ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ರಾಜ್ಯೋತ್ಸವ ಪ್ರಶಸ್ತಿ

Twitter
Facebook
LinkedIn
WhatsApp
ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು : ಕರಾವಳಿ ಕರ್ನಾಟಕದ ಪ್ರಸಿದ್ಧ ಕಲೆ ಯಕ್ಷಗಾನದ (Yakshagana) ಮೊತ್ತ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ (Leelavathi Baipadithaya) (ಇವರು ವೃತ್ತಿಪರ ಮೇಳಗಳಲ್ಲಿ ತಿರುಗಾಟ ಮಾಡಿದ ಏಕೈಕ ಮಹಿಳೆಯೂ ಹೌದು) 2023ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ಘೋಷಣೆಯಾಗಿದೆ. ಮಹಿಳೆಯರು ಯಕ್ಷಗಾನ ಪ್ರದರ್ಶನಗಳನ್ನು ವೀಕ್ಷಿಸಲು ಹೋಗುವುದಕ್ಕೂ ಅಡ್ಡಿ ಇದ್ದ, ಹಿಂಜರಿಕೆ ಪಡುತ್ತಿದ್ದ ಕಾಲದಲ್ಲಿ ತಮ್ಮ ಪತಿ, ಯಕ್ಷಗಾನದ ಖ್ಯಾತ ಮದ್ದಳೆಗಾರರಾದ ಹರಿನಾರಾಯಣ ಬೈಪಾಡಿತ್ತಾಯರಿಂದಲೇ ಭಾಗವತಿಕೆ ಕಲಿತು ರಂಗವನ್ನೇರಿದವರು ಲೀಲಾವತಿ ಬೈಪಾಡಿತ್ತಾಯರು.

ಶಾಲೆಗೆ ಹೋಗದಿದ್ದರೂ ಪ್ರಸಂಗ ಬಾಯಿಪಾಠ ಬಡತನದಿಂದಾಗಿ ಓದು ಬರಹ ಇರಲಿಲ್ಲ.ಶಾಲೆಗೆ ಹೋಗದೆಯೇ, ಅಣ್ಣನಿಂದ, ಅಕ್ಕ ಪಕ್ಕದವರಿಂದಲೋ ಅಕ್ಷರಾಭ್ಯಾಸ ಮಾಡಿಸಿಕೊಂಡವರು ಅವರು.ಹಿಂದಿ ವಿಶಾರದ ಕೂಡ ಮಾಡಿದ್ದರೆಂಬುದು ಉಲ್ಲೇಖಾರ್ಹ. ಸಂಗೀತ ಕಲಿತಿದ್ದ ಅವರನ್ನು ತೆಂಕುತಿಟ್ಟಿನ ಅಗ್ರಮಾನ್ಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಕೈಹಿಡಿದ ಬಳಿಕ, ಯಕ್ಷಗಾನ ಕಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಎಂಬಲ್ಲಿನ ಪರಿಸರ ಅವರ ಯಕ್ಷಗಾನ ಕಲಿಕೆಗೆ ಪೂರಕವಾಗಿತ್ತು. ಮನೆ ಮನೆಯಲ್ಲೂ ವಿಶೇಷ ಕಾರ್ಯಕ್ರಮವಿದ್ದರೆ ಅಲ್ಲೊಂದು ತಾಳಮದ್ದಳೆ ಕೂಟ ಇದ್ದೇ ಇರುತ್ತಿತ್ತು.

ಹೀಗೆ ಕಲಿಯುತ್ತಲೇ, ಹೆಣ್ಣು ಮಕ್ಕಳಿಗೆ ಯಕ್ಷಗಾನ ನೋಡುವುದಕ್ಕೂ ಅವಕಾಶವಿಲ್ಲದ ಸಂಪ್ರದಾಯವಿದ್ದ ಆ ಕಾಲದಲ್ಲಿ ತೆಂಕು ತಿಟ್ಟಿನ ಅಗ್ರಮಾನ್ಯ ಭಾಗವತರಲ್ಲೊಬ್ಬರಾಗಿ ಅವರು ಬೆಳೆದದ್ದು ಇತಿಹಾಸ. ಪರಿಣಾಮ ಏಕೈಕ ವೃತ್ತಿಪರ ಮಹಿಳಾ ಭಾಗವತರು ಎಂಬ ಪಟ್ಟ. ಪತಿಯೊಂದಿಗೆ ಅಂದಿನ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕರ್ನಾಟಕ, ಅರುವ (ಅಳದಂಗಡಿ), ಕುಂಬಳೆ ಬಪ್ಪನಾಡು ಮೇಳ, ಕುಂಬಳೆ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ್ದಾರೆ.
ಯಕ್ಷಗಾನ ಲೋಕದಲ್ಲಿ ಬೆಳಗಿ ಕಲೆಯನ್ನೂ ಬೆಳೆಸಿದ ಕೀರ್ತಿವಂತರಾದ ಶೇಣಿ ಗೋಪಾಲಕೃಷ್ಣ ಭಟ್, ಬಣ್ಣದ ಮಾಲಿಂಗ,ಹೊಸಹಿತ್ಲು ಮಹಾಲಿಂಗ ಭಟ್, ಪಡ್ರೆ ಚಂದು, ಪುತ್ತೂರು ನಾರಾಯಣ ಹೆಗ್ಡೆ, ಅಳಿಕೆ ರಾಮಯ್ಯ ರೈ, ಕೆ.ಗೋವಿಂದ ಭಟ್, ಪುತ್ತೂರು ಕೃಷ್ಣ ಭಟ್, ಕೋಳ್ಯೂರು ರಾಮಚಂದ್ರ ರಾವ್, ಎಂಪೆಕಟ್ಟೆ ರಾಮಯ್ಯ ರೈ, ಕುಂಬಳೆ ಸುಂದರ ರಾವ್, ಶಂಕರನಾರಾಯಣ ಸಾಮಗರು, ರಾಮದಾಸ ಸಾಮಗರು, ಎಂ.ಎಲ್.ಸಾಮಗರು, ತೆಕ್ಕಟ್ಟೆ ಆನಂದ ಮಾಸ್ತರ್, ಪ್ರಭಾಕರ ಜೋಷಿ ಮುಂತಾದ ಯಕ್ಷಲೋಕದ ಘಟಾನುಘಟಿ ದಿಗ್ಗಜರನ್ನು ತಾಳಮದ್ದಳೆಯಲ್ಲಿ, ಯಕ್ಷಗಾನ ಪ್ರದರ್ಶನಗಳಲ್ಲಿ ಕುಣಿಸಿದ, ಮಾತನಾಡಿಸಿದ ಅನುಭವ ಪಡೆದುಕೊಂಡ ಲೀಲಾ ಅವರಿಗೆ, ಪ್ರತಿಯೊಂದು ಹೆಜ್ಜೆಯಲ್ಲಿಯೂ ಮಾರ್ಗದರ್ಶನ ಮಾಡಿ ಪ್ರೋತ್ಸಾಹಿಸುತ್ತಲೇ ಬಂದವರು ಪತಿ ಹರಿನಾರಾಯಣರು.

ಬಲಿಪ ನಾರಾಯಣ ಭಾಗವತರು, ದಾಮೋದರ ಮಂಡೆಚ್ಚರು, ಕಡತೋಕ ಭಾಗವತರು, ನೆಡ್ಲೆ ನರಸಿಂಹ ಭಟ್, ಬಲ್ಲಾಳರು, ದಿವಾಣ ಭೀಮ ಭಟ್, ಅಡೂರು ವೆಂಕಟ ಮದ್ಲೆಗಾರರು ಮುಂತಾದ ಅಗ್ರಗಣ್ಯ ಹಿಮ್ಮೇಳ ಕಲಾವಿದರ ಸಲಹೆ, ಮಾರ್ಗದರ್ಶನಗಳು ಅವರನ್ನು ಪ್ರಬುದ್ಧ ಕಲಾವಿದೆಯಾಗಿ ರೂಪಿಸಿದವು.
ಗಂಡು ಮೆಟ್ಟಿನ ಕಲೆಯಲ್ಲಿ ಅದರಲ್ಲೂ ವೀರರಸ ಪ್ರಧಾನ ಸನ್ನಿವೇಶಗಳಲ್ಲಿ ಹೆಣ್ಣು ಕಂಠವನ್ನು ಮೆರೆಸಿ, ಯಕ್ಷಗಾನ ಕಲೆಯತ್ತ ಮಹಿಳೆಯರೂ ಆಕರ್ಷಿತರಾಗುವಂತೆ ಮೇಲ್ಪಂಕ್ತಿ ಹಾಕಿಕೊಟ್ಟವರು ಅವರು. ರಾತ್ರಿಯಿಡೀ ನಿದ್ದೆಗೆಟ್ಟು ಊರಿಂದೂರಿಗೆ ಮೇಳವು ಹೋದಲ್ಲೆಲ್ಲಾ ತಿರುಗಾಟ ಮಾಡಿದ್ದಷ್ಟೇ ಅಲ್ಲದೆ, ರಾತ್ರಿಯಿಡೀ ನಿದ್ದೆ ಬಿಟ್ಟು ಬೆಳಗ್ಗಿನವರೆಗಿನ ಇಡೀ ಪ್ರಸಂಗವನ್ನು ಆಡಿಸಿದ ಕೀರ್ತಿಯೂ ಇದೆ. ಶಾಲೆಗೆ ಹೋಗದೆಯೂ ಭಾಗವತಿಕೆಯಲ್ಲಿ ವ್ಯಕ್ತವಾಗುವ ಸಾಹಿತ್ಯ ಶುದ್ಧಿ, ಭಾಷಾ ಶುದ್ಧಿ ಇವರ ಹೆಗ್ಗಳಿಕೆ. ಬಡಗುತಿಟ್ಟಿನಲ್ಲಿ ತಮ್ಮ ಛಾಪು ಬೀರಿ ನಂದಿದ ನಂದಾದೀಪ ಕಾಳಿಂಗ ನಾವಡರ ಜತೆಗೆ ಶೃಂಗೇರಿ ಹಾಗೂ ಮುಂಬಯಿಯಲ್ಲಿ ಹಾಡುತ್ತಾ, ಅವರ ಮೆಚ್ಚುಗೆಗೂ ಪಾತ್ರರಾದವರು ಲೀಲಾವತಿ.

ಯಾವುದೇ ಪ್ರಸಂಗ ಆಡಿಸುವ ಮೊದಲು, ಹಿರಿಯ ಮತ್ತು ಕಿರಿಯ ಕಲಾವಿದರೊಂದಿಗೆ ಚೌಕಿಯಲ್ಲಿ ಮೊದಲೇ ಚರ್ಚಿಸಿ,ಪ್ರದರ್ಶನವೊಂದು ಎಲ್ಲೂ ಲೋಪವಾಗಬಾರದು, ಯಕ್ಷಗಾನದ ಭಾಷೆಯಲ್ಲೇ ಹೇಳುವುದಾದರೆ, ‘ಮೇಲೆ ಬೀಳಬೇಕು’ ಎಂಬ ತುಡಿತದಿಂದ,ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದ ರೀತಿ ಇಂದಿನ ಕಲಾವಿದರಿಗೆ ಸ್ಫೂರ್ತಿ.
ಸದ್ಯಕ್ಕೆ ತಮ್ಮಂತೆ ಇತರ ಮಹಿಳೆಯರೂ ಯಕ್ಷಗಾನ ಕ್ಷೇತ್ರದಲ್ಲಿ ಮುಂದೆ ಬರಬೇಕೆಂದು ಪ್ರೋತ್ಸಾಹಿಸುತ್ತಾ, ಆಸಕ್ತಿಯಿಂದ ಬಂದವರಿಗೆ ಯಕ್ಷಗಾನದ ಪಾಠವನ್ನೂ, ಕರ್ನಾಟಕ ಶಾಸ್ತ್ರೀಯ ಸಂಗೀತದ ಪಾಠವನ್ನೂ ಮಾಡಿದ್ದಾರೆ. ಅಲ್ಲದೆ ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ 10 ವರ್ಷ ಹಾಗೂ ಈಗ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ