ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಂಭೂರು ಎ.ಎಂ‌ಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

Twitter
Facebook
LinkedIn
WhatsApp
ಶಂಭೂರು ಎ.ಎಂ‌ಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಎ.ಎಂ‌ಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.

ನೇತ್ರಾವತಿ ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದು, ಎ.ಎಂ‌.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೋಲೀಸರು ನೀಡಿದ ಮಾಹಿತಿ ಪ್ರಕಾರ ಶವ ಸಂಪೂರ್ಣ ಕೊಳೆತು ಹೋಗಿದ್ದು ಸುಮಾರು 15 ದಿನಗಳ ಹಿಂದೆ ನದಿಗೆ ಬಿದ್ದಿರುವ ಬಗ್ಗೆ ಸಂಶಯವಿದೆ. ಮೃತ ವ್ಯಕ್ತಿ ಪುರುಷ ಅಥವಾ ಮಹಿಳೆಯಾ ಎಂಬುದನ್ನು ಗುರುತು ಹಿಡಿಯಲು ಅಸಾಧ್ಯವಾದ ಪರಿಸ್ಥಿತಿ ಇದ್ದು, ಕೈಯಲ್ಲಿ ಫ್ಯಾನ್ಸಿಯ ಬ್ರೈಸ್ ಲೈಟ್ ಒಂದು ಕಂಡು ಬಂದಿದೆ.

ಸದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಕಾಲು ಜಾರಿ ನದಿಗೆ ಬಿದ್ದಿದ್ದಾರಾ ಅಥವಾ ಬೇರೆ ಕಾರಣಗಳಿರಬಹುದಾ? ಎಂಬುದು ಶವದ ಗುರುತು ಪತ್ತೆ ಹಚ್ಚಿದ ಬಳಿಕ ಮಾತ್ರ ತಿಳಿಯಬಹುದು.
ಇದೀಗ ಶವವನ್ನು ಪೋಲೀಸರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶೀಥಲೀಕರಣದಲ್ಲಿಡಲಾಗಿದ್ದು,ಶವದ ಗುರುತು ಪತ್ತೆ ಹಚ್ಚಲು ಬಂಟ್ವಾಳ ಆಸ್ಪತ್ರೆಗೆ ಹೋಗಬಹುದು ಎಂದು ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಸಿಬ್ಬಂದಿಗಳಾದ ಸುರೇಶ್ ,ಪುನೀತ್ ಮತ್ತು ಮಹಾದೇವ ಅವರು ನೇತ್ರಾವತಿ ನದಿಯಿಂದ ಶವವನ್ನು ಮೇಲ್ಕೆತ್ತಿದ್ದಾರೆ.
ಸುಮಾರು 15 ದಿನಗಳ ಕಾಲಕ್ಕೂ ಅಧಿಕ ದಿನಗಳಾಗಿರುವ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದು, ಶವವನ್ನು ಸಂಬಂಧಿಕರು ಗುರುತು ಪತ್ತೆ ಮಾಡುವವರೆಗೆ ಸಂರಕ್ಷಿಸುವ ‌ದೃಷ್ಟಿಯಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಶವಗಾರದಲ್ಲಿ ಇಡಲಾಗಿದೆ ಎಂದು ಎಸ್.ಐ.ಹರೀಶ್ ತಿಳಿಸಿದ್ದಾರೆ.

ಬಂಟ್ವಾಳ: ಸೊರ್ನಾಡು – ಮುಲಾರಪಟ್ನ ದಾರಿ, ಯಮಲೋಕಕ್ಕೆ ರಹದಾರಿ..!

ಬಂಟ್ವಾಳ : ಬಂಟ್ವಾಳ ತಾಲೂಕಿನ ಸೊರ್ನಾಡು – ಮುಲಾರಪಟ್ನ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಡಾಮರು ಎದ್ದು ಹೋಗಿದ್ದು, ಅಪಾಯಕಾರಿ ಗುಂಡಿಗಳು ಸೃಷ್ಟಿಯಾಗಿದ್ದು ಈ ದಾರಿ ಯಮಲೋಕಕಕ್ಕೆ ರಹದಾರಿಯಂತಾಗಿದೆ.

ಗುಂಡಿಗಳನ್ನು ಜಲ್ಲಿಕಲ್ಲುಗಳಿಂದ ಮುಚ್ಚಲಾದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರರಿಗೆ ಈ ರಸ್ತೆ ಯಮಲೋಕದ ದಾರಿಯಾಗಿ ಪರಿಣಮಿಸುತ್ತಿದ್ದು ಈಗಾಗಲೇ ಆನೇಕರು ಬಿದ್ದು ಕೈಕಾಲುಗಳನ್ನು ಮುರಿಸಿಕೊಂಡಿದ್ದಾರೆ. ಸೊರ್ನಾಡುವಿನಿಂದ ಮುಲಾರಪಟ್ನ ವರೆಗೆ ರಸ್ತೆಗೆ ಡಾಮರೀಕರಣಕ್ಕಾಗಿ ಕಳೆದ ಮಳೆಗಾಲದ ಮುನ್ನವೇ ಅನುದಾನ ಬಿಡುಗಡೆಯಾಗಿತ್ತು.
ಆದರೆ ಗುತ್ತಿಗೆ ವಹಿಸಿಕೊಂಡಿದ್ದ ಜೆ.ಡಿ.ಸುವರ್ಣ ಕಂಪೆನಿಯವರು ಮಳೆಗಾಲ ಆರಂಭಿಕ ದಿನಗಳಲ್ಲಿ ಒಂದು ಲೇಯರ್ ಡಾಮರು ಹಾಕಿ ಜನರ ಕಣ್ಣಿಗೆ ಮಣ್ಣೆರೆರಚುವ ಕಾರ್ಯಮಾಡಿ ಕೈ ತೊಳೆದುಕೊಂಡಿದ್ದರು.
ಆದರೆ ಮಳೆ ಮುಗಿಯುತ್ತಿದ್ದಂತೆ ಅಲ್ಲಲ್ಲಿ ಡಾಮರು ಎದ್ದು ಹೋಗಿ, ಅಲ್ಲಲ್ಲಿ ಹೊಂಡ ಗುಂಡಿಗಳು ತುಂಬಿಕೊಂಡಿತ್ತು. ಅದರ ಗುಂಡಿಗಳ ತಾತ್ಕಾಲಿಕ ಶಮನಕ್ಕಾಗಿ ಗುತ್ತಿಗೆದಾರರು ಗುಂಡಿಗಳಿಗೆ ಜಲ್ಲಿ ಕಲ್ಲು ಹಾಕಿ ಮುಚ್ಚಿದ್ದಾರೆ‌.
ಘನ ಗಾತ್ರದ ವಾಹನಗಳು ಹೋಗುವ ರಭಸಕ್ಕೆ ಜಲ್ಲಿ ಕಲ್ಲುಗಳು ಗುಂಡಿಯಿಂದ ಮೇಲಕ್ಕೆ ಬಂದು ರಸ್ತೆಯೆಲ್ಲಾ ಹರಡಿಕೊಂಡಿದ್ದು, ದ್ವಿಚಕ್ರವಾಹನಸವಾರರು ರಾತ್ರಿ ವೇಳೆ ಬಿದ್ದು ಕೈಕಾಲಿಗೆ ಗಾಯ ಮಾಡಿಕೊಂಡ ಘಟನೆಗಳು ನಡೆದಿದೆ.
ಗಾಯಗೊಂಡ ವ್ಯಕ್ತಿಗಳು ರಸ್ತೆ ಗುತ್ತಿಗೆದಾರರ ಮೇಲೆ ಕಾನೂನು ಕ್ರಮಕ್ಕೆ ದೂರು ನೀಡುವ ಬದಲು ಹಿಡಿಶಾಪ ಹಾಕಿ ಸುಮ್ಮನಾಗಿದ್ದಾರೆ.

ಮಳೆ ನಿಂತ ಕೂಡಲೇ ಕಾಮಗಾರಿ ಆರಂಭ:
ಸೊರ್ನಾಡು – ಮುಲಾರಪಟ್ನ ರಸ್ತೆಯ ಒಂದು ಪ್ರಥಮ ಹಂತದ ಡಾಮರು ಕಾಮಗಾರಿ ನಡೆದಿದೆ.ಇನ್ನೊಂದು ಹಂತದ ಡಾಮರು ಕಾರ್ಯ ಶೀಘ್ರವಾಗಿ ಆರಂಭಿಸಲು ಗುತ್ತಿಗೆ ವಹಿಸಿಕೊಂಡ ಜೆ.ಡಿ.ಸುವರ್ಣ ಕಂಪೆನಿಗೆ ಸೂಚಿಸಿದ್ದೇ‌ನೆ. ಮಳೆಯ ಕಾರಣ ಡಾಮರು ಪ್ಲಾಂಟ್ ಆರಂಭವಾಗಿಲ್ಲ.ಮಳೆ ನಿಂತ ಕೂಡಲೇ ಎರಡನೇ ಲೇಯರ್ ಡಾಮರು ಕಾಮಗಾರಿ ಆರಂಭಗೊಳ್ಳಲಿದೆ. ಗುಂಡಿ ಮುಚ್ಚಲು ಹಾಕಲಾದ ಜಲ್ಲಿಕಲ್ಲಿನಿಂದ ವಾಹನಸವಾರರಿಗೆ ತೊಂದರೆಯಾಗಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಶೀಘ್ರವಾಗಿ ಕಾಮಗಾರಿ ಆರಂಭಿಸಲು ತಿಳಿಸಿದ್ದೇನೆ ಎಂದು ಪ.ಡಬ್ಲೂ.ಡಿ.ಇಂಜಿನಿಯರ್ ಶಿವಪ್ರಕಾಶ್ ತಿಳಿಸಿದ್ದಾರೆ.
ನೀರಿನ ಪೈಪ್‌ಲೈನ್‌ನಿಂದ ಕಾಮಗಾರಿಗೆ ತೊಡಕು:
ರಸ್ತೆ ಬದಿಯಲ್ಲಿ ಜೆ.ಜೆ.ಎಮ್ ನೀರು ಸರಬರಾಜು ಮಾಡುವ ಪೈಪ್ ಲೈನ್ ಕಾಮಗಾರಿಯವರು ಕಾಮಗಾರಿ ನಡೆಸದೆ ಅರ್ಧಕ್ಕೆ ನಿಲ್ಲಿಸಿ ಹೋಗಿದ್ದಾರೆ. ಹಾಗಾಗಿ ರಸ್ತೆಯೆಲ್ಲಾ ಹಾಳಾಗಿದ್ದು ಇವರ ಮೇಲೆ ಕ್ರಮಕ್ಕಾಗಿ ಮೂರು ಬಾರಿ ಪತ್ರ ಬರೆದಿದ್ದೇನೆ. ಇದರ ಜೊತೆ ಏರ್ ಟೆಲ್ ಕಂಪೆನಿಯವರು ರಸ್ತೆ ಬದಿ ನಿಯಮ ಮೀರಿ ಕೇಬಲ್ ಅಳವಡಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಲ್ಲದೆ ಅವರ ಜೆಸಿಬಿ ಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುವಂತೆ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಪಿ.ಡಬ್ಲೂಡಿ ಇಂಜಿನಿಯರ್ ಶಿವಪ್ರಕಾಶ್ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist