ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಸ್ತೆ ಬದಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ; ಇಲ್ಲಿದೆ ವಿಡಿಯೋ.!

Twitter
Facebook
LinkedIn
WhatsApp
ರಸ್ತೆ ಬದಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ; ಇಲ್ಲಿದೆ ವಿಡಿಯೋ.!

ದೆಹಲಿಯ ಇಂದ್ರಲೋಕ್‌ನ  ಮೆಟ್ರೋ ಸ್ಟೇಷನ್‌ ಸಮೀಪದ ಬೀದಿಯ ರಸ್ತೆಯಲ್ಲಿ ಶುಕ್ರವಾರದ ನಮಾಜ್ ಮಾಡುತ್ತಿದ್ದ ಮುಸ್ಲಿಮರಿಗೆ ಒದ್ದ ದೆಹಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಪೊಲೀಸ್‌ ಅಧಿಕಾರಿ ಮುಸ್ಲಿಮರನ್ನು ಒದೆಯುತ್ತಿರುವ ವಿಡಿಯೊ ವೈರಲ್  ಆಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಸೂಕ್ತ ಕ್ರಮಕ್ಕಾಗಿ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದರು. ಉತ್ತರ ಡಿಸಿಪಿ ಮನೋಜ್ ಮೀನಾ  ಈ ಬಗ್ಗೆ ಮಾತನಾಡಿ, ʼʼಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿದ್ದೇವೆ. ಘಟನೆಯ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದುʼʼ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಮುಖಂಡರ ಖಂಡನೆ: ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಈ ವೈರಲ್‌ ವಿಡಿಯೊವನ್ನು ಹಂಚಿಕೊಂಡು, “ಅಮಿತ್ ಶಾ ಅವರ ದೆಹಲಿ ಪೊಲೀಸರ ಧ್ಯೇಯ ವಾಕ್ಯ ಶಾಂತಿ, ಸೇವೆ, ನ್ಯಾಯ…” ಎಂದು ವ್ಯಂಗ್ಯವಾಡಿದ್ದಾರೆ. ಜತೆಗೆ ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್ ಗರ್ಹಿ ಈ ಘಟನೆಯ ವಿಡಿಯೊವನ್ನು ಸೋಷಿಯಲ್‌ ಮಿಡಿಯದಲ್ಲಿ ಹಂಚಿಕೊಂಡು, “ಈ ದೆಹಲಿ ಪೊಲೀಸ್ ನಮಾಜ್ ಮಾಡುವಾಗ ವ್ಯಕ್ತಿಯನ್ನು ಒದೆಯುತ್ತಾನೆ. ಬಹುಶಃ ಆತ ಮಾನವೀಯತೆಯ ಮೂಲ ತತ್ವಗಳನ್ನು ಅರ್ಥ ಮಾಡಿಕೊಂಡಿಲ್ಲ. ಈ ಪೊಲೀಸ್‌ ಅಧಿಕಾರಿಯ ಹೃದಯದಲ್ಲಿ ದ್ವೇಷವೇ ತುಂಬಿದೆ. ಈ ಅಧಿಕಾರಿಯ ವಿರುದ್ಧ ಸೂಕ್ತ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೇವೆಯಿಂದ ವಜಾಗೊಳಿಸುವಂತೆ ದೆಹಲಿ ಪೊಲೀಸರನ್ನು ಕೋರಲಾಗಿದೆʼʼ ಎಂದು ಬರೆದುಕೊಂಡಿದ್ದಾರೆ.

ಪ್ರತಿಭಟನೆ, ಸೂಕ್ತ ಕ್ರಮದ ಭರವಸೆ: ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಪ್ರತಿಭಟನೆ ನಡೆಸಿ, ಪೊಲೀಸ್‌ ವಿರುದ್ಧ ಘೋಷಣೆ ಕೂಗಿದರು. ಬಳಿಕ ಡಿಸಿಪಿ ಮನೋಜ್ ಮೀನಾ ಕ್ರಮ ಕೈಗೊಂಡು, ವಿಡಿಯೊದಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಗತ್ಯ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಏನಿದು ಘಟನೆ? ಶುಕ್ರವಾರದ ಪ್ರಾರ್ಥನೆಗಾಗಿ ಮಧ್ಯಾಹ್ನ ಇಂದ್ರಲೋಕ್‌ನ ಸ್ಥಳೀಯ ಮಸೀದಿಗೆ ಅನೇಕರು ಆಗಮಿಸಿದ್ದರು. ಮಸೀದಿಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಜಮಾಯಿಸಿದ್ದರು. ಹೀಗಾಗಿ ಮಸೀದಿ ಒಳಗೆ ಸ್ಥಳಾವಕಾಶದ ಕೊರತೆಯಿಂದಾಗಿ ಕೆಲವರು ಹತ್ತಿರದ ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಆರಂಭಿಸಿದ್ದರು. ರಸ್ತೆಯಲ್ಲಿ ಜನರು ಗುಂಪು ಗೂಡುವುದನ್ನು ಗಮನಿಸಿದ ಪೊಲೀಸ್ ಅಧಿಕಾರಿಗಳು ಅವರನ್ನು ಚದುರಿಸಲು ಮುಂದೆ ಬಂದರು. ಈ ವೇಳೆ ಪೊಲೀಸ್‌ ಅಧಿಕಾರಿಯೊಬ್ಬರು ಪ್ರಾರ್ಥನೆಗಾಗಿ ಮಂಡಿಯೂರಿ ಕುಳಿತಿದ್ದ ವ್ಯಕ್ತಿಗಳನ್ನು ಒದ್ದಿದ್ದಾರೆ ಮತ್ತು ಹೊಡೆದಿದ್ದಾರೆ. ಜತೆಗೆ ಪ್ರಶ್ನಿಸಿದವರನ್ನು ತಳ್ಳಿ, ಬೈದಿದ್ದಾರೆ. ಈ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಮಾತ್ರವಲ್ಲ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅನೇಕರು ಪೊಲೀಸ್‌ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಯನ್ನು ಹುಟ್ಟು ಹಾಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist