ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಧಾನಿ ಮೋದಿ ಬೆಂಗಳೂರಿಗೆ ; ಇಸ್ರೊ ಪ್ರಧಾನ ಕಚೇರಿಗೆ ಆಗಮಿಸಿದ ಮೋದಿ

Twitter
Facebook
LinkedIn
WhatsApp
ಪ್ರಧಾನಿ ಮೋದಿ ಬೆಂಗಳೂರಿಗೆ ; ಇಸ್ರೊ ಪ್ರಧಾನ ಕಚೇರಿಗೆ ಆಗಮಿಸಿದ ಮೋದಿ

ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಸ್ರೋ ಕಚೇರಿಯಲ್ಲಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ. ಶಂಕರನ್ ಮತ್ತು ಇಸ್ಟ್ರಾಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರಿಗೆ ಮಾತ್ರ ಪ್ರಧಾನಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಂಗಳೂರು ಪೊಲೀಸರಿಂದ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್‌ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಹೆಚ್‌ಎಎಲ್‌ ಏರ್‌ಪೋರ್ಟ್‌ನಿಂದ ಪೀಣ್ಯದವರೆಗೂ ಬಂದೋಬಸ್ತ್‌ ಇದೆ. ಪ್ರಧಾನಿ ಸಾಗುವ ರಸ್ತೆಯಲ್ಲಿ 2000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. HAL ಏರ್‌ಪೋರ್ಟ್‌ನಲ್ಲಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. HALನಲ್ಲಿ ವೈಟ್‌ಫೀಲ್ಡ್‌, ಪೂರ್ವ ವಿಭಾಗದ ಡಿಸಿಪಿಯಿಂದ ಭದ್ರತೆ. ಪ್ರಧಾನಿ ಸಾಗುವ ರಸ್ತೆಯಲ್ಲಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ, ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ನೇತೃತ್ವದಲ್ಲಿ ಬಂದೋಬಸ್ತ್‌. ಪೀಣ್ಯದಲ್ಲಿ ಉತ್ತರ ಡಿಸಿಪಿ ಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಭದ್ರತೆ. ಎಲ್ಲಾ ಭದ್ರತೆಗೂ ಪೊಲೀಸ್ ಆಯುಕ್ತ ದಯಾನಂದ್‌ ಮೇಲುಸ್ತುವಾರಿ. ಟ್ರಾಫಿಕ್ ವಿಭಾಗವನ್ನು ಎಂ.ಎನ್.ಅನುಚೇತ್ ನಿಭಾಯಿಸುತ್ತಿದ್ದಾರೆ.

ಭಾರತದಲ್ಲಿ ಬೆಳಕು ಹರಿದಿದೆ, ಆ ಬೆಳಕಿನಲ್ಲಿ ಬೆಂಗಳೂರಿಗರ ಮುಖ ನೋಡಿದೆ. ವಿದೇಶದಲ್ಲಿದ್ದಾಗ ಅಲ್ಲಿಂದಲೇ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಅದಕ್ಕೆ ಶೀಘ್ರದಲ್ಲೇ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯಪಾಲರಿಗೆ ಧನ್ಯವಾದ ಎಂದು ಮೋದಿ ಹೇಳಿದರು.

ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು.

ಹೆಚ್​ಎಎಲ್ ಏರ್​ಪೋರ್ಟ್​​ನಿಂದ ಇಸ್ರೋ ಕೇಂದ್ರಕ್ಕೆ ಹೊರಡುತ್ತಿದ್ದಂತೆಯೇ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದೇ ವೇಳೆ ಜನ ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು.

ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನಸುಕಿನಲ್ಲೇ ಮೋದಿ ಸಾಗುವ ರಸ್ತೆಯುದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist