ಸೊರಕೆ ಕಾರ್ಯಧ್ಯಕ್ಷ, ಶೋಭಾಗೆ ರಾಜ್ಯಾಧ್ಯಕ್ಷ ಸ್ಥಾನ. ಉಡುಪಿ ಲೋಕಸಭೆಯಲ್ಲಿ ಮಧ್ವರಾಜ್ v/s ರಾಜಶೇಖರ ಕೋಟ್ಯಾನ್?
ಉಡುಪಿ: ಉಡುಪಿ ರಾಜಕೀಯ ಕ್ಷೇತ್ರದ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಕಾರ್ಯಧ್ಯಕ್ಷ ಆಗುವ ಸಾಧ್ಯತೆ ಇದೆ ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ನಡುವೆ ಹಾಲಿ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷರಾಗುವ ಸಂಭವ ಇದೆ ಎನ್ನಲಾಗುತ್ತದೆ. ಸೊರಕೆ ಹಾಗೂ ಶೋಭಾ ಪಕ್ಷದ ಉನ್ನತ ಹುದ್ದೆ ಅಲಂಕರಿಸಿದರೆ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಬದಲಿ ಅಭ್ಯರ್ಥಿಗಳು ಎರಡು ಪಕ್ಷಗಳಿಂದ ಆಯ್ಕೆಯಾಗುವುದು ಖಚಿತ ಎನ್ನಲಾಗುತ್ತದೆ.
ಇದು ಬಿಜೆಪಿಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗು ಕಾಂಗ್ರೆಸ್ ನಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್ ವರಿಗೆ ಅವಕಾಶದ ಬಾಗಿಲನ್ನು ತೆರೆಸಬಹುದು ಎ೦ದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿದ್ದಾರೆ.
ಇದರಿಂದ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಪ್ರಮೋದ್ ಹಾಗೂ ರಾಜಶೇಖರ ಕೋಟ್ಯನ್ ಮುಖಾಮುಖಿಯಾಗಬಹುದು ಎನ್ನಲಾಗುತ್ತಿದೆ.
ಇದು ಈಗ ಕುತೂಹಲ ಕೆರಳಿಸಿದ್ದು, ಆದರೆ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದು ಇನ್ನು ನಿಗೂಢವಾಗಿ ಉಳಿದಿದೆ. ಉಡುಪಿ ಲೋಕಸಭಾ ಕ್ಷೇತ್ರದ ಬಹುತೇಕ ಚಿತ್ರಣ ಕಾಣಿಸಿಕೊಳ್ಳುತ್ತಿದ್ದು, ಅಂತಿಮವಾಗಿ ಪಕ್ಷದ ನಿರ್ಧಾರ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
‘ಬಿಜೆಪಿಯ ಅಧ್ಯಕ್ಷರು ಯಾರು ಅಂತ ಬಹಿರಂಗಪಡಿಸಲಿ’- ಶೆಟ್ಟರ್
ಹುಬ್ಬಳ್ಳಿ, ಅ 25 : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರೋದೆ ಆಯಿತು. ಅಧ್ಯಕ್ಷರು ಯಾರು ಅಂತ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಅದರ ಪ್ಲಸ್, ಮೈನಸ್ ನೋಡಿ ಪ್ರಯೋಗ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದು ಊಹಾಪೋಹವಷ್ಟೇ.ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ.
ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಈ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ ಎಂದು ಹೇಳಿದರು.
ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಆಶಾಭಾವನೆ ಮೂಡಿಸಿ ಕಾರ್ಯಕರ್ತರನ್ನು, ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದರು.