ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!

Twitter
Facebook
LinkedIn
WhatsApp
21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿ ಗರ್ಭಿಣಿ ಮಹಿಳೆಯನ್ನು ಆಕೆಯ ತಾಯಿ ಮತ್ತು ಸಹೋದರ ಬೆಂಕಿ ಹಚ್ಚಿದ ನಂತರ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಮಹಿಳೆಯ ಮನೆಯವರು ಆಕ್ರೋಶಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರು ಮಗುವಿನ ತಂದೆಯ ಬಗ್ಗೆ ಕೇಳಿದರು, ಆದರೆ ಗರ್ಭಿಣಿ ಮಹಿಳೆ ಅವರಿಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲಿಲ್ಲ. ನಂತರ 21 ವರ್ಷದ ಮಹಿಳೆಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ. ಅರಣ್ಯದಲ್ಲಿದ್ದ ಕೆಲವು ರೈತರು ಮಹಿಳೆಯನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿನ ವೈದ್ಯರು ಆಕೆಯನ್ನು ಮೀರತ್‌ನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. 

ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸಲಾಗಿದೆ. “ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು.

ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಮೀರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಗಾರೆ ಕೆಲಸಕ್ಕೆ ಬಂದಿದ್ದ ಯುವಕನ ಬರ್ಬರ ಹತ್ಯೆ:

ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆಗೈದಿರುವ (Murder) ಪ್ರಕರಣ ನಗರದ (Hubballi) ಸಿಲ್ವರ್ ಟೌನ್‍ನಲ್ಲಿ ನಡೆದಿದೆ.

ಮೃತ ಯುವಕನನ್ನು ಮೌಲಾಲಿ (24) ಎಂದು ಗುರುತಿಸಲಾಗಿದೆ. ಆತ ಮುಂಡಗೋಡಿನ ಮರಗಡಿ ಮೂಲದವನು ಎಂದು ತಿಳಿದು ಬಂದಿದೆ. ನಗರಕ್ಕೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ಬೆಳಗ್ಗೆ 10 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆತನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ಗೋಕುಲ ರಸ್ತೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇನ್ಸ್ಟಾಗ್ರಾಮ್​ನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬೆಳಗಾವಿ: ಇನ್ಸ್ಟಾಗ್ರಾಮ್​ನಲ್ಲಿ ನಡೆದ ಕಿತ್ತಾಟ ಕೊನೆಗೆ ಬಾಲಕನ ಹತ್ಯೆಯಲ್ಲಿ ಕೊನೆಯಾಗಿದೆ. ಚಾಟಿಂಗ್​ ವಿಚಾರದಲ್ಲಿ ಶುರುವಾದ ಜಗಳ ಪ್ರಜ್ವಲ್ ಸುಂಕದ(17) ಎನ್ನುವ ಅಪ್ರಾಪ್ತ ಬಾಲಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಹುಡುಗಿ ಹೆಸರಿನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ಪ್ರಜ್ವಲ್‌ಗೆ ಮೆಸೇಜ್ ಮಾಡಲಾಗಿದೆ. ಮೆಸೇಜ್ ಮಾಡುತ್ತಿರುವುದು ಹುಡುಗ ಎಂದು ಗೊತ್ತಾಗುತ್ತಿದ್ದಂತೆಯೇ ಮೆಸೇಜ್​ನಲ್ಲಿ ಅವಾಚ್ಯವಾಗಿ ಬೈದಿದ್ದಾನೆ. ಇದರಿಂದ ಕೆರಳಿ ಗ್ಯಾಂಗ್ ಕಟ್ಟಿಕೊಂಡು ಬಂದು ಪ್ರಜ್ವಲ್ ಜತೆಗೆ ಜಗಳ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ಅಂತಿಮವಾಗಿ ಪ್ರಜ್ವಲ್​ನನ್ನು ಹತ್ಯೆ ಮಾಡಿದ್ದಾರೆ.

ಸೆಪ್ಟೆಂಬರ್​ 26ರಂದು ಸಂಜೆ ಹುಡುಗರ ಗ್ಯಾಂಗ್ , ಪ್ರಜ್ವಲ್​ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರಜ್ವಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ಕು ಬಾಲಾಪರಾಧಿಗಳು ಸೇರಿ ವಿಶಾಲ್ ಎಂಬಾತನನ್ನು ಬಂಧಿಸಿದ್ದಾರೆ.

ಒಟ್ಟಿನಲ್ಲಿ ಇನ್ನೂ ಬಾಲಿ ಬದುಕಬೇಕಿದ್ದ ಬಾಲಕ ಪ್ರಜ್ವಲ್​ನನ್ನು ಕ್ಷುಲ್ಲಕ ಕಾರಣಕ್ಕೆ ಜೀವ ತೆಗೆದಿರುವುದು ದುರಂತ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist