ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!

Twitter
Facebook
LinkedIn
WhatsApp
ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast case) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ನೀಡಿ ಆದೇಶಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುದ್ದೆ ಬಡಾವಣೆ ನಿವಾಸಿಯಾಗಿರುವ ಉಗ್ರ ಅಬ್ದುಲ್ ಮತೀನ್ ತಾಹ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದಿದ್ದಾನೆ. ಅಬ್ದುಲ್ ಮತೀನ್​ ತಾಹ ISIS ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾನೆ. ಅಬ್ದುಲ್ ಮತೀನ್ ತಾಹ ಡಾರ್ಕ್ ವೆಬ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತಿದ್ದನು. ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟಗೊಳಿಸಲು ಈತನೆ ಬಾಂಬ್ ತಯಾರಿಸಲು ಪ್ಲಾನ್ ನೀಡಿದ್ದನು.

ಅಬ್ದುಲ್ ಮತೀನ್​ ತಾಹ ಮಾರ್ಗದರ್ಶನದಲ್ಲಿ ಬಾಂಬ್ ತಯಾರಿಸಿ‌, ತುಂಗಾ ತೀರದ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್, ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಅಲ್ಲದೆ ಈತನು ಕ್ರಿಪ್ಟೋ ಕರೆನ್ಸಿ ಮೂಲಕ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದನು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ