ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು.! ವಿಡಿಯೋ ವೈರಲ್

Twitter
Facebook
LinkedIn
WhatsApp
ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು.!

 ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ

ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಹೀಗಾಗಿ ರಥ ಹೋಗಲು ಸ್ಥಳವಿಲ್ಲದಂತೆ ಆಗಿತ್ತು. ಈ ಕಾರಣದಿಂದ ರಥ ಹೋಗಲು ದಾರಿ ಮಾಡುವ ಉದ್ದೇಶದಿಂದ ಭಕ್ತರು ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್ ಗಳನ್ನು ಬದಿಗೆ ದೂಡಿ ಹಾಕಿದ್ದು, ಇದರಿಂದಾಗಿ ವಾಹನಗಳೂ ಜಖಂಗೊಂಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ನೆಲ್ಯಾಡಿ: ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಮದುವೆ ದಿಬ್ಬಣಕ್ಕೆ ತೆರಳಿದ ಬಸ್..!

 ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ