ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು : ಕೆಎಸ್ಆರ್ಟಿಸಿ ಬಸ್ ಗೆ ಬೈಕ್ ಡಿಕ್ಕಿ ; ಯುವಕ ಸಾವು!

Twitter
Facebook
LinkedIn
WhatsApp
ಪುತ್ತೂರು : ಕೆಎಸ್ಆರ್ಟಿಸಿ ಬಸ್ ಗೆ ಬೈಕ್ ಡಿಕ್ಕಿ ; ಯುವಕ ಸಾವು!

ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ. ಅಪಘಾತಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರನ್ನು ಬಂಟ್ವಾಳ ಮೂಲದ ಅಹಮ್ಮದ್ ಆಶಿಕ್ ಅಕ್ಮಲ್ (18) ಎಂದು ಗುರುತಿಸಲಾಗಿದೆ. ಈತ ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದು, ಮಂಗಳೂರಿನಿಂದ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಸಾಧ್ಯವಾದಷ್ಟು ಎಡಬದಿಗೆ ಹೋದರೂ ದ್ವಿಚಕ್ರ ವಾಹನ ಸವಾರ ಬಸ್ ಗೆ ಬಂದು ಡಿಕ್ಕಿ ಹೊಡೆದು, ಬಸ್ ಚಕ್ರ ದಡಿಗೆ ಸಿಲುಕಿದ್ದಾನೆ. ಬಸ್ ನಲ್ಲಿ ಹೆಚ್ಚಿನ ಜನ ಇದ್ದಕಾರಣ ಮತ್ತಷ್ಟು ಬದಿಗೆ ಹೋಗುವ ಸಾಹಸ ಮಾಡಿಲ್ಲ ಎಂಬುದನ್ನು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಬಸ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗೆ ನೋಟಿಸ್ ಹೊರಡಿಸುವುದರಲ್ಲೇ ಇದೆ ಎನ್ಐಎ

ಪುತ್ತೂರು ಡಿಸೆಂಬರ್ 17: ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ವಾಂಟೆಡ್ ನೋಟಿಸ್ ಹೊರಡಿಸಿದೆ. ಈಗಾಗಲೇ ಹಲವು ಬಾರಿ ನೊಟೀಸ್ ನೀಡಿದ್ದರೂ ಆರೋಪಿಗಳ ಪತ್ತೆ ಮಾತ್ರ ಸಾಧ್ಯವಾಗಲೇ ಇಲ್ಲ. ಇದು ಎನ್ಐಎ ತನಿಖೆ ಮಂದಗತಿಯಲ್ಲಿ ನಡೆಯುತ್ತಿದೆ ಎನ್ನುವುದಕ್ಕೆ ಪುರಾವೆ ಆಗಿದೆ.

ಈ ಕುರಿತು ಐಎನ್ಎ ತನ್ನ ಎಕ್ಸ್ ಖಾತೆಯಲ್ಲಿ ಆರೋಪಿಗಳ ಫೋಟೋ ಸಹಿತ ವಿವರಗಳನ್ನು ಪ್ರಕಟಿಸಿದೆ. ಆರೋಪಿಗಳು ಪತ್ತೆಯಾದಲ್ಲಿ ವಾಟ್ಸ್ಆ್ಯಪ್ ಅಥವಾ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದು, ಮಾಹಿತಿ ನೀಡಿದವರ ವಿವರ ಗೌಪ್ಯವಾಗಿ ಇರಿಸುವುದಾಗಿ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಗಳಾದ ಬೆಳ್ಳಾರೆ ಮುಸ್ತಫಾ, ಮಸೂದ್ ಅಗ್ನಾಡಿ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಅಲಿಯಾಸ್ ಉಮರ್‌ಪಾರೂಕ್ ಮತ್ತು ಅಬೂಬಕ್ಟರ್‌ಸಿದ್ದಿಕ್ ಪತ್ತೆಗೆ ಸೂಚನೆ ನೀಡಲಾಗಿದೆ. ತಲೆಮರೆಸಿರುವ ಈ ಎಲ್ಲ ಆರೋಪಿಗಳ ಪತ್ತೆಗೆ ಎನ್‌ಐಎ ತಂಡ ಮಾಹಿತಿ ಕಲೆ ಹಾಕುತ್ತಿದೆ. 2022 ಜು.26ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿ ಈಗಾಗಲೇ 20 ಮಂದಿಯನ್ನು ಬಂಧಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಸೇರಿದಂತೆ ನಿಷೇಧಿತ ಪಿಎಫ್‌ಐ ಪ್ರಹಾಗೂ ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ನಾಪತ್ತೆಯಾಗಿರುವ ಆರೋಪಿಗಳ ಪಟ್ಟಿಯನ್ನು ಹೆಸರಿಸಿದೆ. ಇದರಲ್ಲಿ ಕರ್ನಾಟಕದ ಐವರು ಸೇರಿ 24 ಮಂದಿ ಆರೋಪಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಮೂವರು, ಕೇರಳದ 11, ಕರ್ನಾಟಕದ ಐವರು ಹಾಗೂ ತಮಿಳುನಾಡಿನ ಐವರು ನಾಪತ್ತೆಯಾಗಿರುವುದಾಗಿ ತಿಳಿಸಲಾಗಿದೆ. ಇವರಲ್ಲಿ ತಮಿಳುನಾಡಿನ ಐವರು ಕುಂಭಕೋಣಂ ರಾಮಲಿಂಗಂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ ಆರೋಪ ಹೊಂದಿದ್ದಾರೆ. ಕೇರಳ ಪಾಲಕ್ಕಾಡ್ ಶ್ರೀನಿವಾಸ್‌ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕೇರಳದ ನಾಲ್ವರು ಆರೋಪಿ ಆರೋಪಿಗಗಳಾದ ಅಬ್ದುಲ್ ವಹಾಬ್, ಅಬ್ದುಲ್ ರಶೀದ್, ಆಯೂಬ್ ಹಾಗೂ ಮತ್ತೊರ್ವನನ್ನು ಹೆಸರಿಸಲಾಗಿದೆ. ಇವರೆಲ್ಲ ಪಿಎಫ್‌ಐಗೆ ನೇಮಕಗೊಂಡು, ಕೊಲೆಗೆ ಒಳಸಂಚು, ಸರ್ಕಾರದ ವಿರುದ್ಧ ಪಿತೂರಿ, ದೇಶದ ಸಮಗ್ರತೆ, ಏಕತೆಗೆ ದಕ್ಕೆ ತರಲು ಯತ್ನಿಸಿದ ಆರೋಪ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist