ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!

Twitter
Facebook
LinkedIn
WhatsApp
Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!

ತಿರುವನಂತಪುರಂ: ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆನೆ ಮರಿಯೊಂದು (Elephant) ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಮಂಗಳವಾರ ಸಂಜೆ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ.

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.

ಪುಷ್ಕರನ್ ಪಿಳ್ಳೆ ಆ ಕರುವಿಗೆ ಊಟವನ್ನು ನೀಡುತ್ತಿರುವಾಗ ಆಸುಪಾಸಿನಲ್ಲಿ ಜೆಸಿಬಿ ಯಂತ್ರಗಳು ಕೆಲಸ ಮಾಡುತ್ತಿತ್ತು. ಆ ಯಂತ್ರದ ದೊಡ್ಡ ಶಬ್ದದಿಂದ ಮರಿ ಆನೆ ಹೆದರಿ, ಪುಷ್ಕರನ್ ಪಿಳ್ಳೈ ಅವರ ಬೆರಳನ್ನು ಕಚ್ಚಿದೆ ಎಂದು ರಿಪೋರ್ಟರ್ ಲೈವ್ ವರದಿಯಲ್ಲಿ ತಿಳಿಸಿದೆ.

ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ, ಬೇರ್ಪಡಿಸಿದ ಬೆರಳನ್ನು ಮತ್ತೆ ಹೊಲಿಯಲು ವೈದ್ಯಕೀಯ ತಂಡವು ಪ್ರಯತ್ನಿಸುತ್ತಿದೆ.

ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದ ಪಶುವೈದ್ಯರು ಮತ್ತು ಸಹಾಯಕರ ಅಸಮರ್ಥ ವರ್ತನೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊಟ್ಟೂರಿನಲ್ಲಿರುವ ಆನೆ ಪುನರ್ವಸತಿ ಕೇಂದ್ರವು 56 ಹೆಕ್ಟೇರ್‌ಗಳಲ್ಲಿ ಹರಡಿಕೊಂಡಿದೆ. ಅಲ್ಲಿ ದೈತ್ಯ ಸಸ್ತನಿಗಳು ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ತಿರುಗಾಡಲು ಅವಕಾಶವಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ