ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪ್ರಾಪ್ತ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡ್ತಿದ್ದ ಯುವಕನ ಬಂಧನ!

Twitter
Facebook
LinkedIn
WhatsApp
ಅಪ್ರಾಪ್ತ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡ್ತಿದ್ದ ಯುವಕನ ಬಂಧನ!

ಕೊಪ್ಪಳ, (ಸೆಪ್ಟೆಂಬರ್, 04): ಅಪ್ರಾಪ್ತ ಬಾಲಕಿಯ ಬೆತ್ತಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್(blackmailing) ಮಾಡುತ್ತಿದ್ದ ಯುವಕನೋರ್ವನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ(Koppal) ಜಿಲ್ಲೆಯ ಗಂಗಾವತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು ಪ್ರೀತಿ-ಪ್ರೇಮ (Love) ನಾಟಕವಾಡಿ ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ರೆಕಾರ್ಡ್​ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದ ಮುಸ್ತಾಫಾ ಎನ್ನುವಾತನ್ನನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.

ಇನ್ಸ್ಟಾಗ್ರಾಮ್ ಮೂಲಕ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಬಳಿಕ ಪ್ರೀತಿ ಪ್ರೇಮ ನಾಟಕವಾಡಿದ್ದಾನೆ. ಹೀಗೆ ಒಂದು ದಿನ ಪ್ರೀತಿ ನಾಟಕದೊಂದಿಗೆ ನಂಬಿಸಿ ವಿಡಿಯೋ ಕಾಲ್​ನಲ್ಲಿ ವಿದ್ಯಾರ್ಥಿನಿಯನ್ನು ಬೆತ್ತಲಾಗುವಂತೆ ಹೇಳಿ ಅದನ್ನು ಸ್ಕ್ರೀನ್ ರೆಕಾರ್ಡ್​ ಮಾಡಿಕೊಂಡಿದ್ದಾನೆ. ನಂತರ ಹೀಗೆ ಪ್ರತಿ ಬಾರಿಯೂ ಸಹ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದ. ಆದ್ರೆ, ಇದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದಾಗ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್​ ಮೇಲ್​ ಮಾಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತು ವಿದ್ಯಾರ್ಥಿನಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ದೂರಿನಂತೆ ಪೊಲೀಸರು ಇದೀಗ ಆರೋಪಿ ಮುಸ್ತಾಫನನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿಸಿದ್ದಾರೆ.

ತಂದೆಗೆ ಹುಷಾರಿಲ್ಲದ ಕಾರಣ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿನಿ, ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಅಲ್ಲಿ ಲ್ಯಾಬ್​ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ತಾಫ್​ ಪರಿಚಯ ಮಾಡಿಕೊಂಡಿದ್ದ. ಬಳಿಕ ಇನ್ಸ್​ಟಾಗ್ರಾಮ್​ ಐಡಿ ಕೇಳಿ ಪಡೆದುಕೊಂಡಿದ್ದ. ನಂತರ ಇಬ್ಬರ ನಡುವೆ ಚಾಟಿಂಗ್, ಮಾತುಕತೆ ಶುರುವಾಗಿದೆ. ಅಲ್ಲದೇ ಭೇಟಿಯಾದಗ ಅನುಚಿವಾಗಿ ವರ್ತಿಸಿದ್ದಾನೆ. ಅಲ್ಲದೇ ಒಂದು ದಿನ ರಾತ್ರಿ ಫೋನ್​ ಮಾಡಿ ಬೆತ್ತಲೆಯಾಗುವಂತೆ ಒತ್ತಾಯಿಸಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದಿದ್ದಾಗ, ನಾನು ನಿನ್ನ ತುಂಬಾ ಲವ್ ಮಾಡುತ್ತೇನೆ. ಮುಂದೆ ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ಇದನ್ನು ನಂಬಿದ ಬಾಲಕಿ, ವಿಡಿಯೋ ಕಾಲ್​ನಲ್ಲಿ ನಗ್ನಳಾಗಿದ್ದಾಳೆ. ಅದನ್ನು ರೆಕಾರ್ಡ್ ಮಾಡಿಕೊಂಡಿದ್ದ ಮುಸ್ತಾಫ್ , ಪದೇ ಪದೇ ವಿಡಿಯೋ ಕಾಲ್​ ಮಾಡಿ ನಗ್ನವಾಗಲು ಹೇಳುತ್ತಿದ್ದನಂತೆ. ಇದಕ್ಕೆ ವಿದ್ಯಾರ್ಥಿನಿ ಒಪ್ಪದಿದ್ದಕ್ಕೆ ಆ ವಿಡಿಯೋ ಕಳುಹಿಸಿ ಬ್ಲ್ಯಾಕ್​ ಮೇಲ್​ ಮಾಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಕೊನೆಗೆ ಗಂಗಾವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ.

ಬೆಳಗಾವಿ: ಲೋಕಾಯುಕ್ತ ಎಂದು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್, ಮತ್ತೋರ್ವ ಎಸ್ಕೇಪ್

ಬೆಳಗಾವಿ, ಸೆ.04: ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು(Fake officer) ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್(Blackmailing) ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು(Bengaluru Police) ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ಶನಿವಾರ ಮಾಹಿತಿ ನೀಡಿದರು. ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಈತನ ಸಹಚರ ಬೈಲಹೊಂಗಲದ ದೇಶನೂರು ನಿವಾಸಿ ವಿಶಾಲ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಆರೋಪಿಗಳು ತಮ್ಮನ್ನು ಲೋಕಾಯುಕ್ತ ಅಧಿಕಾರಿಗಳು ಎಂದು ಹೇಳಿಕೊಂಡು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ದೂರಿನ ಬಳಿಕ ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ ಪೊಲೀಸರು, ಪಿಡಬ್ಲ್ಯುಡಿ ಅಧಿಕಾರಿಗಳು ಎಂಬ ನೆಪದಲ್ಲಿ ಆರೋಪಿಗಳಿಗೆ ದೂರವಾಣಿ ಕರೆ ಮಾಡಿ ಲಂಚ ನೀಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಆರೋಪಿಗಳು ಲಂಚ ಪಡೆಯಲು ಬಂದಾಗ ಸಂತೋಷ್ ಕೊಪ್ಪದ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಮತ್ತೋರ್ವ ಆರೋಪಿ ಎಸ್ಕೇಪ್ ಆಗಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist