ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಸೇರ್ಪಡೆಗೆ ಸಜ್ಜಾದ್ರಾ ಪ್ರಕಾಶ್ ರಾಜ್; ನಟ ಹೇಳಿದ್ದಿಷ್ಟು..!

Twitter
Facebook
LinkedIn
WhatsApp
ಬಿಜೆಪಿ ಸೇರ್ಪಡೆಗೆ ಸಜ್ಜಾದ್ರಾ ಪ್ರಕಾಶ್ ರಾಜ್; ನಟ ಹೇಳಿದ್ದಿಷ್ಟು..!

ಬಹುಭಾಷೆಯ ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ನಟ ಪ್ರಕಾಶ್​ ರಾಜ್​ (Prakash Raj) ಅವರು ರಾಜಕೀಯದಲ್ಲೂ ಆಸಕ್ತಿ ಹೊಂದಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಅನೇಕ ಸಂದರ್ಭಗಳಲ್ಲಿ ಟೀಕಿಸಿದ್ದಾರೆ. ಸರ್ಕಾರಗಳು ತೆಗೆದುಕೊಳ್ಳುವ ನಿಲುವುಗಳ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬುದನ್ನು ನೇರ ನುಡಿಗಳಿಂದ ತಿಳಿಸಿದ್ದಾರೆ. ಈಗ ಅವರು ಬಿಜೆಪಿ (BJP) ಪಕ್ಷಕ್ಕೆ ಸೇರುತ್ತಾರೆ ಎಂದು ಗಾಸಿಪ್​ ಹಬ್ಬಿದೆ. ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿದ ಈ ಗಾಳಿ ಸುದ್ದಿಗೆ ಪ್ರಕಾಶ್​ ರಾಜ್​ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಖ್ಯಾತ ನಟ ಪ್ರಕಾಶ್​ ರಾಜ್​ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆ’ ಎಂದು ಎಕ್ಸ್​ (ಟ್ವಿಟರ್​) ಬಳಕೆದಾರರೊಬ್ಬರು ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಪ್ರಕಾಶ್​ ರಾಜ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ಪ್ರಯತ್ನಿಸಿದ್ದಾರೆ ಅಂತ ನಾನು ಭಾವಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳುವಷ್ಟು ಅವರು ಸೈದ್ಧಾಂತಿಕವಾಗಿ ಶ್ರೀಮಂತವಾಗಿಲ್ಲ ಎಂಬುದು ಅವರಿಗೆ ಅರ್ಥ ಆಗಿರಬೇಕು. ನಿಮಗೆ ಏನು ಅನಿಸುತ್ತೆ ಸ್ನೇಹಿತರೇ. ಜಸ್ಟ್​ ಆಸ್ಕಿಂಗ್​’ ಎಂದು ಪ್ರಕಾಶ್​ ರಾಜ್​ ಟ್ವೀಟ್​ ಮಾಡಿದ್ದಾರೆ.

ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಕೆಲವು ನಡೆಯನ್ನು ಪ್ರಕಾಶ್​ ರಾಜ್​ ಅವರು ಕಟುವಾಗಿ ಟೀಕಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಆಗುತ್ತಿರುವ ಈ ಸಂದರ್ಭದಲ್ಲೂ ಕೂಡ ಅವರು ಸರಣಿ ಪೋಸ್ಟ್​ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಕೇಂದ್ರದಿಂದ ಕರ್ನಾಟಕಕ್ಕೆ ಸೂಕ್ತ ಅನುದಾನ ಸಿಕ್ಕಿಲ್ಲ ಎಂಬುದನ್ನು ಕೂಡ ಅವರು ಖಂಡಿಸಿದ್ದಾರೆ.

ನರೇಂದ್ರ ಮೋದಿ ಅವರು ನವಿಲಿಗೆ ಕಾಳು ತಿನ್ನಿಸುತ್ತಿರುವ ಫೋಟೋವನ್ನು ಹಾಗೂ ನವಿಲುಗರಿಯಲ್ಲಿ ಹಿಡಿದುಕೊಂಡಿರುವ ಮತ್ತೊಂದು ಫೋಟೋವನ್ನು ಪ್ರಕಾಶ್​ ರಾಜ್​ ಇತ್ತೀಚೆಗೆ ಪೋಸ್ಟ್​ ಮಾಡಿದ್ದಾರೆ. ‘ಹುಷಾರ್ರಪ್ಪಾ! ಮೊದ್ಲು ಕಾಳಾಕಿ. ಆಮೇಲೆ ಪುಕ್ಕ ಕಿತ್ಕೊತಾರೆ’ ಎಂದು ಅದಕ್ಕೆ ಅವರು ಕ್ಯಾಪ್ಷನ್​ ನೀಡಿದ್ದಾರೆ. ಇಂಥ ಅನೇಕ ಪೋಸ್ಟ್​ಗಳ ಮೂಲಕ ಪ್ರಕಾಶ್ ರಾಜ್​ ಅವರು ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist