ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ತಾಪಮಾನ 2 ಡಿಗ್ರಿ ಏರಿಕೆ ; ನೀರಿನ ಪ್ರಮಾಣ ಇಳಿಕೆ..!

Twitter
Facebook
LinkedIn
WhatsApp
ರಾಜ್ಯದಲ್ಲಿ ತಾಪಮಾನ 2 ಡಿಗ್ರಿ ಏರಿಕೆ ; ನೀರಿನ ಪ್ರಮಾಣ ಇಳಿಕೆ..!

ರಾಜ್ಯದಲ್ಲಿ ಈ ಬಾರಿ ಮಳೆಯ ಪ್ರಮಾಣ ಭಾರೀ ಕಡಿಮೆಯಾಗಿದ್ದು, ಇದರ ಪರಿಣಾಮ ಉಷ್ಣಾಂಶ ಗರಿಷ್ಠ ವಾಡಿಕೆಗಿಂತ ಸರಾಸರಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ. ಈಗಾಗಲೇ ರಾಜ್ಯದಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಇನ್ನೂ ಎರಡು-ಮೂರು ತಿಂಗಳು ಬೇಸಿಗೆ ಎದುರಿಸುವುದು ದೊಡ್ಡ ಸವಾಲಾಗಿದೆ.

ಬೆಂಗಳೂರು ಸೇರಿಂದತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈಗಾಗಲೇ ಬಿಸಿಲಿನ ಝಳಕ್ಕೆ ಜನ- ಜಾನುವಾರು ತತ್ತರಿಸಿ ಹೋಗಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ರಾಜ್ಯದ ತಾಪಮಾನವು ಕಳೆದ ವರ್ಷ ಫೆಬ್ರವರಿಗಿಂತ ಈ ಬಾರಿ ಸರಾಸರಿ 1-2 ಡಿಗ್ರಿ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಜನ ಎಚ್ಚರ ವಹಿಸಬೇಕಾಗಿದೆ. ಆದರೆ ಈ ಬಾರಿ ಬಿಸಿಗಾಳಿ ಅಲೆಯ ಪರಿಸ್ಥಿತಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ಮುನ್ಸೂಚನೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಇದೆ. ಮಾರ್ಚ್ ತಿಂಗಳಿಗೂ ಮುನ್ನ ಮತ್ತಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣ ಮತ್ತು ಗಾಳಿಯಿಂದ ಕಳೆದ ಕೆಲ ದಿನಗಳು ವಾತಾವರಣ ಸಾಮಾನ್ಯವಾಗಿತ್ತು. ಆದರೆ ಇದೀಗ ಮತ್ತೆ ತಾಪಮಾನವು ಮತ್ತೆ ಏರಲು ಪ್ರಾರಂಭಿಸಿದ್ದು, ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಳೆದ ವರ್ಷ ಮಾರ್ಚ್‌ಗೆ ಹೋಲಿಸಿದರೆ, ಈ ಬಾರಿ ತಾಪಮಾನ ಮತ್ತಷ್ಟು ಏರುವ ಸಾಧ್ಯತೆ ಹೆಚ್ಚಿದೆ.

ರಾಜ್ಯದಲ್ಲಿ ತಾಪಮಾನ ಏರಿಕೆಯಿಂದ ಜನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಎಲ್ಲಡೆ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಬೆಂಗಳೂರಿನಲ್ಲಿಯೂ ಅನೇಕ ಭಾಗಗಳಲ್ಲಿ ಬೋರ್‌ವೆಲ್‌ನಲ್ಲಿ ನೀರು ಬರಿದಾಗಿದ್ದು, ಖಾಸಗಿ ಟ್ಯಾಂಕರ್‌ಗಳಿಗೆ ಜನ ಅವಲಂಭಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜಿಲ್ಲೆ ಭಾಗಗಳಲ್ಲಿ ರೈತರು ಬೆಳೆ ಉಳಿಸಿಕೊಳ್ಳಲು ಸಹ ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಭೀಕರ ಬೇಸಿಗೆ ಎದುರಿಸಬೇಕಾದ ಸವಾಲು ರಾಜ್ಯದ ಜನತೆ ಮುಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist