ದಟ್ಟ ಮಂಜಿನಿಂದ ವಿಮಾನ ವಿಳಂಬ ಘೋಷಿಸಿದ ಪೈಲಟ್ ಮೇಲೆ ಪ್ರಯಾಣಿಕನಿಂದ ಹಲ್ಲೆ...!
ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ ಘಟನೆ ನಡೆದಿದೆ.ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವ್ಯಕ್ತಿಯೊಬ್ಬರು ಕೊನೆಯ ಸಾಲಿನಿಂದ ಏಕಾಏಕಿ ಧಾವಿಸಿ ಪೈಲಟ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವ್ಯಕ್ತಿ ಕ್ಯಾಪ್ಟನ್ ಮೇಲೆ ಹಲ್ಲೆ ಮಾಡಿದ ನಂತರ, ಇನ್ನೊಬ್ಬ ಸಿಬ್ಬಂದಿ ಕಣ್ಣೀರು ಸುರಿಸುತ್ತಾ ಪ್ರಯಾಣಿಕರಿಗೆ ನೀವು ಈ ರೀತಿ ಮಾಡುವಂತಿಲ್ಲ ಎಂದು ಹೇಳುವುದನ್ನು ಕಾಣಬಹುದು.
ವಿಡಿಯೋ ವೈರಲ್ ಆದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಪೈಲಟ್ ಮೇಲೆ ದೈಹಿಕ ಹಲ್ಲೆ ಮಾಡಿದ ಪ್ರಯಾಣಿಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಹಲವಾರು ವಿಮಾನಗಳು ವಿಳಂಬವಾಗಿವೆ. ಇಂಡಿಗೋ ಸಹ ಅಡೆತಡೆಗಳ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ಉತ್ತರ ಭಾರತದಾದ್ಯಂತ ಕಡಿಮೆ ಗೋಚರತೆ ಮತ್ತು ದಟ್ಟವಾದ ಮಂಜು ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ನಮ್ಮ ಸಿಬ್ಬಂದಿ ವಿವಿಧ ವಿಮಾನ ನಿಲ್ದಾಣಗಳಲ್ಲಿನ ವಿಳಂಬ ಮತ್ತು ರದ್ದತಿಗಳ ಬಗ್ಗೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿದೆ.
ನೆಹರೂ ಕಾಲದ ಕಾಂಗ್ರೆಸ್ನ ಪ್ರಣಾಳಿಕೆಯಲ್ಲೇ ರಾಮ ಮಂದಿರ ಇತ್ತು: ಸ್ಫೋಟಕ ಹೇಳಿಕೆ ನೀಡಿದ ಸಚಿವ ನಾಗೇಂದ್ರ
ಮಂಗಳೂರು: ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮ ಭಜನೆ ಮಾಡುತ್ತಾ ಬೆಳೆದವನು. ರಾಮ, ಸೀತೆ, ಲಕ್ಷ್ಮಣ, ಭರತ, ಅಳಿಲು ಸೇವೆ ಮಾಡಿದ ಜಾಂಬವ ಹೀಗೆ ಎಲ್ಲರೂ ಇದ್ದ ರಾಮ ನಮಗೆ ಬೇಕು. ಆದರೆ ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ತಪ್ಪು ಎಂದರು.
ಅನಂತ್ ಮಾತಿಗೆ ಕಿಮ್ಮತ್ತಿಲ್ಲ ಎಂದು ನಾಗೇಂದ್ರ ಇದೇ ಸಂದರ್ಭ ಹೇಳಿದ್ದಾರೆ. ನಾಡಿನ ಪುರಾತನ ಮಸೀದಿಗಳನ್ನು ಒಡೆದು ಅಲ್ಲಿ ದೇವಸ್ಥಾನ ನಿರ್ಮಿಸುತ್ತೇವೆ ಎನ್ನುವ ಅನಂತ ಕುಮಾರ ಹೆಗಡೆ ಮಾತಿಗೆ ಕಿಮ್ಮತ್ತಿಲ್ಲ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಇಂತಹ ಮಾತುಗಳು ಸಹಜ. ಅದನ್ನು ಪಕ್ಷ ಕೂಡ ಗಂಭೀರ ಪರಿಗಣಿಸಬೇಕಾಗಿಲ್ಲ ಎಂದರು.
ಅವರು ಜಾತಿ, ಧರ್ಮ ಬೇರೆ ಮಾಡಿಯೇ ರಾಜಕಾ ರಣ ಮಾಡಿದವರು. ಶಾಂತಿ ಕದಡಿ ರಾಜ ಕೀಯ ಲಾಭ ಪಡೆಯುವ ವ್ಯಕ್ತಿ ಅವರು. ಯಾವುದೇ ಪುಸ್ತಕದಲ್ಲಿ ಮಸೀದಿಗಳು ದೇವಸ್ಥಾನ ಆಗಿತ್ತು ಎಂದು ಉಲ್ಲೇಖ ಇಲ್ಲ. ಅವರಿಗೆ ತಲೆಗೆ ಬಂದಿದ್ದನ್ನು ಹೇಳಿಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.