ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಯಾಬ್ ಸೈನಿ ಹರಿಯಾಣದ ಮುಂದಿನ ಸಿಎಂ..!

Twitter
Facebook
LinkedIn
WhatsApp
ನಯಾಬ್ ಸೈನಿ ಹರಿಯಾಣದ ಮುಂದಿನ ಸಿಎಂ..!

ಮನೋಹರ್ ಲಾಲ್ ಖಟ್ಟರ್ (Manohar Lal Khattar) ರಾಜೀನಾಮೆಯಿಂದ (Resignation) ತೆರವಾದ ಹರಿಯಾಣದ ಮುಖ್ಯಮಂತ್ರಿ (Haryana CM) ಹುದ್ದೆಗೆ ನಯಾಬ್ ಸಿಂಗ್ ಸೈನಿ (Nayab Singh Saini ) ಆಯ್ಕೆಯಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

“ನಯಾಬ್ ಸಿಂಗ್ ಸೈನಿ ಹರಿಯಾಣದ ಮುಂದಿನ ಸಿಎಂ. ಎಲ್ಲಾ ಶಾಸಕರು ಈಗ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ” ಎಂದು ಬಿಜೆಪಿ ಶಾಸಕ ಕಿಶನ್ ಲಾಲ್ ಮಿದ್ಧಾ ಸುದ್ದಿಗಾರರಿಗೆ ತಿಳಿಸಿದರು. 2019ರಿಂದ ರಾಜ್ಯವನ್ನು ಆಳುತ್ತಿರುವ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP)- ಜನನಾಯಕ್ ಜನತಾ ಪಕ್ಷ (JJP) ಮೈತ್ರಿಯ ಬಿರುಕುಗಳ ಪರಿಣಾಮ ಮನೋಹರ್ ಲಾಲ್ ಖಟ್ಟರ್ ಕೆಳಗಿಳಿದಿದ್ದು, ನಂತರ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.

ನಯಾಬ್‌ ಸಿಂಗ್‌ ಸೈನಿ ಯಾರು?

ಕುರುಕ್ಷೇತ್ರದ ಸಂಸದ ಹಾಗೂ ಒಬಿಸಿ ಸಮುದಾಯದ ಪ್ರಮುಖರಾಗಿರುವ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

1996ರಿಂದ ಬಿಜೆಪಿಯಲ್ಲಿ ಸೈನಿ ಅವರ ಪ್ರಯಾಣ ಪ್ರಾರಂಭವಾಯಿತು. ಹಂತ ಹಂತವಾಗಿ ಪ್ರಗತಿ ಸಾಧಿಸಿ 2002ರಲ್ಲಿ ಅಂಬಾಲಾ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 2005ರಲ್ಲಿ ಅಂಬಾಲಾ ಜಿಲ್ಲಾ ಅಧ್ಯಕ್ಷರಾಗಿ, 2009ರಲ್ಲಿ ಹರಿಯಾಣದ ಬಿಜೆಪಿ ಕಿಸಾನ್ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, 2012ರಲ್ಲಿ ಅಂಬಾಲಾ ಬಿಜೆಪಿಯ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸಿ, 2014ರಲ್ಲಿ ನಾರಾಯಣಗಢ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. 2016ರಲ್ಲಿ ಹರಿಯಾಣ ಸರ್ಕಾರದ ಸಚಿವರಾಗಿ ನೇಮಕಗೊಂಡರು.

2019ರ ಲೋಕಸಭೆ ಚುನಾವಣೆಯಲ್ಲಿ ನಯಾಬ್ ಸಿಂಗ್ ಸೈನಿ ಕುರುಕ್ಷೇತ್ರ ಕ್ಷೇತ್ರದಿಂದ 3.83 ಲಕ್ಷ ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನ ನಿರ್ಮಲ್ ಸಿಂಗ್ ಅವರನ್ನು ಸೋಲಿಸಿದರು. ಅವರನ್ನು ಮನೋಹರ್ ಲಾಲ್ ಖಟ್ಟರ್ ಅವರ ಆಪ್ತ ಎಂದು ಪರಿಗಣಿಸಲಾಗಿದೆ. ರಾಜಕೀಯ ವಿಶ್ಲೇಷಕರು ಹೇಳುವ ಪ್ರಕಾರ ಚುನಾವಣಾ ಮತ್ತು ಜಾತಿ ಲೆಕ್ಕಾಚಾರಗಳು ಈ ಲೋಕಸಭಾ ಸಂಸದರನ್ನು ಹರಿಯಾಣದ ಮುಖ್ಯಮಂತ್ರಿ ಹುದ್ದೆಗೆ ಏರಿಸಿವೆ. ಕುರುಕ್ಷೇತ್ರ, ಯಮುನಾನಗರ, ಅಂಬಾಲಾ, ಹಿಸಾರ್ ಮತ್ತು ರೇವಾರಿ ಜಿಲ್ಲೆಗಳ ಪಾಕೆಟ್‌ಗಳಲ್ಲಿ ಗಣನೀಯ ಉಪಸ್ಥಿತಿ ಹೊಂದಿರುವ ಸೈನಿ ಜಾತಿಯ ಜನಸಂಖ್ಯೆಯು ಸುಮಾರು 8% ಇದೆ ಎನ್ನಲಾಗಿದೆ.

ಹರಿಯಾಣದಲ್ಲಿ ನಡೆದದ್ದೇನು?

ಬಿಜೆಪಿ ಇಲ್ಲಿ ಖಟ್ಟರ್‌ ನೇತೃತ್ವದಲ್ಲಿ ದುಷ್ಯಂತ್ ಚೌತಾಲಾ ನೇತೃತ್ವದ ಜೆಜೆಪಿ ಜೊತೆ ಸೇರಿ ಸರ್ಕಾರ ರಚಿಸಿತ್ತು. ಚೌತಾಲಾ ಉಪಮುಖ್ಯಮಂತ್ರಿಯಾಗಿದ್ದರು. ಇದೀಗ ಬಿಜೆಪಿ ಹಾಗೂ ಚೌತಾಲಾ ನಡುವೆ ಸಂಬಂಧ ಹಳಸಿದೆ. ಪ್ರಾಥಮಿಕವಾಗಿ, ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲು ಎರಡೂ ಪಕ್ಷಗಳು ವಿಫಲವಾಗಿವೆ. ಹೀಗಾಗಿ ಇಂದು ಬೆಳಗ್ಗೆ ಖಟ್ಟರ್‌ ರಾಜೇನಾಮೆ ನೀಡಿದ್ದರು.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸದಸ್ಯಬಲ ಹೊಂದಿದೆ. 10 ಶಾಸಕರನ್ನು ಹೊಂದಿರುವ ಜೆಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಕ್ಟೋಬರ್ 2019ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು. ಇದೀಗ ಸ್ವತಂತ್ರ ಶಾಸಕರನ್ನು ಸೇರಿಸಿಕೊಂಡು ಬಿಜೆಪಿ ಸಂಪುಟ ರಚಿಸಲು ಮುಂದಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist