ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!

Twitter
Facebook
LinkedIn
WhatsApp
ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!

ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಇಂದು ನಗರದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಹಲವು ವಿಚಾರಳನ್ನು ಹಂಚಿಕೊಂಡರು. ಮೊದಲಿಗೆ ಅವರು ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ-ಮೂರು ಪ್ರದೇಶಗಳಲ್ಲಿ ವಾಸವಾಗಿರುವ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ (guarantee scheme beneficiaries) ಒಂದು ಸಮಾವೇಶ ನಡೆಸುವ ಬಗ್ಗೆ ಹೇಳಿದರು. 

ಅದಕ್ಕಿಂತ ಮುಖ್ಯವಾಗಿ ನಾಳೆಯಿಂದ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಮೂರು ದಿನ ಪೌಷ್ಠಿಕಾಂಶಭರಿತ ರಾಗಿಮಾಲ್ಟ್ ಅನ್ನು (Ragi malt) ಹಾಲಿನೊಂದಿಗೆ ಬೆರೆಸಿ ನೀಡುವ ಯೋಜನೆ ಆರಂಭವಾಗಲಿದೆ ಮತ್ತು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಲ್ಲಿ ಲಾಂಚ್ ಮಾಡಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. 

ಸುಮಾರು 59 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು ಎಂದು ಸಚಿವ ಹೇಳಿದರು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜೊತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ