ತಿರುವನಂತಪುರಂ: ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆನೆ ಮರಿಯೊಂದು (Elephant) ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಮಂಗಳವಾರ ಸಂಜೆ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ.
ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.
ಪುಷ್ಕರನ್ ಪಿಳ್ಳೆ ಆ ಕರುವಿಗೆ ಊಟವನ್ನು ನೀಡುತ್ತಿರುವಾಗ ಆಸುಪಾಸಿನಲ್ಲಿ ಜೆಸಿಬಿ ಯಂತ್ರಗಳು ಕೆಲಸ ಮಾಡುತ್ತಿತ್ತು. ಆ ಯಂತ್ರದ ದೊಡ್ಡ ಶಬ್ದದಿಂದ ಮರಿ ಆನೆ ಹೆದರಿ, ಪುಷ್ಕರನ್ ಪಿಳ್ಳೈ ಅವರ ಬೆರಳನ್ನು ಕಚ್ಚಿದೆ ಎಂದು ರಿಪೋರ್ಟರ್ ಲೈವ್ ವರದಿಯಲ್ಲಿ ತಿಳಿಸಿದೆ.
ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ, ಬೇರ್ಪಡಿಸಿದ ಬೆರಳನ್ನು ಮತ್ತೆ ಹೊಲಿಯಲು ವೈದ್ಯಕೀಯ ತಂಡವು ಪ್ರಯತ್ನಿಸುತ್ತಿದೆ.
ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದ ಪಶುವೈದ್ಯರು ಮತ್ತು ಸಹಾಯಕರ ಅಸಮರ್ಥ ವರ್ತನೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊಟ್ಟೂರಿನಲ್ಲಿರುವ ಆನೆ ಪುನರ್ವಸತಿ ಕೇಂದ್ರವು 56 ಹೆಕ್ಟೇರ್ಗಳಲ್ಲಿ ಹರಡಿಕೊಂಡಿದೆ. ಅಲ್ಲಿ ದೈತ್ಯ ಸಸ್ತನಿಗಳು ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ತಿರುಗಾಡಲು ಅವಕಾಶವಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?