ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..!

Twitter
Facebook
LinkedIn
WhatsApp
ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..!

ಜೈಲಿನಲ್ಲಿರುವ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಸೇರಿದಂತೆ  ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶೋಧಕಾರ್ಯ ನಡೆಸಿದೆ. ಎನ್​ಐಎ ಅಧಿಕಾರಿಗಳು ನಿನ್ನೆ (ಮಾ.04) ರಾತ್ರಿ 8 ಗಂಟೆಗೆ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗು ತನಿಖೆ ನಡೆಸಿದ್ದು, ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕ, ತಮಿಳುನಾಡು ಸೇರಿ 7 ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸುತ್ತಿದೆ. ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು, ದೇಶದ ಹಲವೆಡೆ ಉಗ್ರ ದಾಳಿಗೆ ಸಂಚು ರೂಪಿಸುವುದು ಸೇರಿ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ ಎನ್ನಲಾಗಿದೆ. ಹಲವು ಶಂಕಿತ ಉಗ್ರರು ಪಾಲ್ಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ಕೂಡ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ದಾಳಿಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಬಂಧಿತರಿಂದ ಏಳು ಪಿಸ್ತೂಲ್‌, ಆರು ಹ್ಯಾಂಡ್‌ ಗ್ರೆನೇಡ್‌, 45 ಸುತ್ತಿನ ಜೀವಂತ ಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕಳೆದ ವರ್ಷದ ಜುಲೈನಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಕೈದಿಗಳು ಸೇರಿ ಹಲವರು ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಎನ್‌ಐಎ ಕೂಲಂಕಷ ತನಿಖೆ ನಡೆಸುತ್ತಿದೆ.

ಲಷ್ಕರೆ ತಯ್ಬಾ ಉಗ್ರ, ಸಂಘಟನೆಯ ಕಿಂಗ್‌ಪಿನ್‌ ಆಗಿರುವ ಟಿ ನಾಸೀರ್‌ ಎಂಬಾತನು ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದುಕೊಂಡು ಹಲವು ಕೈದಿಗಳು ಉಗ್ರವಾದದಲ್ಲಿ ತೊಡಗುವಂತೆ ಪ್ರಚೋದನೆ ನೀಡಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. ಹೀಗೆ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರವಾದದಲ್ಲಿ ತೊಡಗಿದ ಐವರು ಕೈದಿಗಳ ವಿರುದ್ಧ ಎನ್‌ಐಎ ಈಗಾಗಲೇ ತನಿಖೆ ನಡೆಸುತ್ತಿದೆ. ಇನ್ನೂ ಹಲವು ಕೈದಿಗಳು ಕೂಡ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರ ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ