ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು ; ರೋಡ್ ಶೋನಲ್ಲಿ ಮಾತ್ರ ಬಾಗಿ..!

Twitter
Facebook
LinkedIn
WhatsApp
ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು ; ರೋಡ್ ಶೋನಲ್ಲಿ ಮಾತ್ರ ಬಾಗಿ..!

ಬೆಂಗಳೂರು : 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ ಮೂರನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ ಆಗಮಿಸುವ ತಯಾರಿಯಲ್ಲಿದ್ದಾರೆ.

ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಆರಂಭದಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

 

ಮಂಗಳೂರಿಗೆ ಮೋದಿ, ರೋಡ್ ಶೋದಲ್ಲಿ ಭಾಗಿ: ಏಪ್ರಿಲ್ 14ರಂದು ಅಪರಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದ್ದು ಅಂದಿನ ಮೋದಿ ಸಮಾವೇಶ ರದ್ದಾಗಿದೆ. ಪ್ರಧಾನಿಯವರು ಏಪ್ರಿಲ್ 6ರಂದು ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಸಲಿದ್ದಾರೆ.

ಕಳೆದ ತಿಂಗಳು ಪ್ರಧಾನಿ ಮೋದಿ ಅವರು ಶಿವಮೊಗ್ಗ ಹಾಗೂ ಕಲಬುರಗಿಗೆ ಆಗಮಿಸಿ ಪ್ರಚಾರ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ