ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Mysuru : ಅತಿ ಕಡಿಮೆ ಬೆಲೆಗೆ ಮಾರಾಟವಾದ ತಂಬಾಕು

Twitter
Facebook
LinkedIn
WhatsApp
Mysuru : ಅತಿ ಕಡಿಮೆ ಬೆಲೆಗೆ ಮಾರಾಟವಾದ ತಂಬಾಕು

 ಎಚ್‌.ಡಿ. ಕೋಟೆ(ಡಿ. 09):  ತಾಲೂಕಿನ ಶಾಂತಿಪುರ ಗ್ರಾಮದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕಿಗೆ ಅತಿ ಕಡಿಮೆ ಬೆಲೆಗೆ ಮಾರಾಟವಾದ ಹಿನ್ನೆಲೆ ರೈತರು ತಂಬಾಕು ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹರಾಜು ಪ್ರಕ್ರಿಯೆ ನಿಲ್ಲಿಸಿದ ಘಟನೆ ನಡೆಯಿತು.

ಹರಾಜು ಪ್ರಕ್ರಿಯೆ ಎಂದಿನಂತೆ ಪ್ರಾರಂಭವಾಗಿ ಉತ್ತಮ ದರ್ಜೆಯ ಹೊಗೆ ಸೊಪ್ಪಿಗೆ 270 ರು. ನೀಡುವ ಬದಲು 230 ರು. ಗೆ ಬಿಡ್‌ ಮಾಡಿದ್ದಕ್ಕೆ ಆಕ್ರೋಶಗೊಂಡ ರೈತರು (Farmers) , ತಂಬಾಕು ಮಂಡಳಿ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದು ಕಳೆದ ಒಂದು ವಾರದಿಂದ ದಿನೇ ದಿನೇ ತಂಬಾಕು ಬೆಲೆಯಲ್ಲಿ ಕನಿಷ್ಠ 30 ರು. ನಿಂದ 45 ರು. ಗಳ ಕಡಿಮೆ ಬೆಲೆಗೆ ಕಂಪನಿಯವರು ತಂಬಾಕು ಖರೀದಿಸುತ್ತಿದ್ದು, ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದ್ದರು ಕೂಡ ಅಧಿಕಾರಿಗಳು ಕಣ…ಮುಚ್ಚಿ ಕುಳಿತ್ತಿದ್ದೀರಾ, ನೀವು ರೈತರ ಪರವಾಗಿ ಇಲ್ಲದೆ ತಂಬಾಕು (Tobacco)  ಕಂಪನಿಯವರ ಜೊತೆಗೆ ಒಳ ಒಪ್ಪಂದ ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಕೇಂದ್ರ ಸರ್ಕಾರ ಹಾಗೂ ತಂಬಾಕು ಮಂಡಳಿ ಮಧ್ಯ ಪ್ರವೇಶ ಮಾಡಿ ಬಿಡ್‌ದಾರರಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಈ ಹಿಂದಿನ ದಿನಗಳಲ್ಲಿ ಇದ್ದಂತ ಮಾರುಕಟ್ಟೆಧಾರಣೆಯನ್ನು ಕೊಡಿಸಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಒತ್ತಾಯಿಸಿದರು.

ಮೊದಲೆಲ್ಲ ತಂಬಾಕು ಖರೀದಿ ಮಾಡಲು ಹಲವು ಕಂಪನಿಯವರು ಭಾಗವಹಿಸುತ್ತಿದ್ದರು, ಆದರೆ ಇತೀಚೆಗೆ ಕೇವಲ ನಾಲ್ಕæ ೖದು ಕಂಪನಿಯವರು ಮಾತ್ರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದು, ಕೆಲವು ಕಂಪನಿಯವರು ಒಳ ಒಪ್ಪಂದ ಮಾಡಿಕೊಂಡು ರೈತರಿಗೆ ಉತ್ತಮ ಬೆಲೆ ನೀಡದೆ ಅನ್ಯಾಯ ಮಾಡುತ್ತಿದ್ದಾರೆ. ಹಾಗಾಗಿ ಈ ಬಿಡ್‌ದಾರರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ಕಂಪಾಲಪುರ ಮಾರುಕಟ್ಟೆಸೇರಿದಂತೆ ಇನ್ನಿತರೆ ಕಡೆ ಬುಧವಾರ ನಡೆದ ಹರಾಜಿನಲ್ಲಿ ಪ್ರತಿ ಕೆ.ಜಿ ಹೊಗೆಸೊಪ್ಪಿಗೆ 280 ರು. ಗೆ ತಂಬಾಕು ಮಾರಾಟ ಆಗಿದೆ, ಆದರೆ, ಎಚ್‌.ಡಿ. ಕೋಟೆ ಮಾರುಕಟ್ಟೆಯಲ್ಲಿ ಮಾತ್ರ ಕಡಿಮೆ ದರಕ್ಕೆ ಬಿಡ್‌ ಮಾಡಲಾಗಿದೆ ಎಂದು ದೂರಿದರು.

ರೈತ ಪೃಥ್ವಿ ಮಾತನಾಡಿ, ಐಟಿಸಿ ಕಂಪನಿಯವರು ಗ್ರಾಮಗಳಿಗೆ ತೆರಳಿ ರೈತರ ಬಳಿ ಹೊಗೆಸೊಪ್ಪು ಇರುವುದನ್ನು ಖಾತರಿ ಮಾಡಿಕೊಂಡು ಉತ್ತಮ ಬೆಲೆ ನೀಡುವುದಾಗಿ ಭರವಸೆ ನೀಡಿ, ನಂತರ ಮಾರುಕಟ್ಟೆಗೆ ಬಂದಾಗ ಅಡ್ಡಾದಿಡ್ಡಿಯಾಗಿ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist