ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

Twitter
Facebook
LinkedIn
WhatsApp
ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ (Rakshit Shetty) ಒಂದರ ಮೇಲೊಂದು ಹಿಟ್ ಸಿನಿಮಾಗಳನ್ನು ಕೊಡುತ್ತಿದ್ದಾರೆ. ‘777 ಚಾರ್ಲಿ‘ (777 Charlie) ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಸೂಪರ್ ಹಿಟ್ ಆಗಿದೆ. ಅದರ ಹಿಂದೆ ಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸಹ ಹಿಟ್ ಎನಿಸಿಕೊಂಡಿದೆ. ತನ್ನ ವಾರಗೆಯ ನಟರು ನಡೆಯುತ್ತಿರುವ ದಾರಿಗೆ ಹೊರತಾಗಿ ಮಾಸ್, ಕಮರ್ಷಿಯಲ್ ಸಿದ್ಧ ಸೂತ್ರಗಳನ್ನು ಪಕ್ಕಕ್ಕೆ ಸರಿಸಿ ಕಂಟೆಂಟ್​ ಮೇಲೆ ಗಮನ ಹರಿಸಿರುವ ರಕ್ಷಿತ್ ಶೆಟ್ಟಿ, ಭವಿಷ್ಯದಲ್ಲಿಯೂ ಸಾಕಷ್ಟು ಯೋಜನೆಗಳನ್ನು ಮುಂದೆ ಹರವಿಕೊಂಡು ಕೂತಿದ್ದಾರೆ. ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ತೆಲುಗಿನಲ್ಲಿ ಬಿಡುಗಡೆ ಮಾಡುತ್ತಿದ್ದು, ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

ತೆಲುಗಿನಲ್ಲಿ ‘ಸಪ್ತ ಸಾಗರಾಲು ದಾಟಿ’ ಹೆಸರಿನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ರಕ್ಷಿತ್ ಮುಂದಾಗಿದ್ದು, ತೆಲುಗು ರಾಜ್ಯಗಳಲ್ಲಿ ಜೋರಾಗಿ ಪ್ರಚಾರ ಮಾಡುತ್ತಿದ್ದಾರೆ ರಕ್ಷಿತ್ ಶೆಟ್ಟಿ ಹಾಗೂ ತಂಡ. ತೆಲುಗು ರಾಜ್ಯಗಳಲ್ಲಿ ರಶ್ಮಿಕಾ ಮಂದಣ್ಣ ಜನಪ್ರಿಯ ತಾರೆ, ಇದೇ ಕಾರಣಕ್ಕೆ ರಕ್ಷಿತ್ ಶೆಟ್ಟಿಗೆ ಸಹಜವಾಗಿಯೇ ರಶ್ಮಿಕಾ ಮಂದಣ್ಣ ಕುರಿತಾದ ಪ್ರಶ್ನೆಗಳು ಸಂದರ್ಶನಗಳಲ್ಲಿ ಎದುರಾಗಿವೆ. ಯೂಟ್ಯೂಬರ್ ಒಬ್ಬರೊಟ್ಟಿಗಿನ ಸಂದರ್ಶನದಲ್ಲಿ ರಶ್ಮಿಕಾ ಬಗ್ಗೆ ಕೇಳಲಾದ ಪ್ರಶ್ನೆಗೆ, ಎಂದಿನಂತೆ ಶಾಂತವಾಗಿ, ಘನತೆಯುತವಾಗಿಯೇ ಉತ್ತರಿಸಿದ್ದಾರೆ.

ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

‘ರಕ್ಷಿತ್ ಶೆಟ್ಟಿ ಈಗಲೂ ರಶ್ಮಿಕಾ ಅವರೊಟ್ಟಿಗೆ ಸಂಪರ್ಕದಲ್ಲಿದ್ದಾರಾ?’ ಎಂಬ ಪ್ರಶ್ನೆಯನ್ನು ಯೂಟ್ಯೂಬರ್ ಒಬ್ಬರು ಕೇಳಿದ್ದಾರೆ. ಪ್ರಶ್ನೆಗೆ ಉತ್ತರಿಸಿದ ನಟ ರಕ್ಷಿತ್ ಶೆಟ್ಟಿ, ”ಹೌದು, ನಾವು ಸಂಪರ್ಕದಲ್ಲಿದ್ದೇವೆ. ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ಆ ಕನಸುಗಳನ್ನು ಈಗ ಸಾಕಾರಗೊಳಿಸಿಕೊಳ್ಳುತ್ತಿದ್ದಾರೆ. ಅವರ ಸಾಧನೆಗೆ ಭೇಷ್ ಎನ್ನಲೇ ಬೇಕು” ಎಂದಿದ್ದಾರೆ ರಕ್ಷಿತ್ ಶೆಟ್ಟಿ. ಈ ಹಿಂದೆಯೂ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾದಾಗೆಲ್ಲ ರಕ್ಷಿತ್ ಶೆಟ್ಟಿ ಇದೇ ಘನತೆಯಿಂದಲೇ ಉತ್ತರ ನೀಡಿದ್ದಾರೆ.

ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

ಅದೇ ಸಂದರ್ಶನದಲ್ಲಿ ಕನ್ನಡ ಚಿತ್ರರಂಗ, ಕನ್ನಡ ಚಿತ್ರರಂಗದ ಸ್ಟಾರ್ ನಟರುಗಳು, ರಿಷಬ್ ಶೆಟ್ಟಿ, ಪರಮವಃ ಸ್ಟುಡಿಯೋಸ್ ಮತ್ತು ಪಿಕ್ಚರ್ಸ್, ತಮ್ಮ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಇನ್ನೂ ಹಲವು ವಿಷಯಗಳ ಬಗ್ಗೆ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ಸಂದರ್ಶನದ ಮಧ್ಯೆ, ರಿಷಬ್ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇಬ್ಬರ ಗೆಳೆತನ, ತಮ್ಮ ಮುಂದಿನ ಪ್ರಾಜೆಕ್ಟ್ ಇನ್ನೂ ಹಲವು ವಿಷಯಗಳ ಬಗ್ಗೆ ನಟ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ.

ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ರಶ್ಮಿಕಾ ಮಂದಣ್ಣ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದು, ಸ್ವತಃ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಸುಂದರ ಪ್ರೇಮಕತೆಯುಳ್ಳ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ನಾಯಕಿ. ರುಕ್ಮಿಣಿಯ ನಟನೆ ಬಗ್ಗೆ ಭರಪೂರ ಪ್ರಶಂಸೆ ವ್ಯಕ್ತವಾಗಿದೆ. ಸಿನಿಮಾದ ಮೊದಲ ಭಾಗವಷ್ಟೆ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಎರಡನೇ ಭಾಗ ಅಕ್ಟೋಬರ್ ತಿಂಗಳಲ್ಲಿ ತೆರೆಗೆ ಬರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist