ಸೋಮವಾರ, ಜುಲೈ 1, 2024
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

T20 World Cup: ಆಂಗ್ಲರ ವಿರುದ್ಧಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.

Twitter
Facebook
LinkedIn
WhatsApp
T20 World Cup: ಆಂಗ್ಲರ ವಿರುದ್ಧಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.

T20 World Cup: ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಪ್ರವೇಶ ಪಡೆದಿದೆ. ಮೊದಲ ಸೆಮಿಫೈನಲ್​ನಲ್ಲಿ ಅಫ್ಘಾನಿಸ್ತಾನ್ ತಂಡದ ವಿರುದ್ದ ಅಮೋಘ ಗೆಲುವು ಸಾಧಿಸಿ ಸೌತ್ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶ ಪಡೆದಿದೆ. 

ಜೂನ್ 29 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತು. 172 ರನ್‌ಗಳ ಗುರಿ ಬೆನ್ನತ್ತಿದ ಆಂಗ್ಲರ ಪಡೆ 16.4 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 103 ರನ್‌ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಟೀಂ ಇಂಡಿಯಾ 19 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ 9 ರನ್ ಗಳಿಸಿ ಔಟಾದರು. ಆ ಬಳಿಕ ರಿಷಬ್ ಪಂತ್ ಕೂಡ 4 ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ಹೀಗಾಗಿ ಟೀಂ ಇಂಡಿಯಾ ಮೊದಲ 6 ಓವರ್​ಗಳಲ್ಲಿ 40 ರನ್​ ಕಲೆಹಾಕುವಷ್ಟರಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಈ ಇಬ್ಬರೂ 73 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ರೋಹಿತ್ 57 ರನ್ ಬಾರಿಸಿ ಇನ್ನಿಂಗ್ಸ್ ಮುಗಿಸಿದರೆ, ಸೂರ್ಯಕುಮಾರ್ 47 ರನ್​ಗಳ ಕಾಣಿಕೆ ನೀಡಿದರು. ನಂತರ ರವೀಂದ್ರ ಜಡೇಜಾ ಔಟಾಗದೆ 17 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 23 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಅಕ್ಷರ್ ಪಟೇಲ್ 10 ರನ್ ಬಾರಿಸಿದರೆ, ಅರ್ಷದೀಪ್ ಸಿಂಗ್ ಅಜೇಯ 1 ರನ್​ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ಪರ ಬೌಲ್ ಮಾಡಿದ 6 ಬೌಲರ್​ಗಳ ಪೈಕಿ ನಾಲ್ವರು ತಲಾ 1 ವಿಕೆಟ್ ಪಡೆದರೆ, ಕ್ರಿಸ್ ಜೋರ್ಡಾನ್ ಅತಿ ಹೆಚ್ಚು 3 ವಿಕೆಟ್ ಪಡೆದರು.

ಗೆಲುವಿಗೆ 171 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಮೊದಲ ವಿಕೆಟ್​ಗೆ 26 ರನ್​​ಗಳ ಜೊತೆಯಾಟ ಸಿಕ್ಕಿತು. ಆದರೆ ನಾಯಕ ಜೋಸ್ ಬಟ್ಲರ್ ವಿಕೆಟ್ ಪತನದೊಂದಿಗೆ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. 

ಆಂಗ್ಲ ತಂಡದ ಪರ ಹ್ಯಾರಿ ಬ್ರೂಕ್ 25 ರನ್ ಬಾರಿಸಿ ಅಗ್ರ ಸ್ಕೋರರ್ ಎನಿಸಿಕೊಂಡರೆ, ಜೋಸ್ ಬಟ್ಲರ್ 23 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ವೇಗಿ ಜೋಫ್ರಾ ಆರ್ಚರ್ 21 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಯಾವೊಬ್ಬ ಬ್ಯಾಟರ್ ಕೂಡ ಒಂದಂಕಿ ದಾಟಲಿಲ್ಲ. ಭಾರತದ ಪರ  ಕುಲ್ದೀಪ್ ಯಾದವ್ 19 ರನ್ ನೀಡಿ ಮೂರು ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 23 ರನ್ ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಅವರ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ