ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜುಲೈ 27 ರಂದು ಓಲಾ, ಊಬರ್, ಆಟೋ, ಟ್ಯಾಕ್ಸಿ ಸೇವೆ ಜೊತೆಗೆ ಖಾಸಗಿ ಬಸ್ ಸೇವೆಯೂ ಸ್ಥಗಿತ - ಬಂದ್ ಗೆ ಕರೆ!

Twitter
Facebook
LinkedIn
WhatsApp
49 2

ಬೆಂಗಳೂರು: ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲೊಂದಾದ ಶಕ್ತಿಯೋಜನೆ(Shakti scheme)ಯನ್ನ ಜಾರಿಗೆ ತಂದಿದ್ದು, ಮಹಿಳೆಯರು ಇದರ ಸದುಪಯೋಗವನ್ನ ಪಡೆಯುತ್ತಿದ್ದಾರೆ. ಆದರೆ, ಇದರಿಂದ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್​ಗಳಿಗೂ ದೊಡ್ಡ ಮಟ್ಟದ ತೊಂದರೆ ಉಂಟಾಗಿದ್ದು, ಖಾಸಗಿ ಸಾರಿಗೆ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆ ಇದೇ ಜುಲೈ 26ರ ಮಧ್ಯರಾತ್ರಿಯಿಂದ ಜುಲೈ 27ರ ಮಧ್ಯರಾತ್ರಿವರೆಗೆ ಶಕ್ತಿ ಯೋಜನೆ ವಿರೋಧಿಸಿ ಆಟೋ, ಟ್ಯಾಕ್ಸಿ, ಓಲಾ, ಉಬರ್ ಸೇವೆ ಜೊತೆಗೆ ಖಾಸಗಿ ಬಸ್​​ಗಳು ಕೂಡ ಸೇವೆ​ ನಿಲ್ಲಿಸಲಿವೆ.​ ಈ ಕುರಿತು ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದಿಂದ ಬಂದ್​ಗೆ ಕರೆ ನೀಡಲಾಗಿದೆ.

ಇನ್ನು ಬಂದ್​ ಕುರಿತು ಮಾತನಾಡಿದ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ‘ ಜುಲೈ 26 ನೇ ತಾರೀಖು ಮಧ್ಯರಾತ್ರಿ 12 ಗಂಟೆಯಿಂದ 27 ನೇ ತಾರೀಖು ರಾತ್ರಿ 12 ಗಂಟೆಯವರೆಗೂ ಆಟೋ, ಟ್ಯಾಕ್ಸಿ, ಓಲಾ, ಊಬರ್ ಯಾವುದೇ ವೆಹಿಕಲ್ ಓಡಾಟ ಮಾಡಲ್ಲ. ಇವತ್ತು ಖಾಸಗಿ ಸಾರಿಗೆಯ ಮಾಲೀಕರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿ ಸರ್ಕಾರದ ಗಮನ ಸೆಳೆಯುತ್ತೆವೆ. ಇನ್ನು ಅಂದು ಖಾಸಗಿ ಬಸ್​ಗಳು ಕೂಡ ಓಡಾಟ ಮಾಡಲ್ಲ ಎಂದರು.

ಬೆಂಗಳೂರಿನಲ್ಲಿ ಇರುವ ಖಾಸಗಿ ಮಾಲೀಕರಿಗೆ ಮನವಿ ಮಾಡುತ್ತೇವೆ. ಶಕ್ತಿ ಯೋಜನೆಯಿಂದ ತುಂಬಾ ಹೊಡೆತ ಬಿದ್ದಿದೆ‌. ಶಕ್ತಿಯೋಜನೆಗೆ ಒಂದು ಮಾರ್ಗಸೂಚಿ ಬಿಡುಗಡೆ ಮಾಡಿ, ಒಂದೂ ಮಾರ್ಗಸೂಚಿ ಇಲ್ಲದೇ ಇರುವುದರಿಂದ ನಮ್ಮ ಖಾಸಗಿ ಬಸ್​ಗಳಿಗೆ ನಷ್ಟ ಆಗುತ್ತಿದೆ. ಅದರ ಬದಲು ಬಸ್​ಗಳಲ್ಲಿ ಎಷ್ಟು ಸೀಟ್ ಇರುತ್ತದೆಯೋ ಅಷ್ಟೇ ಸೀಟ್ ಹಾಕಬೇಕು ಎಂದು ಮಾಡಿ. ಸರ್ಕಾರಿ ಬಸ್​ಗಳಂತೆ ಖಾಸಗಿ ಬಸ್​ಗಳನ್ನ ಕೂಡ ಶಕ್ತಿ ಯೋಜ‌ನೆಗೆ ಕಿಮೀ ಮಿತಿಯಲ್ಲಿ ಬಳಸಿಕೊಳ್ಳಿ ಎಂದರು.

ಇನ್ನು ಸರ್ಕಾರದ ಶಕ್ತಿ ಯೋಜನೆ ವಿರುದ್ದ ಬಂದ್​ಗೆ ಕರೆ ನೀಡಿರುವ ಖಾಸಗಿ ವಾಹನಗಳ ಮಾಲೀಕರ ಬೆಂಬಲಕ್ಕೆ ಕನ್ನಡ ಸಂಘಟನೆಗಳು ಬೆಂಬಲ ಕೊಡಲು ಒಪ್ಪಿದ್ದಾರೆ. ಅವರು ಕೂಡ ಹೋರಾಟದಲ್ಲಿ ಪಾಲ್ಗೋಳ್ಳುತ್ತಾರೆ. ಜೊತೆಗೆ ನಾವು ಬೇರೆ ಬೇರೆ ಸಂಘಟನೆಗಳ ಬೆಂಬಲವನ್ನ ಕೋರಿದ್ದೆವೆ. ಬೇರೆ ಸಂಘಟನೆಗಳು ಕೂಡ ಬೆಂಬಲ ಕೊಡುತ್ತಾರೆ ಎಂದು ಆದರ್ಶ್ ಆಟೋ ಅಸೋಸಿಯೇಷನ್ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ

ದಾವಣಗೆರೆ, ಜುಲೈ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು (CCB Police) ದಾವಣಗೆರೆಯಲ್ಲಿ (Davanagere) ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿದ್ದ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇತ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಸಿಬಿ ವಶದಲ್ಲಿರುವ ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಫಯಾಜ್ ವುಲ್ಲಾ (30) ಎಂಬ ವ್ಯಕ್ತಿಯನ್ನ ಇಂದು ಬೆಳಿಗ್ಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾವಣಗೆರೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಫಯಾಜ್ ವುಲ್ಲಾನನ್ನು ವಶಕ್ಕೆ ಪಡೆದಿದ್ದು, ಶಂಕಿತರಿಗೆ ಮತ್ತು ಫಯಾಜ್​ಗೂ ಲಿಂಕ್ ಇತ್ತಾ ಎಂಬ ಸಂಶಯ ಮೂಡಿಸಿದೆ.

ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು. ಬೆಂಗಳೂರಿನಲ್ಲಿ ಕುಕೃತ್ಯ ಎಸಗಲು ವಿದೇಶದಿಂದ ಹಣ ಬರುತ್ತಿತ್ತು ಎಂದು ತಿಳಿದುಬಂದಿದೆ.

ವ್ಯವಹಾರ ಸಂಬಧ 2017 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಮಂದಿ ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ವೇಳೆ ಉಗ್ರರ ಸಂಪರ್ಕಕ್ಕೆ ಬಂದ್ದಿದ್ದ ಅವರು ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡುವ ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ಎಂಬಾತ ರಕ್ತ ಚಂದನ ಪ್ರಕರಣದಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದು, ನಂತರ ಬಿಡುಗಡೆಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನಿಂದಲೇ ಈ ಐವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರು ಬಿಚ್ಚಿಟ್ಟದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist