ಭಾನುವಾರ, ಜೂನ್ 16, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RCB ಟ್ರೋಫಿ ಗೆಲ್ಲುವ ಕನಸು ಭಗ್ನ; ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆದ ಆರ್ಸಿಬಿ..!

Twitter
Facebook
LinkedIn
WhatsApp
RCB ಟ್ರೋಫಿ ಗೆಲ್ಲುವ ಕನಸು ಭಗ್ನ; ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆದ ಆರ್ಸಿಬಿ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಟ್ರೋಫಿ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನಗೊಂಡಿದೆ. ಸತತ ಆರು ಗೆಲುವಿನ ನಂತರದ ಒಂದು ಸೋಲು ಫಾಫ್ ಪಡೆಯನ್ನು ಪಂದ್ಯಾವಳಿಯಿಂದ ಹೊರಬೀಳುವಂತೆ ಮಾಡಿತು. ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರಾಜಸ್ಥಾನ್ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಸೋಲಿನ ಬೆನ್ನಲ್ಲೇ ಆರ್​ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದೆ.

ಮೊದಲ ಸೀಸನ್‌ನಿಂದ ಐಪಿಎಲ್‌ನಲ್ಲಿ ಆಡುತ್ತಿರುವ ಆರ್​ಸಿಬಿ ಈ ಬಾರಿ ಕೂಡ ಚೊಚ್ಚಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಋತುವಿನಿಂದ ಹೊರಬಿದ್ದ ನಂತರ ಎಕ್ಸ್​ನಲ್ಲಿ ಮೀಮ್‌ಗಳ ಮಹಾಪೂರವೇ ಕಾಣುತ್ತಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಸಂಜು ಸ್ಯಾಮ್ಸನ್‌ ತಂಡ ಆರ್‌ಸಿಬಿಗೆ ಮೊದಲು ಬ್ಯಾಟಿಂಗ್‌ ಕಳುಹಿಸಿತು. ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 172 ರನ್ ಗಳಿಸಲಷ್ಟೇ ಶಕ್ತವಾಯಿತು. ಅಶ್ವಿನ್ ಬೌಲಿಂಗ್ ನಲ್ಲಿ ತಂಡದ ಪರ ಅದ್ಭುತ ಪ್ರದರ್ಶನ ತೋರಿದರು. ಆರ್​ಸಿಬಿ ಪರ ರಜತ್ ಪಾಟಿದರ್ 34, ಕೊಹ್ಲಿ 33 ಹಾಗೂ ಲುಮ್ರೂರ್ 32 ರನ್ ಗಳಿಸಿದರಷ್ಟೆ. ಇದಾದ ಬಳಿಕ ಆರ್​ಆರ್ ತಂಡ 6 ಎಸೆತಗಳು ಬಾಕಿ ಇರುವಂತೆಯೇ ಜಯ ಸಾಧಿಸಿತು. ಆರ್​ಆರ್​ ಪರ ಯಶಸ್ವಿ ಜೈಸ್ವಾಲ್ 45, ರಿಯಾನ್ ಪರಾಗ್ 36 ಹಾಗೂ ಶ್ರಿಮ್ರೋನ್ ಹೆಟ್ಮೇರ್ 26 ರನ್ ಸಿಡಿಸಿದರು.

ರವಿಚಂದ್ರನ್ ಅಶ್ವಿನ್ ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆಲುವಿನ ಹೀರೋ ಆದರು. ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಶ್ವಿನ್ ಅದ್ಭುತವಾಗಿ ಬೌಲಿಂಗ್ ಮಾಡಿದರು. ಅವರು ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 19 ರನ್‌ಗಳಿಗೆ 2 ವಿಕೆಟ್ ಪಡೆದರು. ಅವರ ಬಿಗಿ ಬೌಲಿಂಗ್‌ನಿಂದಾಗಿ ಆರ್‌ಸಿಬಿ ತಂಡ ಕೇವಲ 172 ರನ್‌ಗಳ ಸ್ಕೋರ್ ತಲುಪಲು ಸಾಧ್ಯವಾಯಿತು. ಅಶ್ವಿನ್ ಅವರ ಅಮೋಘ ಆಟಕ್ಕಾಗಿ ಪಂದ್ಯಶ್ರೇಷ್ಠರಾಗಿಯೂ ಆಯ್ಕೆಯಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ