ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧೋನಿ ನಗದು ಹಾಗೂ ಮನೆಯನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ನಂಬಿಸಿ ಮಗುವನ್ನು ಅಪಹರಿಸಿದ ಆರೋಪಿಗಳು!

Twitter
Facebook
LinkedIn
WhatsApp
ಧೋನಿ ನಗದು ಹಾಗೂ ಮನೆಯನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ನಂಬಿಸಿ ಮಗುವನ್ನು ಅಪಹರಿಸಿದ ಆರೋಪಿಗಳು!

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಗದು ಹಾಗೂ ಮನೆಯನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ಸುಳ್ಳು ಹೇಳಿ ಆರೋಪಿಗಳು ಕರೆದೊಯ್ದು ತಾಯಿಯ ಪ್ರಜ್ಞೆ ತಪ್ಪಿಸಿ, ಮಗುವನ್ನು ಅಪಹರಿಸಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ಅರ್ಗೋಡ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 22 ರಂದು ದುರ್ಗಾಪೂಜಾ ಪಂಗಡಗಳಿಗೆ ಭೇಟಿ ನೀಡಲು ತನ್ನ ಮಗನೊಂದಿಗೆ ಹೊರಟಿದ್ದಾಗಿ ಮಹಿಳೆ ತಿಳಿಸಿದ್ದಾರೆ.

ದಂಪತಿ ನಗರದ ಹಿನು ಪ್ರದೇಶದ ಹೊರಗಿನ ಟೀ ಸ್ಟಾಲ್​ನಲ್ಲಿ ತಿಂಡಿ ತಿನ್ನುತ್ತಿದ್ದರು, ಆ ಸಮಯದಲ್ಲಿ ಮೋಟಾರು ಬೈಕಿನಲ್ಲಿ ಬಂದ ಆರೋಪಿಗಳು, ಧೋನಿ ದುರ್ಗಾ ಪೂಜೆ ಹಿನ್ನೆಲೆಯಲ್ಲಿ ಬಡವರಿಗೆ 5 ಸಾವಿರ ರೂ ನಗದು ಹಾಗೂ ಮನೆಯನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ ಎಂದು ಹೇಳಿದ್ದರು.

ಜಗನ್ನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಲಿಚಿ ಬಗಾನ್ ಪ್ರದೇಶದ ನಿವಾಸಿಯಾಗಿರುವ ಮಹಿಳೆಯನ್ನು ಹರ್ಮುದಲ್ಲಿನ ವಿದ್ಯುತ್ ಸರಬರಾಜು ಕಚೇರಿಗೆ ಕರೆದೊಯ್ದರು.

ಈ ಫ್ಲಾಟ್​ಗಳು ಲಭ್ಯವಿದೆ ಎಂದು ಯಾವುದೋ ನಕ್ಷೆ ತೋರಿಸುತ್ತಾ ಸುಳ್ಳು ಹೇಳಿ, ಬಿಸ್ಕತ್ತು ಹಾಗೂ ನೀರನ್ನು ಕೈಗಿತ್ತಿದ್ದಾರೆ. ಬಿಸ್ಕತ್ತು ತಿಂದ ಕೂಡಲೇ ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಇಬ್ಬರಿಗೂ ಪ್ರಜ್ಞೆ ಮರಳಿ ಬರುವಷ್ಟರೊಳಗೆ ತಮ್ಮ ಮಗು ಕಾಣೆಯಾಗಿತ್ತು, ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲಿ ಹುಡುಕಾಡಿದರೂ ಸಿಗಲಿಲ್ಲ ಎಂದು ಹೇಳಿದ್ದಾರೆ.

ಪ್ರಕರಣವನ್ನು ಭೇದಿಸಲು ಹಲವು ತಂಡಗಳನ್ನು ರಚಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಸುಳಿವು ಪಡೆಯಲು ಸಮೀಪದ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ದುರ್ಗಾ ಪೂಜೆ ಸಂದರ್ಭದಲ್ಲಿ ಕೋಲ್ಕತ್ತಾ ಹಾಗೂಪಶ್ಚಿಮ ಬಂಗಾಳದ ಇತರೆ ಭಾಗಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಿವೆ. ಜನರನ್ನು ವಂಚಿಸಲು ಬಟ್ಟೆ, ಸಿಹಿ ತಿಂಡಿಗಳನ್ನು ಉಚಿತವಾಗಿ ಕೊಡುವುದಾಗಿ ಹೇಳಿ ಮೋಸಮಾಡುತ್ತಿದ್ದಾರೆ. ಹಲವು ಮಹಿಳೆಯರು ಇಂತಹ ವಂಚನೆಗೆ ಸಂಬಂಧಿಸಿದಂತೆ ಕರೆಗಳನ್ನು ಸ್ವೀಕರಿಸಿದ್ದಾರೆ.

ಗುರುದ್ವಾರದಲ್ಲಿ ಜಲಂಧರ್​ನ ಇಬ್ಬರು ಯುವತಿಯರ ವಿವಾಹ, ರಕ್ಷಣೆ ಕೋರಿ ಹೈಕೋರ್ಟ್​ಗೆ ಮೊರೆ

ಜಲಂಧರ್ ಮೂಲದ ಇಬ್ಬರು ಯುವತಿಯರು ಹಸೆಮಣೆ ಏರಿದ್ದಾರೆ, ಅವರಿಬ್ಬರೂ ಖರಾರ್‌ನ ಗುರುದ್ವಾರ ಸಾಹಿಬ್‌ನಲ್ಲಿ ವಿವಾಹವಾಗಿದ್ದಾರೆ. ಈ ಯುವತಿಯರು ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಅವರಿಗೆ ಭದ್ರತೆ ಒದಗಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಜಲಂಧರ್‌ನ ಇಬ್ಬರು ಯುವತಿಯರು ಖರಾರ್ (ಮೊಹಾಲಿ) ಗುರುದ್ವಾರದಲ್ಲಿ ವಿವಾಹವಾದ ನಂತರ ಪಂಜಾಬ್-ಹರಿಯಾಣ ಹೈಕೋರ್ಟ್‌ನಿಂದ ರಕ್ಷಣೆ ಕೋರಿದ್ದಾರೆ.

ಅರ್ಜಿಯನ್ನು ನಿರ್ಧರಿಸುವಾಗ, ಇಬ್ಬರ ಜೀವ ಮತ್ತು ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜಲಂಧರ್‌ನ ಎಸ್‌ಎಸ್‌ಪಿಗೆ ಹೈಕೋರ್ಟ್ ಆದೇಶಿಸಿದೆ. ಅರ್ಜಿ ಸಲ್ಲಿಸುವಾಗ, ದಂಪತಿ ತಾವು ಒಬ್ಬರನ್ನೊಬ್ಬರು ಇಷ್ಟಪಡುತ್ತೇವೆ ಮತ್ತು ಅಕ್ಟೋಬರ್ 18 ರಂದು ಖರಾರ್‌ನ ಗುರುದ್ವಾರದಲ್ಲಿ ಮದುವೆಯಾಗಿದ್ದೇವೆ ಎಂದು ಹೈಕೋರ್ಟ್‌ಗೆ ತಿಳಿಸಿದರು.

ಅವರ ಕುಟುಂಬ ಸದಸ್ಯರಿಗೆ ಈ ಮದುವೆಯಿಂದ ಸಂತೋಷವಿಲ್ಲ ಮತ್ತು ಅರ್ಜಿದಾರರ ಜೀವಕ್ಕೆ ಅಪಾಯವಿದೆ ಎಂದು ಉಲ್ಲೇಖಿಸಲಾಗಿದೆ.

ಅಪಾಯದ ಭೀತಿ ವ್ಯಕ್ತಪಡಿಸಿ ಜಲಂಧರ್‌ ಎಸ್‌ಎಸ್‌ಪಿಗೂ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಇಂತಹ ಪರಿಸ್ಥಿತಿಯಲ್ಲಿ ಅರ್ಜಿದಾರರು ಹೈಕೋರ್ಟ್‌ನ ಆಶ್ರಯ ಪಡೆಯಬೇಕಾಯಿತು.

ಅರ್ಜಿಯನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ಅರ್ಜಿದಾರರ ಬೇಡಿಕೆ ಪತ್ರವನ್ನು ಪರಿಗಣಿಸಿ ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಜಲಂಧರ್ ಎಸ್‌ಎಸ್‌ಪಿಗೆ ಆದೇಶಿಸಿದೆ. ಇದರೊಂದಿಗೆ ದಂಪತಿಗಳ ಜೀವ ಮತ್ತು ಆಸ್ತಿಯ ಸುರಕ್ಷತೆಯನ್ನು ಖಾತ್ರಿಪಡಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist