ನವದೆಹಲಿ: ಮಹಿಳಾ ಕ್ರಿಕಟ್ನ ದಿಗ್ಗಜ ಪ್ರತಿಭೆ ಮತ್ತು ಭಾರತದಲ್ಲಿ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಿರುವ ಮಿಥಾಲಿ ರಾಜ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮಿಥಾಲಿ ರಾಜ್ ದಶಕದಿಂದ ಭಾರತ ಕ್ರಿಕೆಟ್ಗೆ ಮತ್ತು ಕ್ರಿಕೆಟ್ ಲೋಕಕ್ಕೆ ಅತೀವ ಕೊಡುಗೆಯನ್ನು ನೀಡಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಭಾರತ ಮಹಿಳಾ ಕ್ರಿಕೆಟ್ ತಂಡದ ಪರ ತಮ್ಮದೇ ಛಾಪು ಮೂಡಿಸಿದ್ದ 39 ವರ್ಷದ ಮಿಥಾಲಿ ರಾಜ್, ಬುಧವಾರವಾದ ಇಂದು ದಿಢೀರ್ ಎನ್ನುವಂತೆ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
ನಾನು ಕ್ರಿಕೆಟ್ ವೃತ್ತಿಜೀವನದಿಂದ ನಿವೃತ್ತಿಯಾಗಲು ಇದು ಸರಿಯಾದ ಸಮಯವೆಂದು ನನಗನಿಸುತ್ತಿದೆ. ನಮ್ಮ ತಂಡವು ಉತ್ತಮ ಪ್ರತಿಭಾನ್ವಿತ ಆಟಗಾರ್ತಿರನ್ನೊಳಗೊಂಡಿದ್ದು, ಭಾರತ ಮಹಿಳಾ ಕ್ರಿಕೆಟ್ ತಂಡದ ಭವಿಷ್ಯ ಮತ್ತಷ್ಟು ಉಜ್ವಲವಾಗಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮ್ಮ ನಿವೃತ್ತಿಯ ನಿರ್ಧಾರವನ್ನು ಟ್ವೀಟ್ ಮೂಲಕ ಜಗತ್ತಿನ ಮುಂದೆ ಅನಾವರಣ ಮಾಡಿರುವ ಮಿಥಾಲಿ ರಾಜ್, ಕಳೆದ ಹಲವು ವರ್ಷಗಳಿಂದ ನನಗೆ ಪ್ರೀತಿ ಹಾಗೂ ಬೆಂಬಲ ನೀಡಿದ ನಿಮಗೆಲ್ಲರಿಗೂ ಅನಂತ ಧನ್ಯವಾದಗಳು. ನಿಮ್ಮೆಲ್ಲರ ಹಾರೈಕೆ ಹಾಗೂ ಬೆಂಬಲದೊಂದಿಗೆ ನಾನು ಎರಡನೇ ಇನಿಂಗ್ಸ್ನತ್ತ ಮುಖ ಮಾಡುತ್ತಿದ್ದೇನೆ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.
ಭಾರತ ಮಹಿಳಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್, 1999ರಲ್ಲಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ದಶಕಗಳ ಕಾಲ ಕ್ರಿಕೆಟ್ ಆಡುವ ಮೂಲಕ ಕೋಟ್ಯಾಂತರ ಮಹಿಳೆಯರ ಪಾಲಿಗೆ ಮಿಥಾಲಿ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ಭಾರತ ಮಹಿಳಾ ತಂಡದ ನಾಯಕಿಯಾಗಿ ಮಿಥಾಲಿ ರಾಜ್ ಎರಡು ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಫೈನಲ್ಗೇರಿಸಿದ್ದರು.
ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು 2005ರಲ್ಲಿ ಮೊದಲ ಬಾರಿಗೆ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದ ಮುಗ್ಗರಿಸುವ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇದಾದ ಬಳಿಕ 2017ರಲ್ಲಿ ಕೂಡಾ ಮಹಿಳಾ ಕ್ರಿಕೆಟ್ ತಂಡವು ಎರಡನೇ ಬಾರಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ಎದುರು ರೋಚಕ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತ್ತು. ಇನ್ನು ಕೆಲ ತಿಂಗಳ ಹಿಂದಷ್ಟೇ ಮುಕ್ತಾಯವಾದ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ನಾಕೌಟ್ ಹಂತಕ್ಕೇರಲು ವಿಫಲವಾಗಿತ್ತು. ಇದರ ಬೆನ್ನಲ್ಲೇ ಮಿಥಾಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೂಡಾ ತೆರೆಮರೆಗೆ ತೆರೆದಿತ್ತು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?