ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ

Twitter
Facebook
LinkedIn
WhatsApp
ಶಿಕ್ಷಕಿಯ ಪ್ರಿಯಕರನಿಂದ ವಿದ್ಯಾರ್ಥಿಯ ಹತ್ಯೆ

ಶಿಕ್ಷಕಿಯ ಪ್ರಿಯಕರನೊಬ್ಬ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಇದು ಅಪಹರಣವೆಂದು ತೋರಿಸಲು ಮನೆಗೆ ಪತ್ರವೊಂದನ್ನು ಕಳುಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 10ನೇ ತರಗತಿ ವಿದ್ಯಾರ್ಥಿಯನ್ನು ಟ್ಯೂಷನ್ ಶಿಕ್ಷಕಿ ರಚಿತಾ ಅವರ ಪ್ರಿಯಕರ ಪ್ರಭಾತ್ ಶುಕ್ಲಾ ಸ್ಟೋರ್ ರೂಮ್‌ಗೆ ಕರೆದೊಯ್ದಿದ್ದರು.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ರಚಿತಾ ನಿನ್ನನ್ನು ಕರೆಯುತ್ತಿದ್ದಾರೆ ಎಂದು ನಂಬಿಸಿ ಪ್ರಭಾತ್ ಸ್ಟೋರ್​ ರೂಮ್​ಗೆ ಕರೆದೊಯ್ದಿದ್ದ.

ವಿದ್ಯಾರ್ಥಿ ಮತ್ತು ಪ್ರಭಾತ್ ಒಟ್ಟಿಗೆ ಕೋಣೆಯನ್ನು ಪ್ರವೇಶಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 20 ನಿಮಿಷಗಳ ನಂತರ ಪ್ರಭಾತ್ ಹೊರಬರುತ್ತಾನೆ, ಆದರೆ ವಿದ್ಯಾರ್ಥಿ ಹೊರಬರಲಿಲ್ಲ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ನಂತರ ಯಾರೂ ಕೊಠಡಿಗೆ ಪ್ರವೇಶಿಸಿಲ್ಲ.

ನಂತರ ಆರೋಪಿ ಬಟ್ಟೆ ಬದಲಾಯಿಸಿಸ್ಕೂಟರ್‌ನಲ್ಲಿ ಹೋಗುತ್ತಿರುವುದು ಕಂಡು ಬಂದಿದೆ. ಪ್ರಕರಣದಲ್ಲಿ ಪ್ರಭಾತ್, ರಚಿತಾ ಮತ್ತು ಅವರ ಪ್ರಿಯಕರ ಆರ್ಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಪತ್ರವು ಕುಟುಂಬದವರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವಾಗಿತ್ತು. ಕುಟುಂಬಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿರುವ ರೀತಿಯ ಪತ್ರವೊಂದನ್ನು ಕಳುಹಿಸಲಾಗಿತ್ತು, ಆದರೆ ಪತ್ರ ಅವರ ಮನೆಯನ್ನು ತಲುಪುವಷ್ಟರಲ್ಲಿ ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗಿತ್ತು.

ವಿಳಾಸ ಕೇಳುವ ನೆಪದಲ್ಲಿ ಬಂದು ಪ್ರಜ್ಞೆ ತಪ್ಪಿಸಿ ಬಾಲಕನ ಕಿಡ್ನಾಪ್​​: ಹಾಸನದಲ್ಲಿ ಬಿಟ್ಟುಹೋದ ಕಿರಾತಕರು

ಹಾಸನ, ನವೆಂಬರ್​​ 01: ವಿಳಾಸ ಕೇಳುವ ನೆಪದಲ್ಲಿ ಬಂದು ಪ್ರಜ್ಞೆ ತಪ್ಪಿಸಿ ಬಾಲಕನನ್ನು ಕಿಡ್ನಾಪ್ (Kidnapping)​ ಮಾಡಿ ಕಿರಾತಕರು ಹಾಸನದಲ್ಲಿ ಬಿಟ್ಟುಹೋಗಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ, ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್ (17) ನನ್ನ ಕಿಡ್ನಾಪ್ ಮಾಡಿ ಬಿಟ್ಟು ಹೋಗಿರುವ ಆರೋಪ ಮಾಡಿದ್ದಾರೆ. ನಿನ್ನೆ ಬೆಳಿಗ್ಗೆ ಯುವಕ ಕಾಲೇಜಿಗೆ ತೆರಳುವ ವೇಳೆ ಕಿಡ್ನಾಪ್​ ಮಾಡಿರುವುದಾಗಿ ಆರೋಪಿಸಿದ್ದಾರೆ.

ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಪ್ರಜ್ಞೆ ತಪ್ಪಿ ಎಚ್ಚರಗೊಂಡಾಗ ಹಾಸನ ಜಿಲ್ಲೆಯ ಅರಕಲಗೂಡು ಸಮೀಪದಲ್ಲಿದ್ದ. ಬಳಿಕ ಎಚ್ಚರಗೊಂಡು ಸಮೀಪದ ಮನೆ ಬಳಿ ತೆರಳಿ ಪೋಷಕರಿಗೆ ಯುವಕ ಫೋನ್ ಮಾಡಿದ್ದಾನೆ. ಕೂಡಲೆ ಹಾಸನಕ್ಕೆ ಬಂದು ಮಗನನ್ನ ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಸ್ವಸ್ಥಗೊಂಡಿದ್ದ ಯುವಕನಿಗೆ ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾರು ಯಾವ ಕಾರಣಕ್ಕೆ ಕಿಡ್ನಾಪ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದು, ಬೆಂಗಳೂರಿನ ಯಲಹಂಕ‌ ಪೊಲೀಸ್ ಠಾಣೆಗೆ ಕಿಡ್ನಾಪ್ ಬಗ್ಗೆ ದೂರು ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ