ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವರ ಅವತಾರ ತಾಳಿದ ಜೂ. ಎನ್‌ಟಿಆರ್‌; ಬರ್ತ್‌ಡೇ ಪ್ರಯುಕ್ತ ರಿವೀಲ್‌ ಆಯ್ತು ಸಿನಿಮಾ ಶೀರ್ಷಿಕೆ

Twitter
Facebook
LinkedIn
WhatsApp
h 1

ಯಂಗ್ ಟೈಗರ್ ಜೂ. ಎನ್‌ಟಿಆರ್ (Jr NTR) ಅಭಿಮಾನಿಗಳು ಕಾತರದಿಂದ ನೋಡುತ್ತಿರುವ ಸಮಯ ಬಂದಿದೆ. ಕೊನೆಗೂ ತಾರಕ್ -ಕೊರಟಾಲ ಶಿವ (Koratala Shiva) ಕಾಂಬಿನೇಷನ್ ನಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ ಟೈಟಲ್ ಫೈನಲ್ ಆಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಎಲ್ಲರ ನಿರೀಕ್ಷೆಯಂತೆ #NTR30 ಚಿತ್ರಕ್ಕೆ “ದೇವರ” (Devara) ಎಂಬ ಟೈಟಲ್ ಇಡಲಾಗಿದೆ. ಅಂದಹಾಗೆ ಈ ಚಿತ್ರದಲ್ಲಿ ಜೂ. ಎನ್‌ಟಿಆರ್‌ಗೆ ನಾಯಕಿಯಾಗಿ ಜಾನ್ವಿ ಕಪೂರ್‌ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿಖಾನ್ ಈ ಚಿತ್ರದಲ್ಲಿ ಖಳನಟನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇಂದು (ಮೇ 20) ಎನ್‌ಟಿಆರ್‌ 40ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಚಿತ್ರತಂಡದ ವತಿಯಿಂದ ದೇವರ ಚಿತ್ರದ ಲುಕ್ ಬಿಡುಗಡೆ ಮಾಡಲಾಗಿದೆ. ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ನಲ್ಲಿ ಜೂ. ಎನ್‌ಟಿಆರ್‌ ರಗಡ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ.

ಪೋಸ್ಟರ್‌ನಲ್ಲಿ ಕಪ್ಪು ವರ್ಣದ ಲುಂಗಿ ಧರಿಸಿ, ಕೈಯಲ್ಲಿ ಆಯುಧ ಹಿಡಿದು, ಖಡಕ್‌ ಲುಕ್‌ನಲ್ಲಿ ಎದುರಾಗಿದ್ದಾರೆ ತಾರಕ್. ಇತ್ತ ಸಮುದ್ರದ ಅಲೆಗಳು ತೀರವನ್ನು ತೊಳೆಯುತ್ತಿದ್ದರೆ, ಮತ್ತೊಂದೆಡೆ ಅದೇ ತೀರಕ್ಕೆ ದುಷ್ಟರ ನೆತ್ತರು ಸೇರುತ್ತಿದೆ. ಹೀಗೆ ಹಲವು ಕೌತುಕಗಳಿಂದ ಪೋಸ್ಟರ್‌ ಮತ್ತಷ್ಟು ಮಗದಷ್ಟು ಕುತೂಹಲ ಮೂಡಿಸುವಂತಿದೆ. ಪೋಸ್ಟರ್‌ ಹೀಗಿರುವಾಗ ಟೀಸರ್‌, ಟ್ರೇಲರ್‌ ಅದ್ಯಾವ ಮಟ್ಟದಲ್ಲಿ ಇರಬಹುದು ಎಂದು ಅವರ ಫ್ಯಾನ್ಸ್‌ ಈಗಿನಿಂದಲೇ ಊಹಿಸುತ್ತಿದ್ದಾರೆ.

ಎನ್‌ಟಿಆರ್‌ ಆರ್ಟ್ಸ್ ಮತ್ತು ಯುವಸುಧಾ ಆರ್ಟ್ಸ್ ಬ್ಯಾನರ್‌ನಲ್ಲಿ ಸುಧಾಕರ್ ಮಿಕ್ಕಿಲಿನೇನಿ, ಹರಿಕೃಷ್ಣ ಕೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ ನೀಡಲಿದ್ದಾರೆ.

ಸಾಬು ಸಿರಿಲ್ ಕಲಾ ನಿರ್ದೇಶನ, ರತ್ನವೇಲು ಛಾಯಾಗ್ರಹಣ, ಶ್ರೀಕರ ಪ್ರಸಾದ್ ಸಂಕಲನವಿದೆ. ಶೀಘ್ರದಲ್ಲೇ ರೆಗ್ಯುಲರ್ ಶೂಟಿಂಗ್ ಶುರುವಾಗಲಿದೆ. ಮುಂದಿನ ವರ್ಷ ಏಪ್ರಿಲ್ 5 ರಂದು ಚಿತ್ರ ತೆರೆಗೆ ಬರಲಿದೆ. ತೆಲುಗು ಅಲ್ಲದೆ, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಚಿತ್ರ ಬಿಡುಗಡೆಯಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ