ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೊಸ ಮನೆ, ಹೊಸ ಬಾಡಿಗೆ ಮನೆಗಳಿಗೂ ಫ್ರೀ ಕರೆಂಟ್ – ಕೆ.ಜೆ.ಜಾರ್ಜ್ ಸ್ಪಷ್ಟನೆ

Twitter
Facebook
LinkedIn
WhatsApp
72

ಬೆಂಗಳೂರು: ಹೊಸ ಮನೆಯವರು ಹಾಗೂ ಹೊಸ ಮನೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ತಿಳಿಸಿದರು.

ಗೃಹಜ್ಯೋತಿ ಕಾರ್ಯಕ್ರಮ ಅನುಷ್ಠಾನ ವಿಚಾರವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ಮನೆಗಳಿಗೆ ದಾಖಲೆ ಇರಲ್ಲ. ಹಾಗಾಗಿ ಹೊಸ ಮನೆಗಳಿಗೂ ಫ್ರೀ ಕರೆಂಟ್ ನೀಡಲಾಗುವುದು. ಹೊಸದಾಗಿ ಸಂಪರ್ಕದ ಮನೆಗಳಿಗೆ, ಹೊಸ ಮನೆ ಬಾಡಿಗೆದಾರರಿಗೂ ಇದು ಅನ್ವಯವಾಗಲಿದೆ. ಒಂದು ವರ್ಷದ ತನಕ ಈ ನಿಯಮ ಇರುತ್ತದೆ. ಆ ಬಳಿಕ ಅವರು ಬಳಸಿದ ವಾರ್ಷಿಕ ಸರಾಸರಿ ಆಧಾರದ ಮೇಲೆ ಯೂನಿಟ್ ಮರು ಪರಿಷ್ಕರಣೆ ಮಾಡಲಾಗುವುದು. ಉಳಿದಂತೆ ಎಲ್ಲ ಉಚಿತ ಕರೆಂಟ್ ಮಾರ್ಗಸೂಚಿಗಳು ಹೊಸ ಮನೆ ಸಂಪರ್ಕ, ಹೊಸ ಮನೆ ಬಾಡಿಗೆದಾರರಿಗೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಹೊಸ ಮನೆಗೆ ಬರುವವರಿಗೆ ದಾಖಲೆ ಇರಲ್ಲ. ಅವರಿಗೆ 12 ತಿಂಗಳ ಸರಾಸರಿಯಂತೆ 53 ಯುನಿಟ್ ಮತ್ತು 10% ಹೆಚ್ಚುವರಿ ಸೇರಿಸಿ ಒಟ್ಟು 58 ಅಥವಾ 59 ಯೂನಿಟ್ ನೀಡಲಾಗುವುದು. ಹೊಸ ಮನೆಯ ಬಾಡಿಗೆದಾರರಿಗೂ ಇದು ಅನ್ವಯ. ಜೊತೆಗೆ ಆ ಆರ್‌ಆರ್ ನಂಬರ್‌ನಲ್ಲಿ ಇರುವ ಹಳೆಯ ಬಾಡಿಗೆದಾರರಿಗೂ ಅನ್ವಯವಾಗಲಿದೆ. ಅಂದಾಜು ಸಿಗದಿರುವ, ಹೊಸದಾಗಿ ಬಾಡಿಗೆಗೆ ಬರುವ ಮನೆಯವರಿಗೆ ಇದು ಅನ್ವಯಿಸುತ್ತದೆ. ಹೊಸ ಮನೆಯವರಿಗೆ, ಹೊಸ ಬಾಡಿಗೆಯವರಿಗೆ ಏನ್ ಮಾಡ್ತೀರಾ ಅನ್ನೋ ಪ್ರಶ್ನೆ ಬಂತು. ಅದಕ್ಕೆ ಈ ಹೊಸ ಸೂತ್ರ ಜಾರಿಗೆ ಬರಲಿದೆ. ಈ ಸರಾಸರಿ ಯುನಿಟ್ ಏಪ್ರಿಲ್ 1 ರಿಂದ ಮಾರ್ಚ್ 31 ರವರೆಗೆ ಅನ್ವಯಿಸಿ ಸರಾಸರಿ ಮಾಡಲಾಗ್ತಿದೆ ಎಂದು ಹೇಳಿದರು.

ವಿದ್ಯುತ್ ದರ ಹೆಚ್ಚಳ ಕುರಿತು ಮಾತನಾಡಿ, ಅದು ಕೆಇಆರ್‌ಸಿ ತೀರ್ಮಾನ. ಅದನ್ನ ಸರ್ಕಾರ ಮಾಡಿಲ್ಲ. ಮೊದಲು ಮೂರು ಹಂತದಲ್ಲಿ ಸ್ಲಾಬ್ ಇತ್ತು. ಈಗ ಎರಡು ಹಂತದಲ್ಲಿ ಸ್ಲಾಬ್ ಮಾಡಲಾಗಿದೆ. ಈಗ 0-100 ಯೂನಿಟ್‌ಗೆ 4.75 ಪೈಸೆ ದರ ಹೆಚ್ಚಳ ಆಗಿದೆ. 101- ಎಲ್ಲಾ ಯೂನಿಟ್‌ಗೆ 7 ರೂ. ಹೆಚ್ಚಳವಾಗಿದೆ. ಈ ಹೊರೆ ಯಾವ ಗ್ರಾಹಕರಿಗೂ ಹೋಗ್ತಿಲ್ಲ. ರಾಜ್ಯ ಸರ್ಕಾರವೇ ಭರಿಸಿಕೊಳ್ತಿದೆ. ಯಾರ ಮೇಲೂ ಹೊರೆ ಮಾಡುವುದಿಲ್ಲ. ಹಿಂದೆ ಇದ್ದ ನಾಲ್ಕು ಸ್ಲಾಬ್‌ಗೆ ಹೋಗಬಹುದಾ ಅಂತ ಚರ್ಚೆ ಮಾಡುತ್ತೇವೆ. ಸಾಧ್ಯವಾದರೆ ಹಿಂದಿನ ರೀತಿ ಮಾಪನಕ್ಕೆ ಹೋಗಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist