ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ಇಡೀ ಜೀವನ ಹಾಳು ಮಾಡಿದ ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟ ನಟಿ ವಿಜಯಲಕ್ಷ್ಮಿ ..!

Twitter
Facebook
LinkedIn
WhatsApp
ನನ್ನ ಇಡೀ ಜೀವನ ಹಾಳು ಮಾಡಿದ ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟ ನಟಿ ವಿಜಯಲಕ್ಷ್ಮಿ ..!
‘ಸೂರ್ಯವಂಶ’, ‘ನಾಗಮಂಡಲ’, ‘ಜೋಡಿ ಹಕ್ಕಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದ ನಟಿ ವಿಜಯಲಕ್ಷ್ಮಿ  ಅವರು ಇತ್ತೀಚಿನ ವರ್ಷಗಳಲ್ಲಿ ವಿವಾದಗಳ ಮೂಲಕವೇ ಸುದ್ದಿ ಆಗಿದ್ದು ಹೆಚ್ಚು. ಪರಭಾಷೆಯಲ್ಲೂ ನಟಿಸಿ ಮನೆಮಾತಾಗಿರುವ ವಿಜಯಲಕ್ಷ್ಮಿ ಅವರು ಮತ್ತೆ ವಿವಾದ ಮಾಡಿಕೊಳ್ಳುತ್ತಿದ್ದಾರೆ. ನಾಮ್​ ತಮಿಳರ್​ ಪಾರ್ಟಿಯ ಸೀಮಾನ್​ ವಿರುದ್ಧ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದು ತಮ್ಮ ಕೊನೆಯ ವಿಡಿಯೋ ಎಂದು ಕೂಡ ವಿಜಯಲಕ್ಷ್ಮಿ ಹೇಳಿದ್ದಾರೆ.

ಫೆಬ್ರವರಿ 29ರಂದು ವಿಜಯಲಕ್ಷ್ಮಿ ಅವರು ತಮ್ಮ ಮನೆಯ ಟೆರೆಸ್​ನಲ್ಲಿ ಒಂದು ವಿಡಿಯೋ ಮಾಡಿದ್ದರು. ‘ದಯವಿಟ್ಟು ಸೀಮಾನ್​ ನನ್ನ ಜೊತೆ ಮಾತನಾಡಬೇಕು’ ಎಂದು ಅವರ ಆ ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದರು. ಆದರೆ ಸೀಮಾನ್​ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಈಗ ಮಾರ್ಚ್​ 5ರಂದು ವಿಜಯಲಕ್ಷ್ಮಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ತಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.

ವಿಜಯಲಕ್ಷ್ಮಿ ಅವರು ಆ ವಿಡಿಯೋ ಹಂಚಿಕೊಂಡು 5 ದಿನ ಕಳೆದರೂ ಕೂಡ ಸೀಮಾನ್​ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ. ‘ಈ ರೀತಿ ವಿಡಿಯೋ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರೆ ನನಗೆ ಭಾವನಾತ್ಮಕವಾಗಿ ಎಷ್ಟು ನೋವಾಗಿರಬಹುದು ಅಂತ ನೀವೇ ಯೋಚಿಸಿ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ‘ಪರವಾಗಿಲ್ಲ, ಆಕೆ ಬಿದ್ದು ಸಾಯಲಿ ಎಂಬುದು ಜನರ ಪ್ರತಿಕ್ರಿಯೆ ಆಗಿದ್ದರೆ ಎಲ್ಲವನ್ನೂ ಹೇಳುತ್ತೇನೆ ಕೇಳಿ’ ಎಂದಿದ್ದಾರೆ ವಿಜಯಲಕ್ಷ್ಮಿ.

‘ನನ್ನ ಸಹೋದರಿಯ ಸಮಸ್ಯೆಯಿಂದಾಗಿ ನಾನು ಮೊದಲ ಬಾರಿಗೆ ಸೀಮಾನ್​ ಭೇಟಿ ಮಾಡಿದೆ. ಆಗ ಆತನಿಗೆ ಮದುವೆ ಆಗಿರಲಿಲ್ಲ. ನನ್ನನ್ನು ಮದುವೆ ಆಗುವುದಾಗಿ ಭರವಸೆ ನೀಡಿ, ನನ್ನ ಜೊತೆ ಆತ ಮೂರು ವರ್ಷ ಇದ್ದ. ಯಾರಿಗೂ ಗೊತ್ತಾಗದಂತೆ ಆತ ನನ್ನ ಜೊತೆ ರಹಸ್ಯವಾಗಿ ಮದುವೆ ಆದ. ನನ್ನ ಇಡೀ ಬದುಕನ್ನು ಹಾಳು ಮಾಡಿದ. ಸಮಸ್ಯೆಗಳು ಎದುರಾದಾಗ ನನ್ನನ್ನು ಒಂಟಿ ಮಾಡಿದ’ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.

‘ಇದು ನನ್ನ ಕೊನೆಯ ವಿಡಿಯೋ. ಇನ್ನು ಎರಡು ದಿನದೊಳಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನಾನು ಕರ್ನಾಟಕದಲ್ಲಿ ಸಾಯಲು ಸಿದ್ಧಳಾಗಿದ್ದೇನೆ. ಇದಕ್ಕೆಲ್ಲ ಸೀಮಾನ್​ ಕಾರಣ’ ಎಂದು ವಿಜಯಲಕ್ಷ್ಮಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ತಮಿಳಿನಲ್ಲಿ ಅವರು ಮಾತನಾಡಿರುವ ಈ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist