ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದಾರುಣ ಸಾವು!
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.
ದುಬಾರಿ ನಾಯಿಯನ್ನು ಕೊಡಿಸಲಿಲ್ಲವೆಂದು ಯುವಕ ಆತ್ಮಹತ್ಯೆ
ಹುಬ್ಬಳ್ಳಿ: ದುಬಾರಿ ನಾಯಿ (Dog) ಮೇಲಿನ ಪ್ರೀತಿ ಓರ್ವ ಯುವಕನನ್ನು ಬಲಿಪಡೆದಿದೆ. ತಾನು ಕೇಳಿದ ನಾಯಿಯನ್ನು ಪೋಷಕರು ಕೊಡಿಸಲಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.
ಹುಬ್ಬಳ್ಳಿ ಮಿಷನ್ ಕಾಂಪೌಂಡ್ನಲ್ಲಿ ಈ ಘಟನೆ ನಡೆದಿದ್ದು, ಅಲೆನ್ ಭಸ್ಮೆ (24) ಆತ್ಮಹತ್ಯೆಗೆ ಶರಣಾದ ಯುವಕ. ಅಲೆನ್ ನಾಯಿ ಪ್ರೇಮಿಯಾಗಿದ್ದು, 2 ಲಕ್ಷ ರೂ. ಮೌಲ್ಯದ ನಾಯಿಮರಿಯನ್ನು ಕೊಡಿಸುವಂತೆ ತಾಯಿಯ ಬಳಿ ಹಠ ಮಾಡುತ್ತಿದ್ದ.
ಮಗನ ಕಾಟಕ್ಕೆ ಬೇಸತ್ತು ಅಲೆನ್ ತಾಯಿ ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದ ಅಲೆನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಬಗ್ಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.