ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ ಪ್ರೌಢಶಾಲೆ ನಯನಾಡು (NAINAD HIGHSCHOOL). ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶೇಕಡಾ ನೂರು ಸಾಧನೆ ಮಾಡಿದೆ. ಅಲ್ಲದೆ ಗುಣಮಟ್ಟದ ಫಲಿತಾಂಶದಲ್ಲಿ ಕೂಡ ಅತ್ಯುತ್ತಮ ಸಾಧನೆ ಮಾಡಿದೆ. ಬಂಟ್ವಾಳ ತಾಲೂಕಿನ ಮೂವತ್ತೆಂಟು ಸರಕಾರಿ ಪ್ರೌಢಶಾಲೆಗಳ ಪೈಕಿ ಕೇವಲ ಸರಕಾರಿ ಪ್ರೌಢಶಾಲೆ ನಯನಾಡು (NAINAD HIGHSCHOOL) ಮತ್ತು ಸರಕಾರಿ ಪ್ರೌಢಶಾಲೆ ಕಾವಳಪಡೂರು ವಗ್ಗ ಮಾತ್ರ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.
ಜೋಸ್ವಿನ್ ಕ್ರಾಸ್ತಾ 599 ಅಂಕಗಳೊಂದಿಗೆ ಪ್ರಥಮ ಸ್ಥಾನಿಯಾದರೆ, ಸಾನಿಕ 592, ಮನಿಷಾ 586, ಸುಜನ್ 586, ಅನುಶ್ರೀ 573, ಅನನ್ಯ 527, ಧ್ಯಾನ್ 522, ರೆಜ್ವಿಟಾ ಲೋಬೋ 517 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕೆಲವೊಂದು ಮೂಲಭೂತ ಸೌಲಭ್ಯದ ಕೊರತೆಯ ನಡುವೆಯೂ ನಯನಾಡು ಪ್ರೌಢಶಾಲೆಯ ಈ ಸಾಧನೆ ಊರಿನವರಲ್ಲಿ ಹರ್ಷವನ್ನು ಉಂಟುಮಾಡಿದೆ. ಈ ಸಾಧನೆಗೆ ಕಾರಣಕರ್ತರಾದ ಮಖ್ಯಶಿಕ್ಷಕರು ಮತ್ತು ಅಧ್ಯಾಪಕ ವೃಂದದವರಿಗೆ , ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಪಿಲಾತ್ತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?