ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಯಿಲ್ ಟ್ಯಾಂಕರ್‌ಗೆ ರೋಲ್ಸ್ ರಾಯ್ಸ್ ಡಿಕ್ಕಿ, ಇಬ್ಬರು ಸಾವು

Twitter
Facebook
LinkedIn
WhatsApp
ಆಯಿಲ್ ಟ್ಯಾಂಕರ್‌ಗೆ ರೋಲ್ಸ್ ರಾಯ್ಸ್ ಡಿಕ್ಕಿ, ಇಬ್ಬರು ಸಾವು

ಹರಿಯಾಣ: ಐಷಾರಾಮಿ ರೋಲ್ಸ್ ರಾಯ್ಸ್ ಕಾರು ಓಡಿಸಬೇಕೆಂಬುದು ಎಷ್ಟೋ ಜನರ ಕನಸು. ದಿರ ಬೆಲೆಯೂ ಕೋಟಿಗಟ್ಟಲೆ. ಇದೇ ಕಾರು ಇದೀಗ ಅಪಘಾತಕ್ಕೊಳಗಾಗಿ ಸುಟ್ಟು ಭಸ್ಮವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಹರಿಯಾಣದ ನುಹ್‌ನ ದೆಹಲಿ- ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಆಯಿಲ್ ಟ್ಯಾಂಕರ್‌ಗೆ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ಡಿಕ್ಕಿಹೊಡೆದಿದೆ. ಘಟನೆಯಲ್ಲಿ ಐಷಾರಾಮಿ ಕಾರು ಹಾಗೂ ಟ್ಯಾಂಕರ್ ಸಂಪೂರ್ಣ ಸುಟ್ಟು ಭಸ್ಮವಾಗಿದೆಯಾದರೂ ಮೃಪಟ್ಟಿದ್ದು ಮಾತ್ರ ಟ್ಯಾಂಕರ್​ನಲ್ಲಿದ್ದವರು.

ಮೃತರನ್ನು ಟ್ಯಾಂಕರ್ ಚಾಲಕ ರಾಮಪ್ರೀತ್ ಮತ್ತು ಆತನ ಸಹಾಯಕ ಕುಲದೀಪ್ ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಟ್ಯಾಂಕರ್​ನಲ್ಲಿದ್ದವರಿಗೆ ತಪ್ಪಿಸಿಕೊಳ್ಳಲು ಸಹಾಯವಾಗಿಲ್ಲ. ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಎಲ್ಲಾ ಐವರನ್ನು ಹಿಂದೆ ಬರುತ್ತಿದ್ದ ಮತ್ತೊಂದು ಕಾರಿನಲ್ಲಿದ್ದ ಅವರ ಸಂಬಂಧಿಕರು ರಕ್ಷಿಸಿದ್ದಾರೆ. ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಐವರ ಪೈಕಿ ಮೂವರು ಗಾಯಗೊಂಡಿದ್ದು, ಗುರುಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

230 ಕಿಮೀ ಸ್ಪೀಡ್​ನಲ್ಲಿದ್ದ ಕಾರು

10 ಕೋಟಿ ರೂಪಾಯಿ ಬೆಲೆಯ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರು ಅಪಘಾತದ ಸಮಯದಲ್ಲಿ ಗಂಟೆಗೆ 230 ಕಿಮೀ ಸ್ಪೀಡ್​ನಲ್ಲಿತ್ತು. ಅಪಘಾತಕ್ಕೊಳಗಾದ ರೋಲ್ಸ್ ರಾಯ್ಸ್ ಕಾರು ಹಾಗೂ ಅದರ ಹಿಂದಿದ್ದ ಎಲ್ಲಾ ಐದಾರು ಕಾರುಗಳು ಐಷಾರಾಮಿ ಕಾರುಗಳು ಆಗಿದ್ದವು. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ, ಆದರೆ ಅಪಘಾತಕ್ಕೆ ಟ್ಯಾಂಕರ್ ಚಾಲಕನನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ. ಪಾಪ ಅವರು ಬಡವರು ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಿದ್ದವರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟ್ಯಾಂಕರ್‌ನಲ್ಲಿದ್ದವರು ಈ ಮಾರ್ಗದಲ್ಲಿ ಪ್ರತಿದಿನ ಸಂಚರಿಸುತ್ತಾರೆ. ಅಪಘಾತ ಸಂಭವಿಸಿದಾಗ ಎರಡೂ ವಾಹನಗಳು ದೆಹಲಿಯಿಂದ ಬರುತ್ತಿದ್ದವು. ಅಪಘಾತದ ಸ್ಥಳದಲ್ಲಿ ಯು-ಟರ್ನ್ ಮಾಡಲು ಜಾಗವಿತ್ತು. ಅಲ್ಲಿ ಟ್ಯಾಂಕರ್​ ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ನುಹ್ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist