ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

Twitter
Facebook
LinkedIn
WhatsApp
PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಇಂದು ಬುಧವಾರ ಬಿಡುಗಡೆ ಆಗುತ್ತಿದೆ. ಒಂಬತ್ತು ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಹಣ ಇವತ್ತಿನಿಂದ ಜಮೆ ಆಗಲು ಶುರುವಾಗಲಿದೆ. ಡಿಸೆಂಬರ್​ನಿಂದ ಮಾರ್ಚ್​ವರೆಗಿನ ಅವಧಿಯ 2,000 ರೂ ಹಣ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. 16ನೇ ಕಂತಿನ ಹಣದ ಬಿಡುಗಡೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಲಿದ್ದಾರೆ.

ರೈತರ ವ್ಯವಸಾಯ ಕಾರ್ಯಕ್ಕೆ ಅನುಕೂಲವಾಗಲೆಂದು ಸರ್ಕಾರ 2019ರಲ್ಲಿ ಆರಂಭಿಸಿದ ಯೋಜನೆ ಪಿಎಂ ಕಿಸಾನ್ ಸಮ್ಮಾನ್ ನಿಧಿ. ಇದರ ಅಡಿಯಲ್ಲಿ ರೈತರಿಗೆ 2,000 ರೂಗಳ 3 ಕಂತುಗಳಂತೆ ವರ್ಷಕ್ಕೆ 6,000 ರೂ ಹಣವನ್ನು ಸರ್ಕಾರ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತದೆ. ಏಪ್ರಿಲ್​ನಿಂದ ಜುಲೈ, ಆಗಸ್ಟ್​ನಿಂದ ನವೆಂಬರ್, ಮತ್ತು ಡಿಸೆಂಬರ್​ನಿಂದ ಮಾರ್ಚ್​ವರೆಗೆ ಈ ಮೂರು ಅವಧಿಯಲ್ಲಿ ರೈತರಿಗೆ 2,000 ರೂ ಹಣ ಸಿಗುತ್ತದೆ.

16ನೇ ಕಂತಿನ ಹಣ ನಿಮಗೆ ಸಿಗುತ್ತಾ?

ನೀವು ಪಿಎಂ ಕಿಸಾನ್ ಯೊಜನೆಗೆ ಹೆಸರು ನೊಂದಾಯಿಸಿದ್ದರೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಲಾಗಿರುತ್ತದೆ. ಈ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ.

  • ಪಿಎಂ ಕಿಸಾನ್ ಅಧಿಕೃತ ಪೋರ್ಟಲ್​ಗೆ ಹೋಗಿ: pmkisan.gov.in/
  • ಕೆಳಗೆ ತುಸು ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ನೋಡಬಹುದು. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಮತ್ತು ಗ್ರಾಮವನ್ನು ಆಯ್ದುಕೊಳ್ಳಿ.
  • ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
  • ಇದರಲ್ಲಿ ಗ್ರಾಮದಲ್ಲಿರುವ ಎಲ್ಲಾ ಪಿಎಂ ಕಿಸಾನ್ ಫಲಾನುಭವಿಗಳ ಹೆಸರುಗಳಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ.
  • ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಾತ್ರಿಪಡಿಸಿಕೊಳ್ಳಿ.

ಬೆನಿಫಿಶಿಯರಿ ಲಿಸ್ಟ್​ನಲ್ಲಿ ಹೆಸರಿಲ್ಲದಿದ್ದರೆ ಏನು?

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅದಕ್ಕೆ ಬೇರೆ ಕಾರಣಗಳಿರಬಹುದು. ನೀವು ಇಕೆವೈಸಿ ಮಾಡಿಲ್ಲದೇ ಇರಬಹುದು. ಅಥವಾ ತಡವಾಗಿ ಯೋಜನೆಗೆ ನೊಂದಾಯಿಸಿರಬಹುದು.

ನೀವು ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಕೆವೈಸಿ ಅಪ್​ಡೇಟ್ ಮಾಡಬಹುದು. ಅಥವಾ ಆನ್​ಲೈನ್​ನಲ್ಲೇ ಇಕೆವೈಸಿ ನೀಡಬಹುದು. ಪಿಎಂ ಕಿಸಾನ್ ಪೋರ್ಟಲ್​ನ ಫಾರ್ಮರ್ಸ್ ಕಾರ್ನರ್​ನಲ್ಲಿ ಮೊದಲ ಟ್ಯಾಬ್​ನಲ್ಲೇ ಇಕೆವೈಸಿ ಲಿಂಕ್ ಕಾಣಬಹುದು. ಅದನ್ನು ಕ್ಲಿಕ್ ಮಾಡಿ ನಿಮ್ಮ ಆಧಾರ್ ದಾಖಲೆಯನ್ನು ಅಪ್​ಡೇಟ್ ಮಾಡಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ