ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ: ನನಗೆ ಮತ್ತೆ ಅವಕಾಶ ಸಿಗಲಿದೆ; ಪ್ರತಾಪ್ ಸಿಂಹ

Twitter
Facebook
LinkedIn
WhatsApp
ನನ್ನ ಬಗ್ಗೆ ಮೋದಿ ಅವರಿಗೆ ಗೊತ್ತಿದೆ: ನನಗೆ ಮತ್ತೆ ಅವಕಾಶ ಸಿಗಲಿದೆ; ಪ್ರತಾಪ್ ಸಿಂಹ

ಪಕ್ಷ ನನ್ನನ್ನು ಕೈಬಿಡುವುದಿಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು. ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ (BJP) ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವರದಿಗಳ ಬೆನ್ನಲ್ಲೇ ಅವರು ಪ್ರತಿಕ್ರಿಯೆ ನೀಡಿದರು. ಮೈಸೂರು ರಾಮೇಶ್ವರಂ ರೈಲಿಗೆ  ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು.

ಕಾಂಗ್ರೆಸ್ ನಲ್ಲಿ ಸೋಲಿನ ಟಿಕೆಟ್ ಗಾಗಿಯೇ ಹೊಡೆದಾಟವಿದೆ. ಇನ್ನೂ ಬಿಜೆಪಿಯಲ್ಲಿ ಗೆಲುವಿನ ಟಿಕೆಟ್ ಗಾಗಿ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದರೆ ಏರಲು ಎಲ್ಲರೂ ಪ್ರಯತ್ನ ಪಡುತ್ತಾ ಇರುತ್ತಾರೆ. ಮೋದಿ ಅವರ ಕೃಪೆಯಿಂದ ಕೆಲಸ ಮಾಡಿ ಮೈಸೂರಿನಲ್ಲಿ ಬಿಜೆಪಿ ಗೆಲುವ ಸ್ಥಿತಿಯನ್ನು ನಾನು ಮೂಡಿಸಿದ್ದೇನೆ‌. ನನಗೆ ತಾಯಿ ಚಾಮುಂಡಿ, ಕಾವೇರಿ ತಾಯಿ, ಮೋದಿಯವರ ಆಶೀರ್ವಾದ ಇದೆ. ನನಗೇ ಟಿಕೆಟ್ ಸಿಗಲಿದ್ದು, ಮೂರನೇ ಬಾರಿಯೂ ಗೆಲುವು ಸಾಧಿಸುತ್ತೇನೆ ಎಂದು ಹೇಳಿದರು.
 

ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಎರಡನೇ ಬಾರಿ ಸ್ಪರ್ಧಿಸುವಾಗಲು ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆ ಮತ್ತೆ ಅವಕಾಶ ಸಿಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

 

ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಬಿಜೆಪಿಯಲ್ಲಿ ಗೆಲುವಿನ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಎಲ್ಲರೂ ಪ್ರಯತ್ನ ಮಾಡುತ್ತಿರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ