ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ ಚುನಾವಣೆ: ಮಾಜಿ ಸಚಿವ ವಿ. ಸೋಮಣ್ಣಗೆ ಮುಖಭಂಗ; BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

Twitter
Facebook
LinkedIn
WhatsApp
ರಾಜ್ಯಸಭೆ ಚುನಾವಣೆ: ಮಾಜಿ ಸಚಿವ ವಿ. ಸೋಮಣ್ಣಗೆ ಮುಖಭಂಗ; BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ನಂತರ ರಾಜ್ಯಸಭೆ ಟಿಕೆಟ್ ಸಿಗುವ ಭರವಸೆಯನ್ನು ಸೋಮಣ್ಣ ವ್ಯಕ್ತಪಡಿಸಿದ್ದರು. ಆದರೆ ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. 

ಗದಗ ಮೂಲದ ಮಾಜಿ ಎಂಎಲ್‌ಸಿ ನಾರಾಯಣ ಭಾಂಡಗೆ ಅವರು ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ

ಇನ್ನುಳಿದಂತೆ ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ ಹಾಗೂ ಡಾ. ಭೀಮಸಿಂಗ್, ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರ ಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾ, ಉತ್ತರಾಖಂಡ್ ದಲ್ಲಿ ಮಹೇಂದ್ರ ಭಟ್, ಪಶ್ಚಿಮ ಬಂಗಾಳದಲ್ಲಿ ಸಮಿಕಾ ಭಟ್ಟಾಚಾರ್ಯಗೆ ಟಿಕೆಟ್ ನೀಡಲಾಗಿದೆ.

ಇನ್ನು ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್, ಸುಭಾಂಶು ತ್ರಿವೇದಿ, ಚೌಧರಿ ತೇಜ್​ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್ ಗೆ ಟಿಕೆಟ್ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ