಟ್ಟಿದ್ದ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಆತ್ಮಾನಂದ ಕಾಲೋನಿಯ ಒಂದು ಫ್ಲಾಟ್​ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಂಚದಡಿ ಪರಿಶೀಲನೆ ನಡೆಸಿದಾಗ ಕೋಟ್ಯಂತರ ರೂಪಾಯಿ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಮಾಜಿ ಕಾರ್ಪೋರೇಟರ್​ ಮನೆ ಬಾಗಿಲು ತಟ್ಟಿದ್ದಾರೆ.

ಗಣೇಶ ಬ್ಲಾಕ್​ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ, ಫ್ಲಾಟ್​ನಲ್ಲಿ ಪತ್ತೆಯಾದ ಕೋಟ್ಯಂತರ ರೂಪಾಯಿ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಸಲಿಗೆ ಹಣ ಪತ್ತೆಯಾದ ಫ್ಲ್ಯಾಟ್ ಯಾರದ್ದು? ಗುಟ್ಟು ಬಿಟ್ಟು ಕೊಡದ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಬಳಕೆ ಮಾಡದ ರೂಮ್​ನಲ್ಲಿ ಕಂತೆ ಕಂತೆ ನೋಟುಗಳು

ಫ್ಲಾಟ್​ನ ಬೆಡ್ ರೂಮ್​ನ ರೂಮ್​ವೊಂದರ ಮಂಚದ ಅಡಿಯಲ್ಲಿ ಹಣ ಬಚ್ಚಿಟ್ಟ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ರೂಮ್​ ಅನ್ನು ಬಳಸುತ್ತಾ ಇರಲಿಲ್ಲ, ಬೀಗ ಹಾಕಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಟ್ರಾಕ್ಟರ್ ಆಗಿರುವ ಆರ್.ಅಂಬಿಕಾಪತಿ ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದರು. ಫ್ಲಾಟ್​ನಲ್ಲಿ ಸಿಕ್ಕ ಹಣದ ಹಿಂದೆ ಐಟಿಗೆ ದೊಡ್ಡ ಅನುಮಾನ ವ್ಯಕ್ತವಾಗಿದೆ. ಹಣ ಒಂದೇ ಕಡೆ ಸಂಗ್ರಹಣೆ ಹಿಂದಿದೆಯಾ ಚುನಾವಣೆ ತಯಾರಿ? ಪಂಚರಾಜ್ಯಗಳ ಚುನಾವಣೆಗಾಗಿ ಸಂಗ್ರಹಿಸಲಾಗಿತ್ತೇ ಈ ಹಣ ಎಂಬ ಅನುಮಾನ ಕಾಡಿದೆ.

40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಅಂಬಿಕಾಪತಿ

ಬಿಜೆಪಿ ಸರ್ಕಾರದ ವಿರುದ್ಧ ಆರ್​ ಅಂಬಿಕಾಪತಿ ಅವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.40, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಹೇಳಿ ಕೆಲವು ರಾಜಕೀಯ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದರು. ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.

ಅಂಬಿಕಾಪತಿಯ ಪತ್ನಿ ಅಶ್ವತಮ್ಮ ಅವರು ಮಾಜಿ ಶಾಸಕರೊಬ್ಬರ ಸಂಬಂಧಿ ಎನ್ನಲಾಗುತ್ತಿದೆ. ಇವರು 2001ರ ಕಾವಲ್ ಬೈರಸಂದ್ರ ವಾರ್ಡ್​ನ ಕಾರ್ಪೊರೇಟರ್ ಆಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ