ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ಟೋಬರ್ 25 ರಂದು ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಬುಲಾವ್‌...!

Twitter
Facebook
LinkedIn
WhatsApp
ಅಕ್ಟೋಬರ್ 25 ರಂದು ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಬುಲಾವ್‌...!

ಬೆಂಗಳೂರು, ಅಕ್ಟೋಬರ್‌ 21: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಕಮಲ-ದಳ ನಾಯಕರಲ್ಲೇ ಮೈತ್ರಿ ಗೆ ವಿರೋಧಿಸಿ ಬಹಿರಂಗವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ.

ಹೌದು, ಅಕ್ಟೋಬರ್‌ 25 ರಂದು ದೆಹಲಿ ಬಂದು ಭೇಟಿ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ದೆಹಲಿಗೆ ತೆರಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿದ್ದು, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನವನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿಯಾಗಿ ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ನೀಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರ ಮಾಡಿಕೊಂಡಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿವಿ ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು.

ಈಗಾಗಲೇ ಜೆಡಿಎಸ್‌ ಜೊತೆಗಿನ ಮೈತ್ರಿಯಿಂದಾಗಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರ್ತಾರಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಡಿ ವಿ ಸದಾನಂದಗೌಡ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

ಇನ್ನೂ ಈ ಬಾರೀ ಬಿಜೆಪಿಯಲ್ಲಿ 12 ಜನ ಸಂಸದರಿಗೆ ಈ ಬಾರೀ ಟಿಕೆಟ್‌ ಕೈತಪ್ಪಲಿದೆ ಎಂಬ ವರದಿಯಾಗಿದ್ದು, ಆ 12 ಜನ ಸಂಸದರ ಪೈಕಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡ ಅವರಿಗೆ ಈ ಬಾರೀ ಟಿಕೆಟ್‌ ಕೈ ತಪ್ಪಲಿದೆ ಎನ್ನಲಾಗಿದೆ. ಇನ್ನೂಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಆಕ್ಟಿವ್ ಆಗಿರೋ ಸದಾನಂದ ಗೌಡರು ಬಿಜೆಪಿಯ ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಸಾಲು ಸಾಲು ಪ್ರತಿಭಟನೆಯನ್ನು ಸದನಾಂದ ಗೌಡರು ಭಾಗಿಯಾಗಿದ್ದಾರೆ.

ಮೈತ್ರಿ ಕುರಿತು ಡಿ ವಿ ಸದಾನಂದಗೌಡರು ಹೇಳಿದ್ದೇನು?

ಹೌದು, 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದ ಆಡಳಿತರೂಢ ಕಾಂಗ್ರೆಸ್‌ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರೇ ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದರಾದ ಸದಾನಂದಗೌಡ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist