ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ravindra Jadeja: ಜಡೇಜಾ ಆಕ್ರಮಣಕಾರಿ ಬೌಲಿಂಗ್ ; 5 ವಿಕೆಟ್ ಕಬಳಿಸಿ ವಿಶ್ವಕಪ್ ನಲ್ಲಿ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ!

Twitter
Facebook
LinkedIn
WhatsApp
Ravindra Jadeja: ಜಡೇಜಾ ಆಕ್ರಮಣಕಾರಿ ಬೌಲಿಂಗ್ ; 5 ವಿಕೆಟ್ ಕಬಳಿಸಿ ವಿಶ್ವಕಪ್ ನಲ್ಲಿ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ!

Ravindra Jadeja: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ವಿಶ್ವಕಪ್ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 243 ರನ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾದ ಈ ಗೆಲುವಿಗಾಗಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ( Ravindra Jadeja) ಪ್ರಮುಖ ಕೊಡುಗೆ ನೀಡಿದರು.

 

ಮೊದಲು ಬ್ಯಾಟಿಂಗ್​ನಲ್ಲಿ ಕೇವಲ 15 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದ ಜಡೇಜಾ, ನಂತರ 327 ರನ್ ಬೆನ್ನಟ್ಟಿದ ಪ್ರೋಟಿಸ್ ತಂಡವನ್ನು 83 ರನ್​ಗೆ ಆಲೌಟ್ ಮಾಡುವಲ್ಲಿ ಐದು ವಿಕೆಟ್​ಗಳ ಕೊಡುಗೆ ನೀಡಿದರು.

ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಐದು ವಿಕೆಟ್ ಉರುಳಿಸಿದ ಎರಡನೇ ಭಾರತೀಯ ಸ್ಪಿನ್ನರ್ ಎನಿಸಿಕೊಂಡರು.ಈ ಪಂದ್ಯದಲ್ಲಿ ಮೊದಲು ಆಫ್ರಿಕಾ ನಾಯಕ ಟೆಂಬಾ ಬವುಮಾ ಅವರನ್ನು ವಜಾಗೊಳಿಸಿದ ಜಡೇಜಾ, ನಂತರ ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ಅವರ ವಿಕೆಟ್ ಉರುಳಿಸಿದರು.

ಈ ಪಂದ್ಯದಲ್ಲಿ ತಮ್ಮ ಖೋಟಾದ ಒಂಬತ್ತು ಓವರ್‌ ಬೌಲ್ ಮಾಡಿದ ಜಡೇಜಾ ಒಂದು ಮೇಡನ್ ಸೇರಿದಂತೆ 33 ರನ್‌ಗಳನ್ನು ಬಿಟ್ಟುಕೊಟ್ಟರು. ಜಡೇಜಾಗೂ ಮೊದಲು ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಈ ಸಾಧನೆ ಮಾಡಿದ ಏಕೈಕ ಭಾರತೀಯ ಸ್ಪಿನ್ನರ್. ಅವರು 2011 ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ಐದು ವಿಕೆಟ್ ಉರುಳಿಸಿದ್ದರು.

ಜಡೇಜಾ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಡೇಜಾಗೂ ಮೊದಲು ಸುನಿಲ್ ಜೋಶಿ ಮತ್ತು ಯುಜುವೇಂದ್ರ ಚಹಾಲ್ ಮಾತ್ರ ಈ ದಾಖಲೆ ಮಾಡಿದ್ದರು.

ಒಟ್ಟಾರೆಯಾಗಿ, ಜಡೇಜಾ ಏಕದಿನ ವಿಶ್ವಕಪ್‌ನಲ್ಲಿ ಐದು ವಿಕೆಟ್ ಕಬಳಿಸಿದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅನಿಲ್ ಕುಂಬ್ಳೆ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಏಕದಿನದಲ್ಲಿ ಐದು ವಿಕೆಟ್ ಪಡೆದ ಎರಡನೇ ಭಾರತೀಯ ಎನಿಸಿಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist