ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ನೆನಪಿರಲಿ ಪ್ರೇಮ್...!

Twitter
Facebook
LinkedIn
WhatsApp
ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ನೆನಪಿರಲಿ ಪ್ರೇಮ್...!

ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರೇಮ್​ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.  

 

‘ಕಾವೇರಿಗೆ ನಾವು ಪ್ರಾಣ ಕೊಡೋಕೆ ಸಿದ್ಧ’ ಅಂತ ಅನೇಕರ ಬಾಯಲ್ಲಿ ಕೇಳುತ್ತಿರುತ್ತೇವೆ. ಈಗ ‘ನೆನಪಿರಲಿ’ ಪ್ರೇಮ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ರಕ್ತದಲ್ಲಿ ಪತ್ರ ಬರೆದಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ಈ ಹಿಂದೆ ನಾನು ಪ್ರೀತಿಸಿದ ಹುಡುಗಿ ಜ್ಯೋತಿಗೋಸ್ಕರ ರಕ್ತದಲ್ಲಿ ಪತ್ರ ಬರೆದಿದ್ದೆ ಎಂದು ಪ್ರೇಮ್ ಹೇಳಿದ್ದರು. ಈಗ ಅವರಯ ಕಾವೇರಿಗೋಸ್ಕರ ಪತ್ರ ಬರೆದಿದ್ದಾರೆ.

 

“ಕಾವೇರಿ, ಕರ್ನಾಟಕಕ್ಕೆ ದಯವಿಟ್ಟು ನ್ಯಾಯ ಕೊಡಿ. ಕಾವೇರಿ ನಮ್ಮದು” ಎಂದು ಅವರು ರಕ್ತದಲ್ಲಿ ಪತ್ರ ಬರೆದಿದ್ದು, “ಸಿದ್ಧ ಕಣೋ ಪ್ರಾಣ ಕೊಡೋಕೆ, ಈ ಜಲ ನೆಲ ನಾಡು ನುಡಿಗೆ” ಎಂದು ಅಡಿಬರಹ ನೀಡಿದ್ದಾರೆ. ಹಾಗೆಯೇ ಆ ಪತ್ರದಲ್ಲಿ ಅವರ ಹಸ್ತದ ಅಚ್ಚನ್ನು ರಕ್ತದಲ್ಲಿ ನಮೂದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ