ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ರಾಜ್ಯಕ್ಕೆ 3ನೇ ಕಂತಿನ ಹಣ ಬಿಡುಗಡೆ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ರಾಜ್ಯಕ್ಕೆ 3ನೇ ಕಂತಿನ ಹಣ ಬಿಡುಗಡೆ; ಇಲ್ಲಿದೆ ಮಾಹಿತಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು (Department of Agriculture and Farmers Welfare) ರಾಷ್ಟ್ರೀಯ ಕೃಷಿ ವಿಕಾಸದ ಅಡಿಯಲ್ಲಿ 2023-24ರ ಸಾಲಿನ 3ನೇ ಕಂತಿನಲ್ಲಿ ಕರ್ನಾಟಕ ಸರ್ಕಾರಕ್ಕೆ 235.14 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈ ಬಗ್ಗೆ ಇಂದು (ಫೆಬ್ರವರಿ 15) ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಇಂದು(ಫೆಬ್ರವರಿ 15) ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ , ರೈತರ ಕಲ್ಯಾಣಕ್ಕಾಗಿ ರಾಷ್ಟ್ರೀಯ ಕೃಷಿ ವಿಕಾಸದ ಅಡಿಯಲ್ಲಿ 3ನೇ ಕಂತಿನಲ್ಲಿ ಕರ್ನಾಟಕ್ಕೆ 235.14 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅಲ್ಲದೇ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಅಂದರೆ 2024ರ ಜನವರಿ 2 ರಂದು ಕರ್ನಾಟಕಕ್ಕೆ 178.65 ಕೋಟಿ ರೂ. ಹೆಚ್ಚುವರಿ ಹಣ ಹಂಚಿಕೆಯಾಗಿದೆ ಎಂದು ತಿಳಿಸಿದರು.

ಈ ಮೊದಲು 583.24 ಕೋಟಿ ರೂ. ಇರುವುದನ್ನು 2023-24ನೇ ಸಾಲಿಗೆ 761.89 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಇಲ್ಲಿಯವರೆಗ, ಕೇಂದ್ರ ಸರ್ಕಾರವು ಒಟ್ಟು 761.89 ಕೋಟಿ ರೂ.ಗಳಲ್ಲಿ ಈವರೆಗೆ ಒಟ್ಟು 526.75 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನುಳಿದಂತೆ ಬಾಕಿ ಹಣವನ್ನು ಈಗಾಗಲೇ ರಾಜ್ಯಕ್ಕೆ ನೀಡಲಾಗಿರುವ ಹಣವನ್ನು ಬಳಸಿದ ಬಳಿಕ ಬಿಡುಗಡೆ ಮಾಡಲಿದೆ ಎಂದರು

ಇನ್ನು ಕಡಲೆಯನ್ನು ಬೆಂಬಲ ಬೆಲೆಯಡಿಯಲ್ಲಿ ಖರೀದಿಗೆ ಅನುಮೋದನೆ ನೀಡಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 5440 ರೂ. ಬೆಂಬಲ ಬೆಲೆಯೊಂದಿಗೆ ರಾಜ್ಯ ಸರ್ಕಾರ ಕಡಲೆ ಖರೀದಿಸಬಹುದುಎಂದು ಹೇಳಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ – RKVY (DPR), ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ (SH&F), ಮಳೆಯಾಧಾರಿತ ಪ್ರದೇಶ ಅಭಿವೃದ್ಧಿ (RAD), ಪರಂಪರಾಗತ್ ಕೃಷಿ ವಿಕಾಸ ಯೋಜನೆ, ಕೃಷಿ ಯಾಂತ್ರೀಕರಣದ ಉಪ ಮಿಷನ್ ( SMAM) (6) ಪ್ರತಿ ಡ್ರಾಪ್ ಮೋರ್ ಕ್ರಾಪ್ (PDMC) (7) ಕೃಷಿ ಅರಣ್ಯ & (8) ಬೆಳೆ ವೈವಿಧ್ಯೀಕರಣ ಕಾರ್ಯಕ್ರಮ (CDP). ಮಂಜೂರಾದ ಮೊತ್ತವನ್ನು ಗೋದಾಮು ನಿರ್ಮಾಣ, ನೀರು ಕೊಯ್ಲು ರಚನೆಗಳು, ಪ್ರಾಥಮಿಕ ಪ್ರಾತ್ಯಕ್ಷಿಕೆ ಘಟಕಗಳ ಸ್ಥಾಪನೆ, ಟ್ರಾಕ್ಟರ್‌ಗಳು, ಪವರ್ ಟಿಲ್ಲರ್‌ಗಳು ಮತ್ತು ಡ್ರೋನ್‌ಗಳ ಖರೀದಿ, ಸಮಗ್ರ ಕೃಷಿಯ ಉತ್ತೇಜನ, ಮಣ್ಣಿನ ಆರೋಗ್ಯ ಫಲವತ್ತತೆ ಮತ್ತು ಸೆಟ್ಟಿಂಗ್‌ಗಳಿಗೆ ಮೇಲಿನ ಘಟಕಗಳ ಅಡಿಯಲ್ಲಿ ಕೃಷಿ ವಲಯದ ಮೂಲಸೌಕರ್ಯ ಸುಧಾರಣೆಗೆ ಈ ಹಣವನ್ನು ಬಳಸಲಾಗುತ್ತದೆ ಎಂದು ವಿವರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist