ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ಭದ್ರತೆಗಾಗಿ ತೆರಳುತ್ತಿದ್ದ ಪೊಲೀಸ್ ಕಾರು ಅಪಘಾತ ; 6 ಮಂದಿ ಪೊಲೀಸರು ದಾರುಣ ಸಾವು..!

Twitter
Facebook
LinkedIn
WhatsApp
ಮೋದಿ ಭದ್ರತೆಗಾಗಿ ತೆರಳುತ್ತಿದ್ದ ಪೊಲೀಸ್ ಕಾರು ಅಪಘಾತ ; 6 ಮಂದಿ ಪೊಲೀಸರು ದಾರುಣ ಸಾವು..!

ಜೈಪುರ: ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರ‍್ಯಾಲಿಗಾಗಿ ನಿಯೋಜನೆಗೊಂಡಿದ್ದ ಆರು ಪೊಲೀಸರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚುರು ಜಿಲ್ಲೆಯ (Churu Accident) ಕನೋಟ ಪೊಲೀಸ್‌ ಪೋಸ್ಟ್‌ ಪ್ರದೇಶದಲ್ಲಿ ಟ್ರಕ್‌ಗೆ ಪೊಲೀಸರು ಇದ್ದ ಎಸ್‌ಯುವಿ ವಾಹನವು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ (Rajasthan Accident) ಆರು ಪೊಲೀಸರು ಮೃತಪಟ್ಟರೆ, ಒಬ್ಬ ಪೊಲೀಸ್‌ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

 

ನಾಗೌರ್‌ ಜಿಲ್ಲೆಯ ಝುಂಝುನುದಲ್ಲಿ ಭಾನುವಾರ (ನವೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ಆಯೋಜನೆಗೊಂಡಿತ್ತು. ಇದಕ್ಕಾಗಿ ಪೊಲೀಸರನ್ನು ವಿಐಪಿ ಡ್ಯೂಟಿಗೆ ನಿಯೋಜಿಸಲಾಗಿತ್ತು. ಪೊಲೀಸರು ಭಾನುವಾರ ಬೆಳಗಿನ ಜಾವ ಮಹೀಂದ್ರಾ ಜೈಲೋ (Xylo) ಕಾರಿನಲ್ಲಿ ನಾಗೌರ್‌ನಿಂದ ಝುಂಝುನುಗೆ ತೆರಳುತ್ತಿದ್ದರು. ಇನ್ನೂ ಮಂಜು ಮುಸುಕಿದ ವಾತಾವರಣ ಇದ್ದ ಕಾರಣ ಪೊಲೀಸರು ಇದ್ದ ಕಾರು ಟ್ರಕ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

 

ಗಾಯಗೊಂಡಿರುವ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಸ್ಥಿತಿಯೂ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತ ಸಂಭವಿಸುತ್ತಲೇ ಐವರು ಪೊಲೀಸರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ಪೊಲೀಸ್‌ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

ಮೃತ ಪೊಲೀಸರನ್ನು ರಾಮಚಂದ್ರ (56), ಸುಖರಾಮ್‌ (38), ಕುಂಭಾರಮ್‌ (35), ಧನರಾಮ್‌ (33), ಸುರೇಶ್‌ (35) ಹಾಗೂ ಮಹೇಂದ್ರ (51) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪೊಲೀಸ್‌ ಅಧಿಕಾರಿಯನ್ನು ಸುಖರಾಮ್‌ ಖೋಜಾ ಎಂಬುವರು ಗಾಯಗೊಂಡಿದ್ದಾರೆ. ಇವರು ನಾಗೌರ್‌ ಜಿಲ್ಲೆಯ ಖಿನ್ವಸಾರ್‌ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕೆಲ ತಿಂಗಳ ಹಿಂದೆ ಹರಿಯಾಣದಲ್ಲಿ ಧಾರ್ಮಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ ಮತ್ತು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಗೃಹರಕ್ಷಕರು ಮೃತಪಟ್ಟು, ಏಳು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಹಿಂಸಾಚಾರ ನಡೆಸುತ್ತಿದ್ದ ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ