ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

Twitter
Facebook
LinkedIn
WhatsApp
PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಇಂದು ಬುಧವಾರ ಬಿಡುಗಡೆ ಆಗುತ್ತಿದೆ. ಒಂಬತ್ತು ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಹಣ ಇವತ್ತಿನಿಂದ ಜಮೆ ಆಗಲು ಶುರುವಾಗಲಿದೆ. ಡಿಸೆಂಬರ್​ನಿಂದ ಮಾರ್ಚ್​ವರೆಗಿನ ಅವಧಿಯ 2,000 ರೂ ಹಣ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. 16ನೇ ಕಂತಿನ ಹಣದ ಬಿಡುಗಡೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಲಿದ್ದಾರೆ.

ರೈತರ ವ್ಯವಸಾಯ ಕಾರ್ಯಕ್ಕೆ ಅನುಕೂಲವಾಗಲೆಂದು ಸರ್ಕಾರ 2019ರಲ್ಲಿ ಆರಂಭಿಸಿದ ಯೋಜನೆ ಪಿಎಂ ಕಿಸಾನ್ ಸಮ್ಮಾನ್ ನಿಧಿ. ಇದರ ಅಡಿಯಲ್ಲಿ ರೈತರಿಗೆ 2,000 ರೂಗಳ 3 ಕಂತುಗಳಂತೆ ವರ್ಷಕ್ಕೆ 6,000 ರೂ ಹಣವನ್ನು ಸರ್ಕಾರ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತದೆ. ಏಪ್ರಿಲ್​ನಿಂದ ಜುಲೈ, ಆಗಸ್ಟ್​ನಿಂದ ನವೆಂಬರ್, ಮತ್ತು ಡಿಸೆಂಬರ್​ನಿಂದ ಮಾರ್ಚ್​ವರೆಗೆ ಈ ಮೂರು ಅವಧಿಯಲ್ಲಿ ರೈತರಿಗೆ 2,000 ರೂ ಹಣ ಸಿಗುತ್ತದೆ.

16ನೇ ಕಂತಿನ ಹಣ ನಿಮಗೆ ಸಿಗುತ್ತಾ?

ನೀವು ಪಿಎಂ ಕಿಸಾನ್ ಯೊಜನೆಗೆ ಹೆಸರು ನೊಂದಾಯಿಸಿದ್ದರೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಲಾಗಿರುತ್ತದೆ. ಈ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ.

  • ಪಿಎಂ ಕಿಸಾನ್ ಅಧಿಕೃತ ಪೋರ್ಟಲ್​ಗೆ ಹೋಗಿ: pmkisan.gov.in/
  • ಕೆಳಗೆ ತುಸು ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ನೋಡಬಹುದು. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಮತ್ತು ಗ್ರಾಮವನ್ನು ಆಯ್ದುಕೊಳ್ಳಿ.
  • ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
  • ಇದರಲ್ಲಿ ಗ್ರಾಮದಲ್ಲಿರುವ ಎಲ್ಲಾ ಪಿಎಂ ಕಿಸಾನ್ ಫಲಾನುಭವಿಗಳ ಹೆಸರುಗಳಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ.
  • ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಾತ್ರಿಪಡಿಸಿಕೊಳ್ಳಿ.

ಬೆನಿಫಿಶಿಯರಿ ಲಿಸ್ಟ್​ನಲ್ಲಿ ಹೆಸರಿಲ್ಲದಿದ್ದರೆ ಏನು?

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅದಕ್ಕೆ ಬೇರೆ ಕಾರಣಗಳಿರಬಹುದು. ನೀವು ಇಕೆವೈಸಿ ಮಾಡಿಲ್ಲದೇ ಇರಬಹುದು. ಅಥವಾ ತಡವಾಗಿ ಯೋಜನೆಗೆ ನೊಂದಾಯಿಸಿರಬಹುದು.

ನೀವು ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಕೆವೈಸಿ ಅಪ್​ಡೇಟ್ ಮಾಡಬಹುದು. ಅಥವಾ ಆನ್​ಲೈನ್​ನಲ್ಲೇ ಇಕೆವೈಸಿ ನೀಡಬಹುದು. ಪಿಎಂ ಕಿಸಾನ್ ಪೋರ್ಟಲ್​ನ ಫಾರ್ಮರ್ಸ್ ಕಾರ್ನರ್​ನಲ್ಲಿ ಮೊದಲ ಟ್ಯಾಬ್​ನಲ್ಲೇ ಇಕೆವೈಸಿ ಲಿಂಕ್ ಕಾಣಬಹುದು. ಅದನ್ನು ಕ್ಲಿಕ್ ಮಾಡಿ ನಿಮ್ಮ ಆಧಾರ್ ದಾಖಲೆಯನ್ನು ಅಪ್​ಡೇಟ್ ಮಾಡಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist