ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಪಲ್ಟಿ-ತಪ್ಪಿದ ಬಾರಿ ಅನಾಹುತ

Twitter
Facebook
LinkedIn
WhatsApp
photo 1616353071588 708dcff912e2 24

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಮೆಟ್ರೋ (Namma Metro) ಮಹಾ ದುರಂತವೊಂದು ತಪ್ಪಿದೆ. ಕೆಲವೇ ಕೆಲವು ಸೆಕೆಂಡ್ ಗಳಲ್ಲಿ ವಾಹನ ಸವಾರರು ಬಚಾವ್ ಆಗಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ (BMRCL) ಮೆಟ್ರೋ ಪಿಲ್ಲರ್ (Metro Piller) ದುರಂತಕ್ಕೆ ಈ ಹಿಂದೆ ತಾಯಿ-ಮಗು ಬಲಿಯಾಗಿದ್ರು. ಈ ಕರಾಳ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಆದರೆ ಅದೃಷ್ಟವಶಾತ್ ಯಾವ್ದೇ ಪ್ರಾಣಹಾನಿಯಾಗಿಲ್ಲ. ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ (Silk Board Junction) ಬಳಿ ಮೆಟ್ರೋ ಪಿಲ್ಲರ್ ಅಳವಡಿಕೆಗೆ ಮಣ್ಣು ತೆಗೆಯುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕ್ರೇನ್ ವಾಹನವೊಂದು ಮಣ್ಣನ್ನು ಹೊರ ತೆಗೆಯುತ್ತಿತ್ತು. ಆಗ ಕ್ರೇನ್ ವಾಹನನಕ್ಕೆ ಓವರ್ ಲೋಡ್ ಆಗಿ, ಕ್ರೇನ್ (Craine) ವಾಹನವೇ ಸರ್ವಿಸ್ ರಸ್ತೆಗ ಪಲ್ಟಿಯಾಗಿ, ಪಕ್ಕದಲ್ಲಿದ್ದ ರಾಜಕಾಲುವೆಯ ತಡೆಗೊಡೆಗೆ ಅಂಟಿಕೊಂಡು ನಿಂತಿದೆ.

ಘಟನಾ ಸ್ಥಳದಲ್ಲಿ ಕ್ರೇನ್ ತೆರವು ಕಾರ್ಯಾಚರಣೆ ಹಿನ್ನಲೆ ಬೊಮ್ಮನಹಳ್ಳಿಯಿಂದ ಮಡಿವಾಳ ಕಡೆ ಬರುವ ರಸ್ತೆಯನ್ನ ಬಂದ್ ಮಾಡಲಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನೂ ಮೆಟ್ರೋ ಕಾಮಗಾರಿಗಳು ನಡೆಯುವ ಜಾಗಗಳಲ್ಲಿ ಯಾವ್ದೇ ಸುರಕ್ಷತಾ ಕ್ರಮಗಳಿಲ್ಲ. ಜೀವಕ್ಕೆ ಏನಾದ್ರೂ ಹಾನಿಯಾದ್ರೆ ಯಾರು ಹೊಣೆ ಅಂತ ವಾಹನ ಸವಾರರು ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದ್ರು.

 
ಮಾಧ್ಯಮಗಳ ವರದಿಗಾರಿಕೆ ವೇಳೆ ಅಲ್ಲಿನ ಸಿಬ್ಬಂದಿ ಅಡ್ಡಿಪಡಿಸಿದ್ರು. ಕ್ಯಾಮೆರಾ ಆನ್ ಮಾಡ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ರು. ಸದ್ಯ ಮೆಟ್ರೋ ಕಾಮಗಾರಿ ವೇಳೆ ನಡೆದ ಸಾಲು ಸಾಲು ಘಟನೆಗಳಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಸುರಕ್ಷತಾ ಕ್ರಮಗಳಿಲ್ಲದೇ ಕೆಲಸ ಮಾಡಿದ್ರೆ ಅಮಾಯಕರು ಬಲಿಯಾಗಬೇಕಾ ಅಂತ ಜನ ಪ್ರಶ್ನೆ ಮಾಡ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ