ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RPL 2024: ರಜಕ ಯೂತ್ ರಿ. ಮಂಗಳೂರು ಇವರ ವತಿಯಿಂದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಾಳೆ ನಡೆಯಲಿದೆ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ.!

Twitter
Facebook
LinkedIn
WhatsApp
RPL 2024: ರಜಕ ಯೂತ್ ರಿ. ಮಂಗಳೂರು ಇವರ ವತಿಯಿಂದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಾಳೆ ನಡೆಯಲಿದೆ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ.!

ರಜಕ ಯೂತ್ ರಿಜಿಸ್ಟರ್ಡ್ ಮಂಗಳೂರು(Rajaka Youth (R.) Mangalore ) ಇವರ ವತಿಯಿಂದ ನಾಳೆ ಸೈಹಾದ್ರಿ ಕಾಲೇಜಿನ ಮೈದಾನದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. 2013 ನವಂಬರ್ ತಿಂಗಳಲ್ಲಿ ಮಡಿವಾಳ ಸಮಾಜದ ಯುವಕರು ಒಗ್ಗಟ್ಟಾಗಿ ಈ ರಜಕ ಯೂತ್ ತಂಡವು ಸ್ಥಾಪನೆಗೊಂಡಿತು. ಈ ಸಂಸ್ಥೆಯ ಪ್ರಮುಖ ಉದ್ದೇಶ ಸಮುದಾಯದ ಅಶಕ್ತರಿಗೆ ನೆರವನ್ನು ನೀಡುವುದು. ಈ ತಂಡವು ಈವರೆಗೆ 10 ಲಕ್ಷಕ್ಕೂ ಅಧಿಕ ಆರ್ಥಿಕ ಸಹಾಯವನ್ನು ನೀಡಿ ಬಂದಿದೆ. ಪ್ರಮುಖವಾಗಿ ವಿದ್ಯಾರ್ಥಿ ವೇತನ, ವೈದ್ಯಕೀಯ ನರವು, ಸಮುದಾಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಮನೆ ದುರಸ್ತಿ, ಶೈಕ್ಷಣಿಕ ನೆರವು ಸೇರಿದಂತೆ ಹಲವು ಕುಟುಂಬಗಳಿಗೆ ಸಹಾಯ ಹಸ್ತಚಾಚಿದೆ. 

ಅಷ್ಟೇ ಮಾತ್ರ ಅಲ್ಲದೆ ರಕ್ತದಾನ ಶಿಬಿರ, ಕಣ್ಣು ತಪಾಸಣಾ ಶಿಬಿರ, ವಧು ವರರ ವೇದಿಕೆ, ಉದ್ಯೋಗ ಮಾಹಿತಿ, ಶೈಕ್ಷಣಿಕ ಮಾಹಿತಿ, ಕೌಶಲಾಭಿವೃದ್ಧಿ ತರಬೇತಿ ಕಾರ್ಯಗಾರ, ಹೀಗೆ ಅನೇಕ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಒಳ್ಳೆಯ ಸೇವೆಯನ್ನು ಈ ತಂಡವು ನೀಡಿ ಬಂದಿದೆ.

ಈ ಬಾರಿಯ RPL -2024 ಕ್ರಿಕೆಟ್ ಪಂದ್ಯಾಟದ ಉದ್ದೇಶವು ಇದೇ, ಮಡಿವಾಳ ಸಮಾಜದ ಆರ್ಥಿಕವಾಗಿ ಹಿಂದುಳಿದ ಅಶಕ್ತ ಕುಟುಂಬಗಳಿಗೆ ನೆರವು ನೀಡಲು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು, ಎಲ್ಲರೂ ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಲು ಈ ತಂಡವು ಕರೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ