ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈಲ್ವೇ ಸ್ಟೇಷನ್‌ ನಲ್ಲಿ ಕೂಲಿಯಾದ ರಾಹುಲ್ ಗಾಂಧಿ, ವಿಡಿಯೋ ವೈರಲ್!

Twitter
Facebook
LinkedIn
WhatsApp
ರೈಲ್ವೇ ಸ್ಟೇಷನ್‌ ನಲ್ಲಿ ಕೂಲಿಯಾದ ರಾಹುಲ್ ಗಾಂಧಿ, ವಿಡಿಯೋ ವೈರಲ್!

ನವದೆಹಲಿ: ತಳ ಮಟ್ಟದ ಜನರನ್ನು ತಲುಪುವ ಸಲುವಾಗಿ ಬೇರೆ ಬೇರೆ ವರ್ಗದ ಕಾರ್ಮಿಕರೊಂದಿಗೆ ಬೆರೆತು ಗಮನ ಸೆಳೆದಿರುವ ಕಾಂಗ್ರೆಸ್‌ ಯುವರಾಜ ಈಗ ಹೊಸ ವೇಷ ಧರಿಸಿದ್ದಾರೆ. ಈ ಬಾರಿ ಅವರು ದೆಹಲಿಯ ಆನಂದ್‌ ವಿಹಾರ್‌ ರೈಲ್ವೇ ಸ್ಟೇಷನ್‌ನಲ್ಲಿ ಕೆಂಪು ಅಂಗಿ ಧರಿಸಿ ಕೂಲಿಯಾಗಿ ಕಾಣಿಸಿಕೊಂಡಿದ್ದಾರೆ. ತೋಳಿಗೆ ಬ್ಯಾಜ್‌ ಒಂದನ್ನು ಕಟ್ಟಿಕೊಂಡು ತಲೆಯ ಮೇಲೊಂದು ಸೂಟ್‌ಕೇಸ್‌ ಇಟ್ಟು ಥೇಟ್‌ ಕೂಲಿಯ ರೀತಿಯೇ ರೈಲ್ವೇ ನಿಲ್ದಾಣದಲ್ಲಿ ಕಾಣಿಸಿಕೊಂಡ ರಾಹುಲ್‌ ಗಾಂಧಿ ಅವರ ವಿಡಿಯೋ ಈಗ ಫುಲ್‌ ವೈರಲ್‌ ಆಗಿದೆ.

ರೈಲ್ವೇ ನಿಲ್ದಾಣದ ಕೂಲಿಗಳ ಜೊತೆಗೆ ಬೆರೆತು ಅವರೊಂದಿಗೆ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದಾರೆ. ಕೂಲಿಯೊಬ್ಬ ರಾಹುಲ್‌ ಗಾಂಧಿ ಅವರ ತೋಳಿಗೆ ಬ್ಯಾಜ್‌ ಒಂದನ್ನು ಕಟ್ಟುತ್ತಿರುವ ಚಿತ್ರಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರೈಲ್ವೇ ನಿಲ್ದಾಣದಲ್ಲಿ ದುಡಿಯುತ್ತಿರುವ ಕೂಲಿಗಳ ಸಂಕಷ್ಟ ಅರಿಯಲು ರಾಹುಲ್‌ ಗಾಂಧಿ ದೆಹಲಿಯ ಆನಂದ್‌ ವಿಹಾರ್‌ ರೈಲ್ವೇ ಸ್ಟೇಷನ್‌ಗೆ ತೆರಳಿದ್ದರು. ಈ ವೇಳೆ ಕೂಲಿಗಳ ಜೊತೆ ಸಂವಾದ ನಡೆಸಿದ ಅವರೊಂದಿಗೆ ಕೂಲಿಗಳು ತಾವು ಎದುರಿಸುತ್ತಿರುವ ಕಷ್ಟಗಳನ್ನು ಹಂಚಿಕೊಂಡಿದ್ದಾರೆ.

“ಜನರ ನಾಯಕ ರಾಹುಲ್‌ ಗಾಂಧಿ ಅವರು ಇಂದು ದೆಹಲಿಯ ಆನಂದ್‌ ವಿಹಾರ್‌ ರೈಲ್ವೇ ಸ್ಟೇಷನ್‌ನಲ್ಲಿ ದುಡಿಯುತ್ತಿರುವ ಕೂಲಿಗಳ ಜೊತೆ ಬೆರೆತು ಅವರ ಸಂಕಷ್ಟ ಆಲಿಸಿದ್ದಾರೆ. ಇತ್ತೀಚೆಗೆ ರೈಲ್ವೇ ನಿಲ್ದಾಣದಲ್ಲಿ ದುಡಿಯುತ್ತಿರುವ ಕೂಲಿಗಳು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಅವರೊಂದಿಗೆ ತಮ್ಮ ಕಷ್ಟಗಳನ್ನು ಹೇಳಿಕೊಳ್ಳುವ ಇರಾದೆ ವ್ಯಕ್ತಪಡಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ರಾಹುಲ್‌ ಗಾಂಧಿ ಸ್ವತಃ ಇಂದು ರೈಲ್ವೇ ಸ್ಟೇಷನ್‌ಗೆ ಆಗಮಿಸಿ ಕೂಲಿ ಜನರ ಸಂಕಷ್ಟ ಆಲಿಸಿದ್ದಾರೆ” ಎಂದು ಕಾಂಗ್ರೆಸ್‌ನ ಅಧಿಕೃತ `X’ ಖಾತೆ ಟ್ವೀಟ್‌ ಮಾಡಿದೆ.

ಭಾರತದ ತಳಮಟ್ಟದ ಜನರನ್ನು ತಲುಪುವ ಉದ್ದೇಶದಿಂದ ಬೇರೆ ಬೇರೆ ರೀತಿಯ ಕಾರ್ಮಿಕರನ್ನು ರಾಹುಲ್‌ ಗಾಂಧಿ ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ಸ್‌ಗಳ ಜೊತೆ ಬೆರೆತಿದ್ದ ರಾಗಾ ಬಳಿಕ ಅವರೊಂದಿಗೆ ಸ್ಕೂಟರ್‌ನಲ್ಲಿ ಸುತ್ತಿದ್ದರು. ದೆಹಲಿಯ ಆಜಾದ್‌ಪುರ್‌ ಮಂದಿಯ ಗಲ್ಲಿಗಲ್ಲಿಗಳಲ್ಲಿ ಸುತ್ತಾಡಿ ಮೆಕ್ಯಾನಿಕ್‌ಗಳು, ಕಾರ್ಮಿಕರು, ವರ್ತಕರ ಜೊತೆಗೂ ಸಂವಾದ ನಡೆಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist