ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ಕಂಬಳಕ್ಕೆ 78 ಜೋಡಿ ಕೋಣಗಳ ನೋಂದಣಿ ; ದಕ್ಷಿಣ ಕನ್ನಡದಿಂದಲೇ 15 ಸಾವಿರ ಜನರ ಆಗಮನದ ನಿರೀಕ್ಷೆ!

Twitter
Facebook
LinkedIn
WhatsApp
ಬೆಂಗಳೂರು ಕಂಬಳಕ್ಕೆ 78 ಜೋಡಿ ಕೋಣಗಳ ನೋಂದಣಿ ; ದಕ್ಷಿಣ ಕನ್ನಡದಿಂದಲೇ 15 ಸಾವಿರ ಜನರ ಆಗಮನದ ನಿರೀಕ್ಷೆ!

ಪುತ್ತೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25,26 ರಂದು ಮೊದಲ ಬಾರಿಗೆ ನಡೆಯುವ ಕಂಬಳ ಹೊಸ ಚರಿತ್ರೆ ಬರೆಯಲಿದೆ. ಬರೋಬ್ಬರಿ 78 ಕೋಣಗಳು ನೋಂದಣಿಯಾಗಿದ್ದು, ಭರ್ಜರಿ ಸಿದ್ದತೆ ನಡೆಯುತ್ತಿವೆ.

ಮಾಧ್ಯಮಗಳ ಜತೆ ಮಾತನಾಡಿದ ಬೆಂಗಳೂರು ಕಂಬಳ ಆಯೋಜನಾ ಸಮಿತಿಯ ಅಧ್ಯಕ್ಷರಾದ ಪುತ್ತೂರು ಶಾಸಕ ಅಶೋಕ್ ರೈ, ಬೆಂಗಳೂರು ಕಂಬಳ- ನಮ್ಮ ಕಂಬಳ ಎಂಬ ಪರಿಕಲ್ಪನೆಯಲ್ಲಿ ನಡೆಯಲಿರುವ ಕ್ರೀಡೆಗೆ ಈಗಾಗಲೇ 78 ಜತೆ ಕೋಣಗಳ ನೋಂದಣಿ ಆಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಪ್ರಥಮ ಬಾರಿ ಕಂಬಳ ನಡೆಯುತ್ತಿರುವ ಕಾರಣ ಬಹಳ ಅಚ್ಚುಕಟ್ಟಾದ ವ್ಯವಸ್ಥೆಗೆ ಗಮನ ಹರಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಸಮಿತಿ ರಚಿಸಲಾಗಿದ್ದು, ವೆಬ್‌ಸೈಟ್ ಮೂಲಕ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತಿದೆ. ಅಕ್ಟೋಬರ್ 11 ರಂದು ಬುಧವಾರ ಬೆಳಗ್ಗೆ 10.30ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳಕ್ಕೆ ಕರೆ ಮುಹೂರ್ತ ನಡೆಯಲಿದೆ. ಕೋಡಿಂಬಾಡಿ ಮಹಿಷಮರ್ದಿನಿ ದೇವಳದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ಸೀಮೆ ದೇವರಾದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ. ತುಳುನಾಡಿನ ಈ ಜಾನಪದ ಕ್ರೀಡೆ ಉತ್ತಮವಾಗಿ ನಡೆದು, ಇಡೀ ದೇಶಕ್ಕೆ ತುಳುನಾಡಿನ ಶ್ರಿಮಂತ ಪರಂಪರೆ ಪರಿಚಯವಾಗಬೇಕು ಎಂಬ ಉದ್ದೇಶವಿದೆ ಎಂದರು.

ಪಕ್ಷಭೇದ ರಹಿತ ಉತ್ಸವ

ಕಂಬಳ ಎಲ್ಲರ ಪಾಲಿನ ಅಚ್ಚುಮೆಚ್ಚಿನ ಕ್ರೀಡೆಯಾಗಿದ್ದು, ಪಕ್ಷಭೇದವಿಲ್ಲದೆ ನಡೆಯಲಿದೆ. ರಾಜ್ಯ ಸರಕಾದಿಂದ ನೆರವು ಸಿಗಲಿದೆ. ಕೋಣಗಳ ಮಾಲೀಕರು ದೂರದ ಬೆಂಗಳೂರಿಗೆ ಕೋಣಗಳನ್ನು ತರುವ ವಿಚಾರದಲ್ಲಿ ನಮಗೆ ಆರಂಭದಲ್ಲಿ ಆತಂಕವಿತ್ತು. ಇದಕ್ಕಾಗಿ ಕಂಬಳದ ಯಜಮಾನರ ಸಭೆ ನಡೆಸಲಾಗಿತ್ತು. ಪ್ರಸ್ತುತ ಯಜಮಾನರ ಉತ್ಸಾಹ ಖುಷಿ ನೀಡಿದೆ. ಈಗಾಗಲೇ 78 ಜತೆ ಕೋಣಗಳ ನೋಂದಣಿ ಮುಗಿದೆ ಎಂದರು.

ರೈಲು, ಬಸ್ ಟಿಕೆಟ್ ಬುಕ್ಕಿಂಗ್

ನ.24ರಂದು ಮಂಗಳೂರಿನಿಂದ ಹೊರಡುವ ಬೆಂಗಳೂರು ರೈಲಿನ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಇನ್ನೂ ಒಂದೆರಡು ರೈಲುಗಳನ್ನು ಆ ದಿನ ಓಡಿಸುವಂತೆ ಕಂಬಳ ಸಮಿತಿಯಿಂದ ರೈಲ್ವೆಗೆ ಮನವಿ ಮಾಡಲಾಗಿದೆ. ಆ ದಿನ ಹೊರಡುವ ಕೆಎಸ್‌ಆರ್‌ಸಿ ಬಸ್‌ಗಳ ಟಿಕೆಟ್‌ಗಳೂ ಬುಕ್ ಆಗಿವೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಿಂದಲೇ ಸುಮಾರು 15 ಸಾವಿರ ಮಂದಿ ಕಂಬಳಕ್ಕೆ ಬರುವ ನಿರೀಕ್ಷೆ ಇದೆ. ಇದಲ್ಲದೆ ಬೆಂಗಳೂರಿನ ಜನ, ಅಲ್ಲಿರುವ ಕರಾವಳಿಗರು ಕೂಡ ತುದಿಗಾಲಿನಲ್ಲಿ ನಿಂತಿದ್ದಾರೆ. ಸಚಿವರು ಕೂಡ ಫೋನ್ ಮಾಡಿ ಕಂಬಳದ ಬಗ್ಗೆ ಕಾತರತೆ ತೋರಿದ್ದಾರೆ ಎಂದು ವಿವರಿಸಿದರು.

ಕಂಬಳಕ್ಕೆ ಎಲ್ಲ ರೀತಿಯ ಮೂಲಸೌಕರ್ಯ ಮಾಡಬೇಕಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆಯಾಗಬೇಕಿದೆ. ಫುಡ್ ಫೆಸ್ಟ್‌ವಲ್ ನಡೆಯಲಿದ್ದು, ಸುಮಾರು 125 ಸ್ಟಾಲ್‌ಗಳ ವ್ಯವಸ್ಥೆಯಾಗಬೇಕಿದೆ. ತುಳುನಾಡಿನ ಶ್ರೀಮಂತ ಸಂಸ್ಕೃತಿ ದೇಶಕ್ಕೆ ಪರಿಚಯಿಸಯವ ಕೆಲಸ ರಾಜ್ಯ ರಾಜಧಾನಿಯಲ್ಲಿ ನಡೆಯಬೇಕಾದ ಕಾರಣ ಸಾಕಷ್ಟು ಖರ್ಚು ತಗುಲಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ