ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾ ಚೀತಾಗಳ ನಡುವೆ ಕಾದಾಟ -ʻಅಗ್ನಿʼಗೆ ಗಾಯ

Twitter
Facebook
LinkedIn
WhatsApp
20

ಭೋಪಾಲ್:‌ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ತೆರೆದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದ್ದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದ ಚೀತಾಗಳ (Cheetah) ನಡುವೆ ರೋಚಕ ಕಾದಾಟ ನಡೆದಿದೆ. ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಚೀತಾಗಳ ಎರಡು ಗುಂಪಿನ ನಡುವೆ ಸಂಘರ್ಷ ನಡೆದಿದ್ದು, ಪರಿಣಾಮ ಆಫ್ರಿಕಾದ ಗಂಡು ಚೀತಾ ʻಅಗ್ನಿʼ ಗಾಯಗೊಂಡಿದೆ. ಅಗ್ನಿ ಚೀತಾ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚೀತಾ ಆರೋಗ್ಯವಾಗಿದ್ದು ಆತಂಕ ಪಡಬೇಕಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ನಮೀಬಿಯಾದಿಂದ ತಂದಿದ್ದ ಗೌರವ್‌ ಮತ್ತು ಶೌರ್ಯ, ದಕ್ಷಿಣ ಆಫ್ರಿಕಾದಿಂದ (South Africa) ತಂದಿದ್ದ ಅಗ್ನಿ ಮತ್ತು ವಾಯು ಚೀತಾಗಳ ನಡುವೆ ಕಾದಾಟ ನಡೆದಿತ್ತು. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ 4 ಚೀತಾಗಳ ನಡುವೆ ರೋಚಕ ಕಾದಾಟ ನಡೆದಿತ್ತು. ಈ ವೇಳೆ ಅಧಿಕಾರಿಗಳು ಸೈರನ್‌ ಹಾಗೂ ಪಟಾಕಿ ಸಿಡಿಸಿ ಕಾದಾಟ ನಿಲ್ಲಿಸಿದರು.

ಈ ವೇಳೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅಗ್ನಿಯನ್ನು ಚೀತಾ ʻಅಗ್ನಿʼ ಕಂಡು ತಜ್ಞರೊಂದಿಗೆ ಸ್ಥಳಕ್ಕಾಮಿಸಿದ ಸಿಬ್ಬಂದಿ, ಚಿಕಿತ್ಸೆಗಾಗಿ ಕುನೋದಲ್ಲಿನ ಆಸ್ಪತ್ರೆಗೆ ಕರೆತರಲಾಯಿತು. ಚಿಕಿತ್ಸೆ ಬಳಿಕ ಅಗ್ನಿ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ.

ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಯಿತು. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಯಿತು. ಕಳೆದ ವರ್ಷದ ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದೇ ಕುನೋ ಪಾರ್ಕ್‌ಗೆ ಚೀತಾಗಳನ್ನು ಬಿಡಲಾಗಿತ್ತು.

ನಮೀಬಿಯಾದಿಂದ 8 ಚೀತಾಗಳನ್ನು ತರಿಸಿದ ಕೆಲ ತಿಂಗಳ ನಂತರ ದಕ್ಷಿಣ ಆಫ್ರಿಕಾದಿಂದಲೂ 12 ಚೀತಾಗಳನ್ನ ತರಿಸಲಾಗಿತ್ತು. ಅವುಗಳನ್ನು ಕ್ವಾರಂಟೈನ್‌ ಮಾಡಿ, ಪ್ರದೇಶಲ್ಲೇ ಒಗ್ಗಿಕೊಂಡ ನಂತರ ತೆರೆದ ಅರಣ್ಯ ಪ್ರದೇಶಕ್ಕೆ ಬಿಡಲಾಗಿತ್ತು. ಅವುಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತಂದಿದ್ದ ಚೀತಾಗಳ ಪೈಕಿ ಉದಯ್‌ ಹೆಸರಿನ ಗಂಡು ಚೀತಾ ಹೃದಯ-ಶ್ವಾಸಕೋಶ ವೈಫಲ್ಯದಿಂದ ಮೃತಪಟ್ಟರೆ, ದಕ್ಷ ಹೆಸರಿನ ಗಂಡು ಚೀತಾ ಗಾಯಗೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist