ಭೀಕರ ಅಪಘಾತ - ತಂದೆ-ಮಗನ ಸಾವು
ಕೊಪ್ಪಳ ಡಿ.04: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಕೊಪ್ಪಳ (Koppal) ತಾಲೂಕಿನ ಅಮರೇಶ್ವರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮೌನೇಶ್ ಬಡಿಗೇರ (31), ತಂದೆ ದೇವಿಂದ್ರಪ್ಪ ಬಡಿಗೇರ (55) ಮೃತ ದುರ್ದೈವಿಗಳು. ಮೃತರು ಕೊಪ್ಪಳ ತಾಲೂಕಿನ ಇರಕಲಗಡ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಮುನಿರಾಬಾದ್ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇವಂತ್ ರೆಡ್ಡಿಯನ್ನು ಭೇಟಿಯಾದ ತೆಲಂಗಾಣ ಡಿಜಿಪಿ ಅಮಾನತು
ಹೈದರಾಬಾದ್: ತೆಲಂಗಾಣ (Telangana) ವಿಧಾನಸಭಾ ಚುನಾವಣೆಯ (Election) ಮತ ಎಣಿಕೆ ನಡೆಯುತ್ತಿದ್ದ ವೇಳೆ ತೆಲಂಗಾಣ ಕಾಂಗ್ರೆಸ್ (Congress) ಮುಖ್ಯಸ್ಥ ರೇವಂತ್ ರೆಡ್ಡಿ (Revanth Reddy) ಅವರನ್ನು ಭೇಟಿ ಮಾಡಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ಅಂಜನಿ ಕುಮಾರ್ ಮತ್ತು ಇತರ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ವಿವರಣೆಯನ್ನು ಸಲ್ಲಿಸುವಂತೆ ಕೇಳಲಾಗಿದೆ.
ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಂದು (ಭಾನುವಾರ) ಮುಂಜಾನೆ ಹೈದರಾಬಾದ್ನಲ್ಲಿರುವ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದರು. ಕಾಂಗ್ರೆಸ್ ಮುಖ್ಯಸ್ಥರಿಗೆ ಉನ್ನತ ಪೊಲೀಸ್ ಪುಷ್ಪಗುಚ್ಛ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಜಿಪಿ ಅಭ್ಯರ್ಥಿಯೊಬ್ಬರನ್ನು ಭೇಟಿಯಾಗಿರುವುದು ಒಂದು ಪಕ್ಷಕ್ಕೆ ತೋರಿದ ಒಲವು ಎಂಬ ಸ್ಪಷ್ಟ ಸೂಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಸತತ 2 ಬಾರಿ ಗೆದ್ದು 10 ವರ್ಷಳಿಂದ ತೆಲಂಗಾಣದಲ್ಲಿ ಅಧಿಕಾರದಲ್ಲಿದ್ದ ಭಾರತ ರಾಷ್ಟ್ರ ಸಮಿತಿಯನ್ನು ಈ ಬಾರಿ ಸೋಲಿಸಿದ ಕಾಂಗ್ರೆಸ್ 3ನೇ ಬಾರಿ ಅಧಿಕಾರ ಹಿಡಿಯುವುದನ್ನು ತಡೆದಿದೆ.
ಮೂರು ರಾಜ್ಯಗಳ ಜನಾದೇಶ ಲೋಕಸಭೆಯ ಹ್ಯಾಟ್ರಿಕ್ ಗೆಲುವಿನ ಗ್ಯಾರಂಟಿ: ಮೋದಿ ಭರವಸೆ
ನವದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ.
ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.
ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.
ನಾನು ಇಂದು ವಿನ್ರಮವಾಗಿ ದೇಶದ ಜನರಿಗೆ ಹೇಳುತ್ತಿದ್ದೇನೆ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದೇವೆ. ಇದು ಮೋದಿ ಗ್ಯಾರಂಟಿ. ಗ್ಯಾರಂಟಿ ಪೂರ್ಣ ಮಾಡುವುದು ಮೋದಿ ಗ್ಯಾರಂಟಿ. ದೇಶದ ಯುವಕರು ಅಭಿವೃದ್ಧಿಯನ್ನು ಮಾತ್ರ ಕೇಳುತ್ತಾರೆ. ಇದಕ್ಕೆ ವಿರುದ್ಧವಾಗಿ ಕೆಲಸ ಮಾಡಿದವರು ಅಧಿಕಾರದಿಂದ ಹೊರಗಿದ್ದಾರೆ. ಪೇಪರ್ ಲೀಕ್ ಸೇರಿದಂತೆ ಹಲವು ಹರಗಣ ಮಾಡಿದ ಪಕ್ಷಗಳು ಅಧಿಕಾರದಿಂದ ಹೊರಗಿವೆ. ದೇಶದ ಯುವಕರಲ್ಲಿ ಬಿಜೆಪಿ ಮೇಲೆ ಭರವಸೆ ಹೆಚ್ಚಿದೆ. ನಮ್ಮ ಆಕಾಂಕ್ಷೆಗಳನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ಯುವಕರು ನಂಬಿದ್ದಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಆದಿವಾಸಿಗಳನ್ನು ತಾತ್ಸರ ಮಾಡಿದ ಪಕ್ಷವನ್ನು ಅವರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಆದಿವಾದಿಗಳಿರುವ ರಾಜ್ಯದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಂಡಿದೆ. ಆದಿವಾಸಿ ಸಮುದಾಯದ ಅಭಿವೃದ್ಧಿ ನಿರೀಕ್ಷೆಯಲ್ಲಿದ್ದಾರೆ. ಈ ನಿರೀಕ್ಷೆಯನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ನಂಬಿದ್ದಾರೆ ಎಂದು ತಿಳಿಸಿದ್ದಾರೆ.
ರಾಷ್ಟ್ರಿಯ ಅಧ್ಯಕ್ಷ ನಡ್ಡಾ ಅವರ ಕಾರ್ಯತಂತ್ರವೂ ಗೆಲವಿಗೆ ಕಾರಣ. ಈ ಚುನಾವಣೆ ಅವಧಿಯಲ್ಲಿ ನಡ್ಡಾ ಮನೆಯಲ್ಲಿ ದುರ್ಘಟನೆ ನಡೆಯಿತು. ಆದಾಗ್ಯೂ ಕಾರ್ಯಕರ್ತನಂತೆ ಕೆಲಸ ಮಾಡಿದರು. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ವಾಪಸ್ ಬರಲ್ಲ ಎಂದು ಹೇಳಿದ್ದೆ. ನಾನು ಭವಿಷ್ಯ ನಂಬಲ್ಲ, ಆದರೆ ರಾಜಸ್ಥಾನ ಜನರ ಮೇಲೆ ನನಗೆ ವಿಶ್ವಾಸವಿತ್ತು. ಈಗ ಅದು ನಿಜವಾಗಿದೆ. ಬಿಜೆಪಿ ಮೇಲೆ ರಾಜಸ್ಥಾನದಲ್ಲಿ ಭರವಸೆ ಹೆಚ್ಚಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಜನರಿಗೆ ನಾನು ಅಭಾರಿ. ನಿರಂತರವಾಗಿ ಬಿಜೆಪಿ ಜನಪ್ರಿಯತೆ ಹೆಚ್ಚುತ್ತಿದೆ. ಬಿಜೆಪಿ ತೆಲಂಗಾಣ ಜನರ ಸೇವೆಯಲ್ಲಿ ಲೋಪ ಮಾಡುವುದಿಲ್ಲ. ಬಿಜೆಪಿ ತೆಲಂಗಾಣ ಅಭಿವೃದ್ಧಿಗೆ ಕೆಲಸ ಮಾಡಲಿದೆ. ನಮಗೂ ತೆಲಂಗಾಣಕ್ಕೂ ಒಳ್ಳೆಯ ಅನುಬಂಧವಿದೆ ಎಂದು ತೆಲುಗಿನಲ್ಲಿ ಮೋದಿ ಮಾತನಾಡಿ ಗಮನ ಸೆಳೆದಿದ್ದಾರೆ.